Homeಕರ್ನಾಟಕಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

ಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರು ಬಾಬಾ ಸಾಹೇಬರ ಪ್ರತಿಮೆ ಮುಂದೆ ಮಂಡಿಯೂರಿ ಕ್ಷಮೆಯಾಚಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಿತು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಸಂವಿಧಾನ ಮತ್ತು ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವಷ್ಟು ಬಂದ್ ಮತ್ತು ಪ್ರತಿಭಟನೆಗಳು ಬಹುಷಃ ಹಿಂದೆದೂ ನಡೆದಿಲ್ಲ; ಇದು ದಲಿತ ಚಳವಳಿಯ ತಾಕತ್ತು. ವಿವಿಧ ಜಿಲ್ಲೆಗಳಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ. ಅವು ಯಶಸ್ವಿಯಾಗಲೇಬೇಕು ಎನ್ನುವ ಕಾರಣಕ್ಕೆ ಹಲವು ಸಮುದಾಯಗಳು ಶ್ರಮಿಸಿವೆ. ಆದ್ದರಿಂದ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕಾಯಿತು” ಎಂದರು.

“ಬೇರೆಬೇರೆ ಜಿಲ್ಲೆಗಳಿಂದ ಜನರು ಬಸ್ಸು, ರೈಲು ಮತ್ತು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ವಿವಿಧ ಗ್ರಾಮ, ಕುಗ್ರಾಮ ಮತ್ತು ಹಾಡಿಗಳಿಂದ ಕಾರ್ಯಕರ್ತರು ಇಲ್ಲಿಗೆ ಬಂದಿದ್ದಾರೆ. ನೀವು ಬಂದಿರುವ ಉದ್ದೇಶ ಈಡೇರಬೇಕಾದರೆ, ನಾವೇನು ಮಾಡಬೇಕು ಎಂಬ ಸ್ಪಷ್ಟತೆ ಇರಬೇಕು. ರಾಜಕೀಯ ಪಕ್ಷಗಳು ಬಸ್‌ಗಳಲ್ಲಿ ಜನರನ್ನು ತುಂಬಿಕೊಂಡು ಬಂದು ಮೈದಾನಗಳಲ್ಲಿ ಬಿಟ್ಟು, ಬಿರಿಯಾನಿ ಹಾಗೂ ಐದು ನೂರು ರೂಪಾಯಿ ಕೈಗೆ ಕೊಟ್ಟರೆ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬಾಬಾ ಸಾಹೇಬರ ಹೋರಾಟದ ರಕ್ತ ಮತ್ತು ಬೆವರಿನ ಪ್ರತಿಫಲ ಉಣ್ಣುತ್ತಿರುವ ಪ್ರತಿಯೊಂದು ಸಮುದಾಯ ಕೂಡ ಈ ವಿಚಾರವನ್ನು ಉಗ್ರವಾಗಿ ಖಂಡಿಸಬೇಕಾಗಿತ್ತು. ಆದರೆ, ಇವತ್ತು ದಲಿತ ಸಮುದಾಯ ಒಡಕಿನತ್ತ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶಿವಸುಂದರ್ ಅವರ ‘ಸಂವಿಧಾನ v/s ಸಂಘಿಗಳ ಸುಳ್ಳು ಅಭಿಯಾನ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

“ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಸೇವಾಲಾಲ್ ಸ್ವಾಮೀಜಿ ಇಂದು ಎಲ್ಲಿದ್ದಾರೆ. ಇವರೆಲ್ಲಾ ಬಾಬಾ ಸಾಹೇಬರ ಋಣ ಉಂಡವರಲ್ಲವೇ? ದಲಿತ ರಾಜಕಾರಣಿಗಳ ಬಾಯಿಗೆ ಏನಾಗಿದೆ..? ಇವರ ಬಾಯಿಗೆ ಯಾರಾದರೂ ಬೀಗ ಹಾಕಿದ್ದಾರೆಯೇ? ಬಾಬಾ ಸಾಹೇಬರಿಗೆ ಅವಮಾನ ಆದಾಗ ಪ್ರತಿಭಟಿಸಲಾರದವರಿಗೆ ಮಂತ್ರಿಗಿರಿ ಮತ್ತು ರಾಜಕೀಯ ಅಧಿಕಾರ ಯಾಕೆ ಬೇಕು, ಇವರೆಲ್ಲಾ ಅವಕಾಶ ಸಿಗದೇ ಇದ್ದಾಗ ಅಳುತ್ತಾರೆ. ಯಾವ ಸಮಾಜಕ್ಕೆ ಹುಕುಂದಾರಿಕೆ ಬರುವುದಿಲ್ಲವೋ.. ಆ ಸಮಾಜ ನರಸತ್ತ ಸಮಾಜ ಆಗಿರುತ್ತದೆ, ಅದರ ರಾಜಕಾರಣಿಗಳು ನರಸತ್ತವರಾಗಿರುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ನಾವು ಒಟ್ಟಿಗೆ ಸೇರುತ್ತೇವೆ.. ಮಾತನಾಡುತ್ತೇವೆ ಎಂದಾಗ ರಾಜಕೀಯ ಪಕ್ಷಗಳು ಹಾಗೆ ಮಾಡಬೇಡಿ ಎನ್ನುತ್ತಾರೆ. ನಾವು ಮಾತನಾಡಿದರೆ ನಿಮಗೇನು ಸಮಸ್ಯೆ? ನಮಗೆ ನಾವೇ ಹೈಕಮಾಂಡ್, ಸಂವಿಧಾನ ನಮ್ಮ ಹೈಕಮಾಂಡ್” ಎಂದರು.

“ನಮ್ಮ ವಿದ್ಯಾರ್ಥಿಗಳು ಹಾಗೂ ಯುವಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂವಿಧಾನ ಮತ್ತು ಮನುವಾದದ ನಡುವಿನ ತಾರ್ಕಿಕ ಸಂಘರ್ಷಕ್ಕೆ ಬಂದು ನಿಂತಿದ್ದೇವೆ. ಮನುಸ್ಮೃತಿ ಸಾವಿರಾರು ವರ್ಷಗಳಿಂದ ಈ ದೇಶದ ದುಡಿಯುವ ಜನರನ್ನು ಹಾಗೂ ಶೂದ್ರಾತಿ ಶೂದ್ರರನ್ನು ಕಾಲಡಿಯಲ್ಲಿ ಹಾಕಿ ತುಳಿಯುತ್ತಿತ್ತು. ಅಂತ ಮನುಸ್ಮೃತಿಯ ಕಾಲನ್ನು ಮುರಿದಿದ್ದು ಬಾಬಾ ಸಾಹೇಬರ ಸಂವಿಧಾನ; ಅಂತ ಸಂವಿಧಾನದ ಮೂಲ ಆಶಯಕ್ಕೆ ಇಂದು ದಕ್ಕೆಯಾಗುತ್ತಿದೆ. ನಮ್ಮನ್ನೂ ಗೌರವಿಸುವ ಸಂವಿಧಾನ ಜಾರಿಗೆ ಬರಲಿ ಎಂದು ಉಡುಪಿ ಸ್ವಾಮಿ ಹೇಳುತ್ತಾರೆ.. ಉಡುಪಿ ಸ್ವಾಮಿಯನ್ನು ಗೌರವಿಸುವ ಸಂವಿಧಾನ ಯಾವುದು.. ಮನುಸ್ಮೃತಿನಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಕುಲಸ್ತರು ಹಾಗೂ ಅಂಬೇಡ್ಕರ್ ವಿಚಾರಧಾರೆ ಎಂದರೆ ಜೇನುಗೂಡು ಇದ್ದಂತೆ, ಅಂತಹ ಜೇನುಗೂಡಿಗೆ ಕೈ ಹಾಕಿದರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜೇನು ಸಿಹಿಯಾಗಿದ್ದರೂ ಅದರ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಪೂರ್ವಿಕರು ನಮಗೆ ಅಹಿಂಸೆ ಬೋಧಿಸಿದ್ದಾರೆ. ಬುದ್ಧ, ಬಸವಣ್ಣ, ಫುಲೆ ದಂಪತಿಗಳು, ನಾಲ್ವಡಿ ಕೃಷ್ಣರಾಜ ಒಡೆಯರು ನಮಗೆ ಶಾಂತಿಮಂತ್ರ ಬೋಧಿಸಿದ್ದಾರೆ. ಆ ಶಾಂತಿಮಂತ್ರದಿಂದ ದೇಶವನ್ನು ಮುನ್ನಡೆಸುತ್ತಿದ್ದೇವೆ. ನಾವು ಅಹಿಂಸಾ ಮಾರ್ಗ ಹಿಡಿದಿದ್ದರೆ ನೀವು ಏನಾಗುತ್ತಿದ್ರಿ ಎಂಬುದನ್ನು ಕಲ್ಪನೆ ಮಾಡಿಕೊಳ್ಳಿ. ಆದ್ದರಿಂದ, ತುಂಬಾ ಎಚ್ಚರಿಕೆಯಿಂದ ನೀವು ಮಾತನಾಡಬೇಕು. ಈ ದೇಶ ಇಂದು ಸೌಖ್ಯವಾಗಿದ್ದರೆ ಅದಕ್ಕೆ ಕಾರಣ ಅಸ್ಪೃಶ್ಯ ಸಮುದಾಯಗಳು ಎಂಬುದನ್ನು ನೀವು ಮರೆಯಬಾರದು” ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

“ಒಂದು ಕಡೆ ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ; ಮತ್ತೊಂದು ಕಡೆ ಗಾಂಧಿಯನ್ನು ಪೂಜಿಸುತ್ತಾರೆ. ಇಂತ ಅವಿವೇಕಿಗಳ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಇಂತವಗೆ ದಲಿತ ಸಮುದಾದಲ್ಲಿ ಗುಲಾಮರು ಹುಟ್ಟಿಕೊಳ್ಳುತ್ತಿದ್ದಾರೆ; ಆ ಗುಲಾಮರ ಬಗ್ಗೆ ಸಮುದಾಯ ಎಚ್ಚರವಾಗಿರಬೇಕು” ಎಂದು ಕಿವಿಮಾತು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ನಾವು ಕಾರಣ

“ಸರ್ಕಾರ ಕೂಡ ನಮ್ಮ ಬಗ್ಗೆ, ನಮ್ಮ ಬದುಕು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು. ಕೇವಲ ಭರವಸೆ ನೀಡಬಾರದು. ರಾಜ್ಯದಲ್ಲಿ ಜಾತ್ಯತೀತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮೂಲ ಕಾರಣ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಮಗೂ ಅಧಿಕಾರದಲ್ಲಿ ಪಾಲು ಕೊಡಬೇಕು; ಪಾಲು ಕೊಟ್ಟರೆ ಮಾತ್ರ ದಲಿತ ಸಮುದಾಯ ನಿಮ್ಮನ್ನು ಸಹಿಸಿಕೊಳ್ಳುತ್ತದೆ.. ಕೇವಲ ಓಟ್ ಹಾಕುವುದಕ್ಕೆ ಮಾತ್ರ ನಾವು ಸೀಮಿತವಾಗಿಲ್ಲ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಅಂಬೇಡ್ಕರ್ ಭಾರತ ರತ್ನ ಅಲ್ಲ.. ಅವರು ವಿಶ್ವ ರತ್ನವಾಗಿ ಜಗತ್ತಿನಲ್ಲಿ ರಾರಾಜಿಸುತ್ತಿದೆ. ನಾವು ಅವರ ಕುಡಿಗಳಾಗಿ ಸರಿಯಾದ ರೀತಿಯಲ್ಲಿ ಬಾಬಾ ಸಾಹೇಬರ ಚಿಂತನೆ ಮುಂದುವರಿಸಬೇಕು” ಎಂದರು.

ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ಇಂದೂಧರ ಹೊನ್ನಾಪುರ, ದಸಂಸ ರಾಜ್ಯ ಸಂಯೋಜಕರಾದ ವಿ.ನಾಗರಾಜ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವಾರು ದಸಂಸ ಮುಖಂಡರು ಇದ್ದರು.

ಇದನ್ನೂ ಓದಿ; ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...