Homeಕರ್ನಾಟಕಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಮರ ವ್ಯಾಪಾರಕ್ಕೆ ವಿರೋಧಿಸಿರುವ ಪ್ರತಾಪ್‌ ಸಿಂಹ ಗುಜರಿ ಸಾಮಾನು ಖರೀದಿಸಲಿ; ದಸಂಸ ವಿನೂತನ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳು ಬಾರದ ಕಾರಣ ಸಂಸದ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಡಿಎಸ್‌ಎಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಮುಸ್ಲಿಮರೊಂದಿಗೆ ವ್ಯಾಪಾರ ಮಾಡಬಾರದು ಎಂದು ದ್ವೇಷ ಹಬ್ಬಿಸುತ್ತಿರುವವರ ವಿರುದ್ಧ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರು, ಮುಸಲ್ಮಾನರ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದನ್ನು ವಿರೋಧಿಸಿದ ದಸಂಸ ಕಾರ್ಯಕರ್ತರು, ಸಂಸದ ಪ್ರತಾಪ್ ಸಿಂಹ ಗುಜರಿ ವಸ್ತುಗಳನ್ನು ಖರೀದಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಮ್ಮ ಹಳ್ಳಿಗಳಿಗೆ ಮುಸ್ಲಿಂ ಬಾಂಧವರು ವ್ಯಾಪಾರಕ್ಕೆ ಬರುತ್ತಿಲ್ಲ. ಹೀಗಾಗಿ ಪ್ರತಾಪ್‌‌ ಸಿಂಹ ಹಳೇ ಪೇಪರ್‌, ಖಾಲಿ ಬಾಟಲ್‌ ಹಾಗೂ ಇತರ ಹಳೆಯ ವಸ್ತುಗಳನ್ನು ಖರೀದಿಸಬೇಕು ಎಂದು ಸಂಸದರ ಮನೆಯ ಮುಂದೆ ಸಾಮಾನು ಸರಂಜಾಮಗಳೊಂದಿಗೆ ತೆರಳಿದ ದಸಂಸ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಮುಂದಾಳತ್ವ ವಹಿಸಿದ್ದರು. ಹಲವಾರು ಕಾರ್ಯಕರ್ತರು, ಮಹಿಳೆಯರು ಚೀಲದಲ್ಲಿ ಹಳೆ ಸಾಮಾನು, ಖಾಲಿ ಬಾಟಲ್, ಹುಣಸೇ ಪಿಚ್ಚಿ, ಟಯರ್ ಟ್ಯೂಬ್, ಹಳೆ ಕಬ್ಬಿಣಗಳನ್ನು ಆಟೋದಲ್ಲಿ ತೆಗೆದುಕೊಂಡು ಬಂದಿದ್ದರು. ನಗರದ ವಿಜಯ ನಗರದ ನಾಲ್ಕನೆ ಹಂತದಲ್ಲಿರುವ ಸಂಸದ ಪ್ರತಾಪ್ ಸಿಂಹರ ಮನೆಗೆ ಆಗಮಿಸಿ ಅವರಿಗೆ ಮಾರಾಟ ಮಾಡಲು ಯತ್ನಿಸಿದರು.

ಸಂಸದ ಪ್ರತಾಪ್ ಸಿಂಹ ಅವರ ಮನೆಯ ಮುಂಭಾಗಕ್ಕೆ ತೆರಳದಂತೆ ರಿಂಗ್ ರಸ್ತೆಯ ಕನ್ನಡ ವೃತ್ತದಲ್ಲೇ ಕಾರ್ಯಕರ್ತರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿರಿ: ರಂಜಾನ್‌‌ನಲ್ಲಿ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಸಾರ್ವಜನಿಕವಾಗಿ ಆಹಾರ ಸೇವಿಸುವುದನ್ನು ನಿಷೇಧಿಸಿದರೆ ಸರಿಯೆ?: ಬಿಜೆಪಿಯ ಮಾಂಸ ನಿಷೇಧದ ಬಗ್ಗೆ ಒಮರ್‌‌ ಅಬ್ದುಲ್ಲಾ ಪ್ರತಿಕ್ರಿಯೆ

ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ ಆಕ್ರೋಶ ವ್ಯಕ್ತಪಡಿಸಿ, “ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸಂಘಪರಿವಾರ ಮತ್ತು ಬಿಜೆಪಿ ನಾಯಕರುಗಳು ಮುಸ್ಲಿಮ್‍ ವರ್ತಕರುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ನಮ್ಮ ಹಳ್ಳಿಗಳು ಬಡಾವಣೆಗಳಿಗೆ ವ್ಯಾಪಾರಕ್ಕಾಗಿ ಬರುತ್ತಿದ್ದ ಮುಸ್ಲಿಮ್ ಬಂಧುಗಳ ಭಯದಿಂದ ಬರುತ್ತಿಲ್ಲ. ಇದರಿಂದ ನಮ್ಮ ಬಳಿ ಹಳೆ ಬಾಟಲ್, ಕಾಲಿ ಸೀಸ, ಹುಣಸೆ ಪಿಚ್ಚಿ, ಹಳೆ ಟಯರ್ ಟ್ಯೂಬ್ ಗಳು ಸಾಕಷ್ಟು ಉಳಿದುಕೊಂಡಿವೆ. ಅವುಗಳನ್ನು ಸಂಸದ ಪ್ರತಾಪ್ ಸಿಂಹ ಕೊಂಡುಕೊಂಡು ನಮಗೆ ಹಣ ನೀಡಬೇಕು. ನಾವು ಅವರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಲು ಬಂದಿಲ್ಲ. ನಮ್ಮ ವಸ್ತುಗಳನ್ನು ಸಂಸದರು ಖರೀದಿಸಲು ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಚೋರನಹಳ್ಳಿ ಶಿವಣ್ಣ ಮಾತನಾಡಿ, “ಸರ್ವಜನಾಂಗದ ಶಾಂತಿ ತೋಟದಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಮುಸ್ಲಿಮರನ್ನು ಟಾರ್ಗೆಟ್ ಮಾಡಿಕೊಂಡು ತೊಂದರೆ ಕೊಡಲಾಗುತ್ತಿದೆ. ಹಿಜಾಬ್, ಹಲಾಲ್ ಮಾಂಸ, ಮುಸ್ಲಿಮರ ವ್ಯಾಪಾರ ಹೆಸರಿನಲ್ಲಿ ಅಡಚಣೆ ಉಂಟು ಮಾಡಲಾಗುತ್ತಿದೆ. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಥಳದಲ್ಲಿದ್ದ ಇನ್ ಸ್ಪೆಕ್ಟರ್ ವೆಂಕಟೇಶ್, ಜಯಕುಮಾರ್ ಸೇರಿದಂತೆ ಹಲವರು ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಾತಿನ ಚಕಮಕಿ ನಡೆದಾಗ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.

ಪ್ರತಿಭಟನಾ ಸ್ಥಳದಲ್ಲಿ ಎಸಿಪಿ ಶಿವಶಂಕರ್ ಹಾಜರಿದ್ದರು. ನೆಲೆಹಿನ್ನೆಲೆ ಕೆ.ಆರ್.ಗೋಪಾಲಕೃಷ್ಣ, ಹಿರಿಯ ರಂಗಕರ್ಮಿ ಕೃಷ್ಣಪ್ರಸಾದ್, ವರುಣಾ ಮಹೇಶ್, ಚೋರನಹಳ್ಳಿ ಮಹದೇವಸ್ವಾಮಿ, ಬುಗತಹಳ್ಳಿ ದೇವರಾಜು, ಪಡುವಾರಹಳ್ಳಿ ಭಾಗ್ಯಮ್ಮ, ವನಿತಾ, ಬೊಮ್ಮನಹಳ್ಳಿ ಶಂಕರ್ ನಂಜನಗೂಡು ಶಿವಮೂರ್ತಿ ಸೇರಿದಂತೆ ಹಲವಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಚರಕದ ಮುಂದೆ ಕೂತ ತೇಜಸ್ವಿ ಸೂರ್ಯ: ಮಿತಿಮೀರಿದ ಬೂಟಾಟಿಕೆ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...