Homeಕರ್ನಾಟಕಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

ಸಂವಿಧಾನ V/s ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ: ಮಾವಳ್ಳಿ ಶಂಕರ್

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪ ಹೊತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಅವರು ಬಾಬಾ ಸಾಹೇಬರ ಪ್ರತಿಮೆ ಮುಂದೆ ಮಂಡಿಯೂರಿ ಕ್ಷಮೆಯಾಚಿಸಬೇಕು ಎಂಬುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಮುಂದಿಟ್ಟುಕೊಂಡು ದಲಿತ ಸಂಘರ್ಷ ಸಮಿತಿ ಒಕ್ಕೂಟ ನಡೆಸಿದ ಬೃಹತ್ ಪ್ರತಿಭಟನಾ ರ್‍ಯಾಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಿತು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್, “ಸಂವಿಧಾನ ಮತ್ತು ಮನುವಾದದ ನಡುವಿನ ಸಂಘರ್ಷದ ತಾರ್ಕಿಕ ಹಂತಕ್ಕೆ ಬಂದು ನಿಂತಿದ್ದೇವೆ” ಎಂದರು.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ಹೇಳಿಕೆ ವಿರೋಧಿಸಿ ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವಷ್ಟು ಬಂದ್ ಮತ್ತು ಪ್ರತಿಭಟನೆಗಳು ಬಹುಷಃ ಹಿಂದೆದೂ ನಡೆದಿಲ್ಲ; ಇದು ದಲಿತ ಚಳವಳಿಯ ತಾಕತ್ತು. ವಿವಿಧ ಜಿಲ್ಲೆಗಳಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ. ಅವು ಯಶಸ್ವಿಯಾಗಲೇಬೇಕು ಎನ್ನುವ ಕಾರಣಕ್ಕೆ ಹಲವು ಸಮುದಾಯಗಳು ಶ್ರಮಿಸಿವೆ. ಆದ್ದರಿಂದ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಬೇಕಾಯಿತು” ಎಂದರು.

“ಬೇರೆಬೇರೆ ಜಿಲ್ಲೆಗಳಿಂದ ಜನರು ಬಸ್ಸು, ರೈಲು ಮತ್ತು ಪ್ರತ್ಯೇಕ ವಾಹನ ವ್ಯವಸ್ಥೆ ಮಾಡಿಕೊಂಡು ಬಂದಿದ್ದಾರೆ. ರಾಜ್ಯದ ವಿವಿಧ ಗ್ರಾಮ, ಕುಗ್ರಾಮ ಮತ್ತು ಹಾಡಿಗಳಿಂದ ಕಾರ್ಯಕರ್ತರು ಇಲ್ಲಿಗೆ ಬಂದಿದ್ದಾರೆ. ನೀವು ಬಂದಿರುವ ಉದ್ದೇಶ ಈಡೇರಬೇಕಾದರೆ, ನಾವೇನು ಮಾಡಬೇಕು ಎಂಬ ಸ್ಪಷ್ಟತೆ ಇರಬೇಕು. ರಾಜಕೀಯ ಪಕ್ಷಗಳು ಬಸ್‌ಗಳಲ್ಲಿ ಜನರನ್ನು ತುಂಬಿಕೊಂಡು ಬಂದು ಮೈದಾನಗಳಲ್ಲಿ ಬಿಟ್ಟು, ಬಿರಿಯಾನಿ ಹಾಗೂ ಐದು ನೂರು ರೂಪಾಯಿ ಕೈಗೆ ಕೊಟ್ಟರೆ ಅದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಬಾಬಾ ಸಾಹೇಬರ ಹೋರಾಟದ ರಕ್ತ ಮತ್ತು ಬೆವರಿನ ಪ್ರತಿಫಲ ಉಣ್ಣುತ್ತಿರುವ ಪ್ರತಿಯೊಂದು ಸಮುದಾಯ ಕೂಡ ಈ ವಿಚಾರವನ್ನು ಉಗ್ರವಾಗಿ ಖಂಡಿಸಬೇಕಾಗಿತ್ತು. ಆದರೆ, ಇವತ್ತು ದಲಿತ ಸಮುದಾಯ ಒಡಕಿನತ್ತ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಚಿಂತಕ ಶಿವಸುಂದರ್ ಅವರ ‘ಸಂವಿಧಾನ v/s ಸಂಘಿಗಳ ಸುಳ್ಳು ಅಭಿಯಾನ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

“ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಸೇವಾಲಾಲ್ ಸ್ವಾಮೀಜಿ ಇಂದು ಎಲ್ಲಿದ್ದಾರೆ. ಇವರೆಲ್ಲಾ ಬಾಬಾ ಸಾಹೇಬರ ಋಣ ಉಂಡವರಲ್ಲವೇ? ದಲಿತ ರಾಜಕಾರಣಿಗಳ ಬಾಯಿಗೆ ಏನಾಗಿದೆ..? ಇವರ ಬಾಯಿಗೆ ಯಾರಾದರೂ ಬೀಗ ಹಾಕಿದ್ದಾರೆಯೇ? ಬಾಬಾ ಸಾಹೇಬರಿಗೆ ಅವಮಾನ ಆದಾಗ ಪ್ರತಿಭಟಿಸಲಾರದವರಿಗೆ ಮಂತ್ರಿಗಿರಿ ಮತ್ತು ರಾಜಕೀಯ ಅಧಿಕಾರ ಯಾಕೆ ಬೇಕು, ಇವರೆಲ್ಲಾ ಅವಕಾಶ ಸಿಗದೇ ಇದ್ದಾಗ ಅಳುತ್ತಾರೆ. ಯಾವ ಸಮಾಜಕ್ಕೆ ಹುಕುಂದಾರಿಕೆ ಬರುವುದಿಲ್ಲವೋ.. ಆ ಸಮಾಜ ನರಸತ್ತ ಸಮಾಜ ಆಗಿರುತ್ತದೆ, ಅದರ ರಾಜಕಾರಣಿಗಳು ನರಸತ್ತವರಾಗಿರುತ್ತಾರೆ” ಎಂದು ಆಕ್ರೋಶ ಹೊರಹಾಕಿದರು.

“ನಾವು ಒಟ್ಟಿಗೆ ಸೇರುತ್ತೇವೆ.. ಮಾತನಾಡುತ್ತೇವೆ ಎಂದಾಗ ರಾಜಕೀಯ ಪಕ್ಷಗಳು ಹಾಗೆ ಮಾಡಬೇಡಿ ಎನ್ನುತ್ತಾರೆ. ನಾವು ಮಾತನಾಡಿದರೆ ನಿಮಗೇನು ಸಮಸ್ಯೆ? ನಮಗೆ ನಾವೇ ಹೈಕಮಾಂಡ್, ಸಂವಿಧಾನ ನಮ್ಮ ಹೈಕಮಾಂಡ್” ಎಂದರು.

“ನಮ್ಮ ವಿದ್ಯಾರ್ಥಿಗಳು ಹಾಗೂ ಯುವಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂವಿಧಾನ ಮತ್ತು ಮನುವಾದದ ನಡುವಿನ ತಾರ್ಕಿಕ ಸಂಘರ್ಷಕ್ಕೆ ಬಂದು ನಿಂತಿದ್ದೇವೆ. ಮನುಸ್ಮೃತಿ ಸಾವಿರಾರು ವರ್ಷಗಳಿಂದ ಈ ದೇಶದ ದುಡಿಯುವ ಜನರನ್ನು ಹಾಗೂ ಶೂದ್ರಾತಿ ಶೂದ್ರರನ್ನು ಕಾಲಡಿಯಲ್ಲಿ ಹಾಕಿ ತುಳಿಯುತ್ತಿತ್ತು. ಅಂತ ಮನುಸ್ಮೃತಿಯ ಕಾಲನ್ನು ಮುರಿದಿದ್ದು ಬಾಬಾ ಸಾಹೇಬರ ಸಂವಿಧಾನ; ಅಂತ ಸಂವಿಧಾನದ ಮೂಲ ಆಶಯಕ್ಕೆ ಇಂದು ದಕ್ಕೆಯಾಗುತ್ತಿದೆ. ನಮ್ಮನ್ನೂ ಗೌರವಿಸುವ ಸಂವಿಧಾನ ಜಾರಿಗೆ ಬರಲಿ ಎಂದು ಉಡುಪಿ ಸ್ವಾಮಿ ಹೇಳುತ್ತಾರೆ.. ಉಡುಪಿ ಸ್ವಾಮಿಯನ್ನು ಗೌರವಿಸುವ ಸಂವಿಧಾನ ಯಾವುದು.. ಮನುಸ್ಮೃತಿನಾ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಕುಲಸ್ತರು ಹಾಗೂ ಅಂಬೇಡ್ಕರ್ ವಿಚಾರಧಾರೆ ಎಂದರೆ ಜೇನುಗೂಡು ಇದ್ದಂತೆ, ಅಂತಹ ಜೇನುಗೂಡಿಗೆ ಕೈ ಹಾಕಿದರೆ ನಿಮ್ಮನ್ನು ಸರ್ವನಾಶ ಮಾಡುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಜೇನು ಸಿಹಿಯಾಗಿದ್ದರೂ ಅದರ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ. ನಮ್ಮ ಪೂರ್ವಿಕರು ನಮಗೆ ಅಹಿಂಸೆ ಬೋಧಿಸಿದ್ದಾರೆ. ಬುದ್ಧ, ಬಸವಣ್ಣ, ಫುಲೆ ದಂಪತಿಗಳು, ನಾಲ್ವಡಿ ಕೃಷ್ಣರಾಜ ಒಡೆಯರು ನಮಗೆ ಶಾಂತಿಮಂತ್ರ ಬೋಧಿಸಿದ್ದಾರೆ. ಆ ಶಾಂತಿಮಂತ್ರದಿಂದ ದೇಶವನ್ನು ಮುನ್ನಡೆಸುತ್ತಿದ್ದೇವೆ. ನಾವು ಅಹಿಂಸಾ ಮಾರ್ಗ ಹಿಡಿದಿದ್ದರೆ ನೀವು ಏನಾಗುತ್ತಿದ್ರಿ ಎಂಬುದನ್ನು ಕಲ್ಪನೆ ಮಾಡಿಕೊಳ್ಳಿ. ಆದ್ದರಿಂದ, ತುಂಬಾ ಎಚ್ಚರಿಕೆಯಿಂದ ನೀವು ಮಾತನಾಡಬೇಕು. ಈ ದೇಶ ಇಂದು ಸೌಖ್ಯವಾಗಿದ್ದರೆ ಅದಕ್ಕೆ ಕಾರಣ ಅಸ್ಪೃಶ್ಯ ಸಮುದಾಯಗಳು ಎಂಬುದನ್ನು ನೀವು ಮರೆಯಬಾರದು” ಎಂದು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

“ಒಂದು ಕಡೆ ಗಾಂಧಿ ಕೊಂದವರನ್ನು ಆರಾಧಿಸುತ್ತಾರೆ; ಮತ್ತೊಂದು ಕಡೆ ಗಾಂಧಿಯನ್ನು ಪೂಜಿಸುತ್ತಾರೆ. ಇಂತ ಅವಿವೇಕಿಗಳ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಇಂತವಗೆ ದಲಿತ ಸಮುದಾದಲ್ಲಿ ಗುಲಾಮರು ಹುಟ್ಟಿಕೊಳ್ಳುತ್ತಿದ್ದಾರೆ; ಆ ಗುಲಾಮರ ಬಗ್ಗೆ ಸಮುದಾಯ ಎಚ್ಚರವಾಗಿರಬೇಕು” ಎಂದು ಕಿವಿಮಾತು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ನಾವು ಕಾರಣ

“ಸರ್ಕಾರ ಕೂಡ ನಮ್ಮ ಬಗ್ಗೆ, ನಮ್ಮ ಬದುಕು ಮತ್ತು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು. ಕೇವಲ ಭರವಸೆ ನೀಡಬಾರದು. ರಾಜ್ಯದಲ್ಲಿ ಜಾತ್ಯತೀತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮೂಲ ಕಾರಣ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ನಮಗೂ ಅಧಿಕಾರದಲ್ಲಿ ಪಾಲು ಕೊಡಬೇಕು; ಪಾಲು ಕೊಟ್ಟರೆ ಮಾತ್ರ ದಲಿತ ಸಮುದಾಯ ನಿಮ್ಮನ್ನು ಸಹಿಸಿಕೊಳ್ಳುತ್ತದೆ.. ಕೇವಲ ಓಟ್ ಹಾಕುವುದಕ್ಕೆ ಮಾತ್ರ ನಾವು ಸೀಮಿತವಾಗಿಲ್ಲ” ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

“ಅಂಬೇಡ್ಕರ್ ಭಾರತ ರತ್ನ ಅಲ್ಲ.. ಅವರು ವಿಶ್ವ ರತ್ನವಾಗಿ ಜಗತ್ತಿನಲ್ಲಿ ರಾರಾಜಿಸುತ್ತಿದೆ. ನಾವು ಅವರ ಕುಡಿಗಳಾಗಿ ಸರಿಯಾದ ರೀತಿಯಲ್ಲಿ ಬಾಬಾ ಸಾಹೇಬರ ಚಿಂತನೆ ಮುಂದುವರಿಸಬೇಕು” ಎಂದರು.

ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಪತ್ರಕರ್ತ ಹಾಗೂ ಹೋರಾಟಗಾರ ಇಂದೂಧರ ಹೊನ್ನಾಪುರ, ದಸಂಸ ರಾಜ್ಯ ಸಂಯೋಜಕರಾದ ವಿ.ನಾಗರಾಜ್, ಇಂದಿರಾ ಕೃಷ್ಣಪ್ಪ ಸೇರಿದಂತೆ ಹಲವಾರು ದಸಂಸ ಮುಖಂಡರು ಇದ್ದರು.

ಇದನ್ನೂ ಓದಿ; ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...