Homeಕರ್ನಾಟಕಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳು ಬಾರದ ಕಾರಣ ಸಂಸದ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂದು ದ್ವೇಷ ಹಬ್ಬಿಸುತ್ತಿರುವವರ ವಿರುದ್ಧ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು, ಮುಸಲ್ಮಾನರ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿದ ದಸಂಸ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ಗುಜರಿ ವಸ್ತುಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಮ್ಮ ಹಳ್ಳಿಗಳಿಗೆ ಮುಸ್ಲಿಂ ಬಾಂಧವರು ವ್ಯಾಪಾರಕ್ಕೆ ಬರುತ್ತಿಲ್ಲ. ಹೀಗಾಗಿ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಸಂಸದರ ಮನೆಯ ಮುಂದೆ ಸಾಮಾನು ಸರಂಜಾಮಗಳೊಂದಿಗೆ ತೆರಳಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮುಂದಾಳತ್ವ ವಹಿಸಿದ್ದರು. ಹಲವಾರು ಕಾರ್ಯಕರ್ತರು, ಮಹಿಳೆಯರು ಚೀಲದಲ್ಲಿ ಹಳೆ ಸಾಮಾನು, ಖಾಲಿ ಬಾಟಲ್, ಹುಣಸೇ ಪಿಚ್ಚಿ, ಟಯರ್ ಟ್ಯೂಬ್, ಹಳೆ ಕಬ್ಬಿಣಗಳನ್ನು ಆಟೋದಲ್ಲಿ ತೆಗೆದುಕೊಂಡು ಬಂದಿದ್ದರು. ನಗರದ ವಿಜಯ ನಗರದ ನಾಲ್ಕನೆ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹರ ಮನೆಗೆ ಆಗಮಿಸಿ ಅವರಿಗೆ ಮಾರಾಟ ಮಾಡಲು ಯತ್ನಿಸಿದರು.

ಸಂಸದ ಪ್ರತಾಪ್ ಸಿಂಹ ಅವರ ಮನೆಯ ಮುಂಭಾಗಕ್ಕೆ ತೆರಳದಂತೆ ರಿಂಗ್ ರಸ್ತೆಯ ಕನ್ನಡ ವೃತ್ತದಲ್ಲೇ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿರಿ: ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಕ್ರೋಶ ವ್ಯಕ್ತಪಡಿಸಿ, “ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರುಗಳು ಮುಸ್ಲಿಮ್‍ ವರ್ತಕರುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಹಳ್ಳಿಗಳು ಬಡಾವಣೆಗಳಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ಮುಸ್ಲಿಮ್ ಬಂಧುಗಳ ಭಯದಿಂದ ಬರುತ್ತಿಲ್ಲ. ಇದರಿಂದ ನಮ್ಮ ಬಳಿ ಹಳೆ ಬಾಟಲ್, ಕಾಲಿ ಸೀಸ, ಹುಣಸೆ ಪಿಚ್ಚಿ, ಹಳೆ ಟಯರ್ ಟ್ಯೂಬ್ ಗಳು ಸಾಕಷ್ಟು ಉಳಿದುಕೊಂಡಿವೆ. ಅವುಗಳನ್ನು ಸಂಸದ ಪ್ರತಾಪ್ ಸಿಂಹ ಕೊಂಡುಕೊಂಡು ನಮಗೆ ಹಣ ನೀಡಬೇಕು. ನಾವು ಅವರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಲು ಬಂದಿಲ್ಲ. ನಮ್ಮ ವಸ್ತುಗಳನ್ನು ಸಂಸದರು ಖರೀದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಚೋರನಹಳ್ಳಿ ಶಿವಣ್ಣ ಮಾತನಾಡಿ, “ಸರ್ವಜನಾಂಗದ ಶಾಂತಿ ತೋಟದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಿಕೊಂಡು ತೊಂದರೆ ಕೊಡಲಾಗುತ್ತಿದೆ. ಹಿಜಾಬ್, ಹಲಾಲ್ ಮಾಂಸ, ಮುಸ್ಲಿಮರ ವ್ಯಾಪಾರ ಹೆಸರಿನಲ್ಲಿ ಅಡಚಣೆ ಉಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ವೆಂಕಟೇಶ್, ಜಯಕುಮಾರ್ ಸೇರಿದಂತೆ ಹಲವರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಾತಿನ ಚಕಮಕಿ ನಡೆದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಶಿವಶಂಕರ್ ಹಾಜರಿದ್ದರು. ನೆಲೆಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್, ವರುಣಾ ಮಹೇಶ್, ಚೋರನಹಳ್ಳಿ ಮಹದೇವಸ್ವಾಮಿ, ಬುಗತಹಳ್ಳಿ ದೇವರಾಜು, ಪಡುವಾರಹಳ್ಳಿ ಭಾಗ್ಯಮ್ಮ, ವನಿತಾ, ಬೊಮ್ಮನಹಳ್ಳಿ ಶಂಕರ್ ನಂಜನಗೂಡು ಶಿವಮೂರ್ತಿ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...