Homeಕರ್ನಾಟಕಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

ಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರು ಬಾಬಾ ಸಾಹೇಬರ ಪ್ರತಿಮೆ ಮುಂದೆ ಮಂಡಿಯೂರಿ ಕ್ಷಮೆಯಾಚಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಿತು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಸಂವಿಧಾನ ಮತ್ತು ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವಷ್ಟು ಬಂದ್ ಮತ್ತು ಪ್ರತಿಭಟನೆಗಳು ಬಹುಷಃ ಹಿಂದೆದೂ ನಡೆದಿಲ್ಲ; ಇದು ದಲಿತ ಚಳವಳಿಯ ತಾಕತ್ತು. ವಿವಿಧ ಜಿಲ್ಲೆಗಳಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ. ಅವು ಯಶಸ್ವಿಯಾಗಲೇಬೇಕು ಎನ್ನುವ ಕಾರಣಕ್ಕೆ ಹಲವು ಸಮುದಾಯಗಳು ಶ್ರಮಿಸಿವೆ. ಆದ್ದರಿಂದ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕಾಯಿತು” ಎಂದರು.

“ಬೇರೆಬೇರೆ ಜಿಲ್ಲೆಗಳಿಂದ ಜನರು ಬಸ್ಸು, ರೈಲು ಮತ್ತು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ವಿವಿಧ ಗ್ರಾಮ, ಕುಗ್ರಾಮ ಮತ್ತು ಹಾಡಿಗಳಿಂದ ಕಾರ್ಯಕರ್ತರು ಇಲ್ಲಿಗೆ ಬಂದಿದ್ದಾರೆ. ನೀವು ಬಂದಿರುವ ಉದ್ದೇಶ ಈಡೇರಬೇಕಾದರೆ, ನಾವೇನು ಮಾಡಬೇಕು ಎಂಬ ಸ್ಪಷ್ಟತೆ ಇರಬೇಕು. ರಾಜಕೀಯ ಪಕ್ಷಗಳು ಬಸ್‌ಗಳಲ್ಲಿ ಜನರನ್ನು ತುಂಬಿಕೊಂಡು ಬಂದು ಮೈದಾನಗಳಲ್ಲಿ ಬಿಟ್ಟು, ಬಿರಿಯಾನಿ ಹಾಗೂ ಐದು ನೂರು ರೂಪಾಯಿ ಕೈಗೆ ಕೊಟ್ಟರೆ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬಾಬಾ ಸಾಹೇಬರ ಹೋರಾಟದ ರಕ್ತ ಮತ್ತು ಬೆವರಿನ ಪ್ರತಿಫಲ ಉಣ್ಣುತ್ತಿರುವ ಪ್ರತಿಯೊಂದು ಸಮುದಾಯ ಕೂಡ ಈ ವಿಚಾರವನ್ನು ಉಗ್ರವಾಗಿ ಖಂಡಿಸಬೇಕಾಗಿತ್ತು. ಆದರೆ, ಇವತ್ತು ದಲಿತ ಸಮುದಾಯ ಒಡಕಿನತ್ತ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶಿವಸುಂದರ್ ಅವರ ‘ಸಂವಿಧಾನ v/s ಸಂಘಿಗಳ ಸುಳ್ಳು ಅಭಿಯಾನ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

“ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಸೇವಾಲಾಲ್ ಸ್ವಾಮೀಜಿ ಇಂದು ಎಲ್ಲಿದ್ದಾರೆ. ಇವರೆಲ್ಲಾ ಬಾಬಾ ಸಾಹೇಬರ ಋಣ ಉಂಡವರಲ್ಲವೇ? ದಲಿತ ರಾಜಕಾರಣಿಗಳ ಬಾಯಿಗೆ ಏನಾಗಿದೆ..? ಇವರ ಬಾಯಿಗೆ ಯಾರಾದರೂ ಬೀಗ ಹಾಕಿದ್ದಾರೆಯೇ? ಬಾಬಾ ಸಾಹೇಬರಿಗೆ ಅವಮಾನ ಆದಾಗ ಪ್ರತಿಭಟಿಸಲಾರದವರಿಗೆ ಮಂತ್ರಿಗಿರಿ ಮತ್ತು ರಾಜಕೀಯ ಅಧಿಕಾರ ಯಾಕೆ ಬೇಕು, ಇವರೆಲ್ಲಾ ಅವಕಾಶ ಸಿಗದೇ ಇದ್ದಾಗ ಅಳುತ್ತಾರೆ. ಯಾವ ಸಮಾಜಕ್ಕೆ ಹುಕುಂದಾರಿಕೆ ಬರುವುದಿಲ್ಲವೋ.. ಆ ಸಮಾಜ ನರಸತ್ತ ಸಮಾಜ ಆಗಿರುತ್ತದೆ, ಅದರ ರಾಜಕಾರಣಿಗಳು ನರಸತ್ತವರಾಗಿರುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ನಾವು ಒಟ್ಟಿಗೆ ಸೇರುತ್ತೇವೆ.. ಮಾತನಾಡುತ್ತೇವೆ ಎಂದಾಗ ರಾಜಕೀಯ ಪಕ್ಷಗಳು ಹಾಗೆ ಮಾಡಬೇಡಿ ಎನ್ನುತ್ತಾರೆ. ನಾವು ಮಾತನಾಡಿದರೆ ನಿಮಗೇನು ಸಮಸ್ಯೆ? ನಮಗೆ ನಾವೇ ಹೈಕಮಾಂಡ್, ಸಂವಿಧಾನ ನಮ್ಮ ಹೈಕಮಾಂಡ್” ಎಂದರು.

“ನಮ್ಮ ವಿದ್ಯಾರ್ಥಿಗಳು ಹಾಗೂ ಯುವಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂವಿಧಾನ ಮತ್ತು ಮನುವಾದದ ನಡುವಿನ ತಾರ್ಕಿಕ ಸಂಘರ್ಷಕ್ಕೆ ಬಂದು ನಿಂತಿದ್ದೇವೆ. ಮನುಸ್ಮೃತಿ ಸಾವಿರಾರು ವರ್ಷಗಳಿಂದ ಈ ದೇಶದ ದುಡಿಯುವ ಜನರನ್ನು ಹಾಗೂ ಶೂದ್ರಾತಿ ಶೂದ್ರರನ್ನು ಕಾಲಡಿಯಲ್ಲಿ ಹಾಕಿ ತುಳಿಯುತ್ತಿತ್ತು. ಅಂತ ಮನುಸ್ಮೃತಿಯ ಕಾಲನ್ನು ಮುರಿದಿದ್ದು ಬಾಬಾ ಸಾಹೇಬರ ಸಂವಿಧಾನ; ಅಂತ ಸಂವಿಧಾನದ ಮೂಲ ಆಶಯಕ್ಕೆ ಇಂದು ದಕ್ಕೆಯಾಗುತ್ತಿದೆ. ನಮ್ಮನ್ನೂ ಗೌರವಿಸುವ ಸಂವಿಧಾನ ಜಾರಿಗೆ ಬರಲಿ ಎಂದು ಉಡುಪಿ ಸ್ವಾಮಿ ಹೇಳುತ್ತಾರೆ.. ಉಡುಪಿ ಸ್ವಾಮಿಯನ್ನು ಗೌರವಿಸುವ ಸಂವಿಧಾನ ಯಾವುದು.. ಮನುಸ್ಮೃತಿನಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಕುಲಸ್ತರು ಹಾಗೂ ಅಂಬೇಡ್ಕರ್ ವಿಚಾರಧಾರೆ ಎಂದರೆ ಜೇನುಗೂಡು ಇದ್ದಂತೆ, ಅಂತಹ ಜೇನುಗೂಡಿಗೆ ಕೈ ಹಾಕಿದರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜೇನು ಸಿಹಿಯಾಗಿದ್ದರೂ ಅದರ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಪೂರ್ವಿಕರು ನಮಗೆ ಅಹಿಂಸೆ ಬೋಧಿಸಿದ್ದಾರೆ. ಬುದ್ಧ, ಬಸವಣ್ಣ, ಫುಲೆ ದಂಪತಿಗಳು, ನಾಲ್ವಡಿ ಕೃಷ್ಣರಾಜ ಒಡೆಯರು ನಮಗೆ ಶಾಂತಿಮಂತ್ರ ಬೋಧಿಸಿದ್ದಾರೆ. ಆ ಶಾಂತಿಮಂತ್ರದಿಂದ ದೇಶವನ್ನು ಮುನ್ನಡೆಸುತ್ತಿದ್ದೇವೆ. ನಾವು ಅಹಿಂಸಾ ಮಾರ್ಗ ಹಿಡಿದಿದ್ದರೆ ನೀವು ಏನಾಗುತ್ತಿದ್ರಿ ಎಂಬುದನ್ನು ಕಲ್ಪನೆ ಮಾಡಿಕೊಳ್ಳಿ. ಆದ್ದರಿಂದ, ತುಂಬಾ ಎಚ್ಚರಿಕೆಯಿಂದ ನೀವು ಮಾತನಾಡಬೇಕು. ಈ ದೇಶ ಇಂದು ಸೌಖ್ಯವಾಗಿದ್ದರೆ ಅದಕ್ಕೆ ಕಾರಣ ಅಸ್ಪೃಶ್ಯ ಸಮುದಾಯಗಳು ಎಂಬುದನ್ನು ನೀವು ಮರೆಯಬಾರದು” ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

“ಒಂದು ಕಡೆ ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ; ಮತ್ತೊಂದು ಕಡೆ ಗಾಂಧಿಯನ್ನು ಪೂಜಿಸುತ್ತಾರೆ. ಇಂತ ಅವಿವೇಕಿಗಳ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಇಂತವಗೆ ದಲಿತ ಸಮುದಾದಲ್ಲಿ ಗುಲಾಮರು ಹುಟ್ಟಿಕೊಳ್ಳುತ್ತಿದ್ದಾರೆ; ಆ ಗುಲಾಮರ ಬಗ್ಗೆ ಸಮುದಾಯ ಎಚ್ಚರವಾಗಿರಬೇಕು” ಎಂದು ಕಿವಿಮಾತು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ನಾವು ಕಾರಣ

“ಸರ್ಕಾರ ಕೂಡ ನಮ್ಮ ಬಗ್ಗೆ, ನಮ್ಮ ಬದುಕು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು. ಕೇವಲ ಭರವಸೆ ನೀಡಬಾರದು. ರಾಜ್ಯದಲ್ಲಿ ಜಾತ್ಯತೀತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮೂಲ ಕಾರಣ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಮಗೂ ಅಧಿಕಾರದಲ್ಲಿ ಪಾಲು ಕೊಡಬೇಕು; ಪಾಲು ಕೊಟ್ಟರೆ ಮಾತ್ರ ದಲಿತ ಸಮುದಾಯ ನಿಮ್ಮನ್ನು ಸಹಿಸಿಕೊಳ್ಳುತ್ತದೆ.. ಕೇವಲ ಓಟ್ ಹಾಕುವುದಕ್ಕೆ ಮಾತ್ರ ನಾವು ಸೀಮಿತವಾಗಿಲ್ಲ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಅಂಬೇಡ್ಕರ್ ಭಾರತ ರತ್ನ ಅಲ್ಲ.. ಅವರು ವಿಶ್ವ ರತ್ನವಾಗಿ ಜಗತ್ತಿನಲ್ಲಿ ರಾರಾಜಿಸುತ್ತಿದೆ. ನಾವು ಅವರ ಕುಡಿಗಳಾಗಿ ಸರಿಯಾದ ರೀತಿಯಲ್ಲಿ ಬಾಬಾ ಸಾಹೇಬರ ಚಿಂತನೆ ಮುಂದುವರಿಸಬೇಕು” ಎಂದರು.

ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ಇಂದೂಧರ ಹೊನ್ನಾಪುರ, ದಸಂಸ ರಾಜ್ಯ ಸಂಯೋಜಕರಾದ ವಿ.ನಾಗರಾಜ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವಾರು ದಸಂಸ ಮುಖಂಡರು ಇದ್ದರು.

ಇದನ್ನೂ ಓದಿ; ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...