Homeಕರ್ನಾಟಕಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

ಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರು ಬಾಬಾ ಸಾಹೇಬರ ಪ್ರತಿಮೆ ಮುಂದೆ ಮಂಡಿಯೂರಿ ಕ್ಷಮೆಯಾಚಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಿತು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಸಂವಿಧಾನ ಮತ್ತು ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವಷ್ಟು ಬಂದ್ ಮತ್ತು ಪ್ರತಿಭಟನೆಗಳು ಬಹುಷಃ ಹಿಂದೆದೂ ನಡೆದಿಲ್ಲ; ಇದು ದಲಿತ ಚಳವಳಿಯ ತಾಕತ್ತು. ವಿವಿಧ ಜಿಲ್ಲೆಗಳಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ. ಅವು ಯಶಸ್ವಿಯಾಗಲೇಬೇಕು ಎನ್ನುವ ಕಾರಣಕ್ಕೆ ಹಲವು ಸಮುದಾಯಗಳು ಶ್ರಮಿಸಿವೆ. ಆದ್ದರಿಂದ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕಾಯಿತು” ಎಂದರು.

“ಬೇರೆಬೇರೆ ಜಿಲ್ಲೆಗಳಿಂದ ಜನರು ಬಸ್ಸು, ರೈಲು ಮತ್ತು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ವಿವಿಧ ಗ್ರಾಮ, ಕುಗ್ರಾಮ ಮತ್ತು ಹಾಡಿಗಳಿಂದ ಕಾರ್ಯಕರ್ತರು ಇಲ್ಲಿಗೆ ಬಂದಿದ್ದಾರೆ. ನೀವು ಬಂದಿರುವ ಉದ್ದೇಶ ಈಡೇರಬೇಕಾದರೆ, ನಾವೇನು ಮಾಡಬೇಕು ಎಂಬ ಸ್ಪಷ್ಟತೆ ಇರಬೇಕು. ರಾಜಕೀಯ ಪಕ್ಷಗಳು ಬಸ್‌ಗಳಲ್ಲಿ ಜನರನ್ನು ತುಂಬಿಕೊಂಡು ಬಂದು ಮೈದಾನಗಳಲ್ಲಿ ಬಿಟ್ಟು, ಬಿರಿಯಾನಿ ಹಾಗೂ ಐದು ನೂರು ರೂಪಾಯಿ ಕೈಗೆ ಕೊಟ್ಟರೆ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬಾಬಾ ಸಾಹೇಬರ ಹೋರಾಟದ ರಕ್ತ ಮತ್ತು ಬೆವರಿನ ಪ್ರತಿಫಲ ಉಣ್ಣುತ್ತಿರುವ ಪ್ರತಿಯೊಂದು ಸಮುದಾಯ ಕೂಡ ಈ ವಿಚಾರವನ್ನು ಉಗ್ರವಾಗಿ ಖಂಡಿಸಬೇಕಾಗಿತ್ತು. ಆದರೆ, ಇವತ್ತು ದಲಿತ ಸಮುದಾಯ ಒಡಕಿನತ್ತ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶಿವಸುಂದರ್ ಅವರ ‘ಸಂವಿಧಾನ v/s ಸಂಘಿಗಳ ಸುಳ್ಳು ಅಭಿಯಾನ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

“ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಸೇವಾಲಾಲ್ ಸ್ವಾಮೀಜಿ ಇಂದು ಎಲ್ಲಿದ್ದಾರೆ. ಇವರೆಲ್ಲಾ ಬಾಬಾ ಸಾಹೇಬರ ಋಣ ಉಂಡವರಲ್ಲವೇ? ದಲಿತ ರಾಜಕಾರಣಿಗಳ ಬಾಯಿಗೆ ಏನಾಗಿದೆ..? ಇವರ ಬಾಯಿಗೆ ಯಾರಾದರೂ ಬೀಗ ಹಾಕಿದ್ದಾರೆಯೇ? ಬಾಬಾ ಸಾಹೇಬರಿಗೆ ಅವಮಾನ ಆದಾಗ ಪ್ರತಿಭಟಿಸಲಾರದವರಿಗೆ ಮಂತ್ರಿಗಿರಿ ಮತ್ತು ರಾಜಕೀಯ ಅಧಿಕಾರ ಯಾಕೆ ಬೇಕು, ಇವರೆಲ್ಲಾ ಅವಕಾಶ ಸಿಗದೇ ಇದ್ದಾಗ ಅಳುತ್ತಾರೆ. ಯಾವ ಸಮಾಜಕ್ಕೆ ಹುಕುಂದಾರಿಕೆ ಬರುವುದಿಲ್ಲವೋ.. ಆ ಸಮಾಜ ನರಸತ್ತ ಸಮಾಜ ಆಗಿರುತ್ತದೆ, ಅದರ ರಾಜಕಾರಣಿಗಳು ನರಸತ್ತವರಾಗಿರುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ನಾವು ಒಟ್ಟಿಗೆ ಸೇರುತ್ತೇವೆ.. ಮಾತನಾಡುತ್ತೇವೆ ಎಂದಾಗ ರಾಜಕೀಯ ಪಕ್ಷಗಳು ಹಾಗೆ ಮಾಡಬೇಡಿ ಎನ್ನುತ್ತಾರೆ. ನಾವು ಮಾತನಾಡಿದರೆ ನಿಮಗೇನು ಸಮಸ್ಯೆ? ನಮಗೆ ನಾವೇ ಹೈಕಮಾಂಡ್, ಸಂವಿಧಾನ ನಮ್ಮ ಹೈಕಮಾಂಡ್” ಎಂದರು.

“ನಮ್ಮ ವಿದ್ಯಾರ್ಥಿಗಳು ಹಾಗೂ ಯುವಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂವಿಧಾನ ಮತ್ತು ಮನುವಾದದ ನಡುವಿನ ತಾರ್ಕಿಕ ಸಂಘರ್ಷಕ್ಕೆ ಬಂದು ನಿಂತಿದ್ದೇವೆ. ಮನುಸ್ಮೃತಿ ಸಾವಿರಾರು ವರ್ಷಗಳಿಂದ ಈ ದೇಶದ ದುಡಿಯುವ ಜನರನ್ನು ಹಾಗೂ ಶೂದ್ರಾತಿ ಶೂದ್ರರನ್ನು ಕಾಲಡಿಯಲ್ಲಿ ಹಾಕಿ ತುಳಿಯುತ್ತಿತ್ತು. ಅಂತ ಮನುಸ್ಮೃತಿಯ ಕಾಲನ್ನು ಮುರಿದಿದ್ದು ಬಾಬಾ ಸಾಹೇಬರ ಸಂವಿಧಾನ; ಅಂತ ಸಂವಿಧಾನದ ಮೂಲ ಆಶಯಕ್ಕೆ ಇಂದು ದಕ್ಕೆಯಾಗುತ್ತಿದೆ. ನಮ್ಮನ್ನೂ ಗೌರವಿಸುವ ಸಂವಿಧಾನ ಜಾರಿಗೆ ಬರಲಿ ಎಂದು ಉಡುಪಿ ಸ್ವಾಮಿ ಹೇಳುತ್ತಾರೆ.. ಉಡುಪಿ ಸ್ವಾಮಿಯನ್ನು ಗೌರವಿಸುವ ಸಂವಿಧಾನ ಯಾವುದು.. ಮನುಸ್ಮೃತಿನಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಕುಲಸ್ತರು ಹಾಗೂ ಅಂಬೇಡ್ಕರ್ ವಿಚಾರಧಾರೆ ಎಂದರೆ ಜೇನುಗೂಡು ಇದ್ದಂತೆ, ಅಂತಹ ಜೇನುಗೂಡಿಗೆ ಕೈ ಹಾಕಿದರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜೇನು ಸಿಹಿಯಾಗಿದ್ದರೂ ಅದರ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಪೂರ್ವಿಕರು ನಮಗೆ ಅಹಿಂಸೆ ಬೋಧಿಸಿದ್ದಾರೆ. ಬುದ್ಧ, ಬಸವಣ್ಣ, ಫುಲೆ ದಂಪತಿಗಳು, ನಾಲ್ವಡಿ ಕೃಷ್ಣರಾಜ ಒಡೆಯರು ನಮಗೆ ಶಾಂತಿಮಂತ್ರ ಬೋಧಿಸಿದ್ದಾರೆ. ಆ ಶಾಂತಿಮಂತ್ರದಿಂದ ದೇಶವನ್ನು ಮುನ್ನಡೆಸುತ್ತಿದ್ದೇವೆ. ನಾವು ಅಹಿಂಸಾ ಮಾರ್ಗ ಹಿಡಿದಿದ್ದರೆ ನೀವು ಏನಾಗುತ್ತಿದ್ರಿ ಎಂಬುದನ್ನು ಕಲ್ಪನೆ ಮಾಡಿಕೊಳ್ಳಿ. ಆದ್ದರಿಂದ, ತುಂಬಾ ಎಚ್ಚರಿಕೆಯಿಂದ ನೀವು ಮಾತನಾಡಬೇಕು. ಈ ದೇಶ ಇಂದು ಸೌಖ್ಯವಾಗಿದ್ದರೆ ಅದಕ್ಕೆ ಕಾರಣ ಅಸ್ಪೃಶ್ಯ ಸಮುದಾಯಗಳು ಎಂಬುದನ್ನು ನೀವು ಮರೆಯಬಾರದು” ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

“ಒಂದು ಕಡೆ ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ; ಮತ್ತೊಂದು ಕಡೆ ಗಾಂಧಿಯನ್ನು ಪೂಜಿಸುತ್ತಾರೆ. ಇಂತ ಅವಿವೇಕಿಗಳ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಇಂತವಗೆ ದಲಿತ ಸಮುದಾದಲ್ಲಿ ಗುಲಾಮರು ಹುಟ್ಟಿಕೊಳ್ಳುತ್ತಿದ್ದಾರೆ; ಆ ಗುಲಾಮರ ಬಗ್ಗೆ ಸಮುದಾಯ ಎಚ್ಚರವಾಗಿರಬೇಕು” ಎಂದು ಕಿವಿಮಾತು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ನಾವು ಕಾರಣ

“ಸರ್ಕಾರ ಕೂಡ ನಮ್ಮ ಬಗ್ಗೆ, ನಮ್ಮ ಬದುಕು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು. ಕೇವಲ ಭರವಸೆ ನೀಡಬಾರದು. ರಾಜ್ಯದಲ್ಲಿ ಜಾತ್ಯತೀತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮೂಲ ಕಾರಣ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಮಗೂ ಅಧಿಕಾರದಲ್ಲಿ ಪಾಲು ಕೊಡಬೇಕು; ಪಾಲು ಕೊಟ್ಟರೆ ಮಾತ್ರ ದಲಿತ ಸಮುದಾಯ ನಿಮ್ಮನ್ನು ಸಹಿಸಿಕೊಳ್ಳುತ್ತದೆ.. ಕೇವಲ ಓಟ್ ಹಾಕುವುದಕ್ಕೆ ಮಾತ್ರ ನಾವು ಸೀಮಿತವಾಗಿಲ್ಲ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಅಂಬೇಡ್ಕರ್ ಭಾರತ ರತ್ನ ಅಲ್ಲ.. ಅವರು ವಿಶ್ವ ರತ್ನವಾಗಿ ಜಗತ್ತಿನಲ್ಲಿ ರಾರಾಜಿಸುತ್ತಿದೆ. ನಾವು ಅವರ ಕುಡಿಗಳಾಗಿ ಸರಿಯಾದ ರೀತಿಯಲ್ಲಿ ಬಾಬಾ ಸಾಹೇಬರ ಚಿಂತನೆ ಮುಂದುವರಿಸಬೇಕು” ಎಂದರು.

ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ಇಂದೂಧರ ಹೊನ್ನಾಪುರ, ದಸಂಸ ರಾಜ್ಯ ಸಂಯೋಜಕರಾದ ವಿ.ನಾಗರಾಜ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವಾರು ದಸಂಸ ಮುಖಂಡರು ಇದ್ದರು.

ಇದನ್ನೂ ಓದಿ; ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...