Homeಕರ್ನಾಟಕಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳು ಬಾರದ ಕಾರಣ ಸಂಸದ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂದು ದ್ವೇಷ ಹಬ್ಬಿಸುತ್ತಿರುವವರ ವಿರುದ್ಧ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು, ಮುಸಲ್ಮಾನರ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿದ ದಸಂಸ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ಗುಜರಿ ವಸ್ತುಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಮ್ಮ ಹಳ್ಳಿಗಳಿಗೆ ಮುಸ್ಲಿಂ ಬಾಂಧವರು ವ್ಯಾಪಾರಕ್ಕೆ ಬರುತ್ತಿಲ್ಲ. ಹೀಗಾಗಿ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಸಂಸದರ ಮನೆಯ ಮುಂದೆ ಸಾಮಾನು ಸರಂಜಾಮಗಳೊಂದಿಗೆ ತೆರಳಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮುಂದಾಳತ್ವ ವಹಿಸಿದ್ದರು. ಹಲವಾರು ಕಾರ್ಯಕರ್ತರು, ಮಹಿಳೆಯರು ಚೀಲದಲ್ಲಿ ಹಳೆ ಸಾಮಾನು, ಖಾಲಿ ಬಾಟಲ್, ಹುಣಸೇ ಪಿಚ್ಚಿ, ಟಯರ್ ಟ್ಯೂಬ್, ಹಳೆ ಕಬ್ಬಿಣಗಳನ್ನು ಆಟೋದಲ್ಲಿ ತೆಗೆದುಕೊಂಡು ಬಂದಿದ್ದರು. ನಗರದ ವಿಜಯ ನಗರದ ನಾಲ್ಕನೆ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹರ ಮನೆಗೆ ಆಗಮಿಸಿ ಅವರಿಗೆ ಮಾರಾಟ ಮಾಡಲು ಯತ್ನಿಸಿದರು.

ಸಂಸದ ಪ್ರತಾಪ್ ಸಿಂಹ ಅವರ ಮನೆಯ ಮುಂಭಾಗಕ್ಕೆ ತೆರಳದಂತೆ ರಿಂಗ್ ರಸ್ತೆಯ ಕನ್ನಡ ವೃತ್ತದಲ್ಲೇ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿರಿ: ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಕ್ರೋಶ ವ್ಯಕ್ತಪಡಿಸಿ, “ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರುಗಳು ಮುಸ್ಲಿಮ್‍ ವರ್ತಕರುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಹಳ್ಳಿಗಳು ಬಡಾವಣೆಗಳಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ಮುಸ್ಲಿಮ್ ಬಂಧುಗಳ ಭಯದಿಂದ ಬರುತ್ತಿಲ್ಲ. ಇದರಿಂದ ನಮ್ಮ ಬಳಿ ಹಳೆ ಬಾಟಲ್, ಕಾಲಿ ಸೀಸ, ಹುಣಸೆ ಪಿಚ್ಚಿ, ಹಳೆ ಟಯರ್ ಟ್ಯೂಬ್ ಗಳು ಸಾಕಷ್ಟು ಉಳಿದುಕೊಂಡಿವೆ. ಅವುಗಳನ್ನು ಸಂಸದ ಪ್ರತಾಪ್ ಸಿಂಹ ಕೊಂಡುಕೊಂಡು ನಮಗೆ ಹಣ ನೀಡಬೇಕು. ನಾವು ಅವರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಲು ಬಂದಿಲ್ಲ. ನಮ್ಮ ವಸ್ತುಗಳನ್ನು ಸಂಸದರು ಖರೀದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಚೋರನಹಳ್ಳಿ ಶಿವಣ್ಣ ಮಾತನಾಡಿ, “ಸರ್ವಜನಾಂಗದ ಶಾಂತಿ ತೋಟದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಿಕೊಂಡು ತೊಂದರೆ ಕೊಡಲಾಗುತ್ತಿದೆ. ಹಿಜಾಬ್, ಹಲಾಲ್ ಮಾಂಸ, ಮುಸ್ಲಿಮರ ವ್ಯಾಪಾರ ಹೆಸರಿನಲ್ಲಿ ಅಡಚಣೆ ಉಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ವೆಂಕಟೇಶ್, ಜಯಕುಮಾರ್ ಸೇರಿದಂತೆ ಹಲವರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಾತಿನ ಚಕಮಕಿ ನಡೆದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಶಿವಶಂಕರ್ ಹಾಜರಿದ್ದರು. ನೆಲೆಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್, ವರುಣಾ ಮಹೇಶ್, ಚೋರನಹಳ್ಳಿ ಮಹದೇವಸ್ವಾಮಿ, ಬುಗತಹಳ್ಳಿ ದೇವರಾಜು, ಪಡುವಾರಹಳ್ಳಿ ಭಾಗ್ಯಮ್ಮ, ವನಿತಾ, ಬೊಮ್ಮನಹಳ್ಳಿ ಶಂಕರ್ ನಂಜನಗೂಡು ಶಿವಮೂರ್ತಿ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...