Homeಕರ್ನಾಟಕಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳು ಬಾರದ ಕಾರಣ ಸಂಸದ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂದು ದ್ವೇಷ ಹಬ್ಬಿಸುತ್ತಿರುವವರ ವಿರುದ್ಧ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು, ಮುಸಲ್ಮಾನರ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿದ ದಸಂಸ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ಗುಜರಿ ವಸ್ತುಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಮ್ಮ ಹಳ್ಳಿಗಳಿಗೆ ಮುಸ್ಲಿಂ ಬಾಂಧವರು ವ್ಯಾಪಾರಕ್ಕೆ ಬರುತ್ತಿಲ್ಲ. ಹೀಗಾಗಿ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಸಂಸದರ ಮನೆಯ ಮುಂದೆ ಸಾಮಾನು ಸರಂಜಾಮಗಳೊಂದಿಗೆ ತೆರಳಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮುಂದಾಳತ್ವ ವಹಿಸಿದ್ದರು. ಹಲವಾರು ಕಾರ್ಯಕರ್ತರು, ಮಹಿಳೆಯರು ಚೀಲದಲ್ಲಿ ಹಳೆ ಸಾಮಾನು, ಖಾಲಿ ಬಾಟಲ್, ಹುಣಸೇ ಪಿಚ್ಚಿ, ಟಯರ್ ಟ್ಯೂಬ್, ಹಳೆ ಕಬ್ಬಿಣಗಳನ್ನು ಆಟೋದಲ್ಲಿ ತೆಗೆದುಕೊಂಡು ಬಂದಿದ್ದರು. ನಗರದ ವಿಜಯ ನಗರದ ನಾಲ್ಕನೆ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹರ ಮನೆಗೆ ಆಗಮಿಸಿ ಅವರಿಗೆ ಮಾರಾಟ ಮಾಡಲು ಯತ್ನಿಸಿದರು.

ಸಂಸದ ಪ್ರತಾಪ್ ಸಿಂಹ ಅವರ ಮನೆಯ ಮುಂಭಾಗಕ್ಕೆ ತೆರಳದಂತೆ ರಿಂಗ್ ರಸ್ತೆಯ ಕನ್ನಡ ವೃತ್ತದಲ್ಲೇ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿರಿ: ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಕ್ರೋಶ ವ್ಯಕ್ತಪಡಿಸಿ, “ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರುಗಳು ಮುಸ್ಲಿಮ್‍ ವರ್ತಕರುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಹಳ್ಳಿಗಳು ಬಡಾವಣೆಗಳಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ಮುಸ್ಲಿಮ್ ಬಂಧುಗಳ ಭಯದಿಂದ ಬರುತ್ತಿಲ್ಲ. ಇದರಿಂದ ನಮ್ಮ ಬಳಿ ಹಳೆ ಬಾಟಲ್, ಕಾಲಿ ಸೀಸ, ಹುಣಸೆ ಪಿಚ್ಚಿ, ಹಳೆ ಟಯರ್ ಟ್ಯೂಬ್ ಗಳು ಸಾಕಷ್ಟು ಉಳಿದುಕೊಂಡಿವೆ. ಅವುಗಳನ್ನು ಸಂಸದ ಪ್ರತಾಪ್ ಸಿಂಹ ಕೊಂಡುಕೊಂಡು ನಮಗೆ ಹಣ ನೀಡಬೇಕು. ನಾವು ಅವರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಲು ಬಂದಿಲ್ಲ. ನಮ್ಮ ವಸ್ತುಗಳನ್ನು ಸಂಸದರು ಖರೀದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಚೋರನಹಳ್ಳಿ ಶಿವಣ್ಣ ಮಾತನಾಡಿ, “ಸರ್ವಜನಾಂಗದ ಶಾಂತಿ ತೋಟದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಿಕೊಂಡು ತೊಂದರೆ ಕೊಡಲಾಗುತ್ತಿದೆ. ಹಿಜಾಬ್, ಹಲಾಲ್ ಮಾಂಸ, ಮುಸ್ಲಿಮರ ವ್ಯಾಪಾರ ಹೆಸರಿನಲ್ಲಿ ಅಡಚಣೆ ಉಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ವೆಂಕಟೇಶ್, ಜಯಕುಮಾರ್ ಸೇರಿದಂತೆ ಹಲವರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಾತಿನ ಚಕಮಕಿ ನಡೆದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಶಿವಶಂಕರ್ ಹಾಜರಿದ್ದರು. ನೆಲೆಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್, ವರುಣಾ ಮಹೇಶ್, ಚೋರನಹಳ್ಳಿ ಮಹದೇವಸ್ವಾಮಿ, ಬುಗತಹಳ್ಳಿ ದೇವರಾಜು, ಪಡುವಾರಹಳ್ಳಿ ಭಾಗ್ಯಮ್ಮ, ವನಿತಾ, ಬೊಮ್ಮನಹಳ್ಳಿ ಶಂಕರ್ ನಂಜನಗೂಡು ಶಿವಮೂರ್ತಿ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...