Homeಕರ್ನಾಟಕ‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ ‘ಲ್ಯಾಂಡ್ ಲಾರ್ಡ್’ ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದರು. 

ಫೆಬ್ರವರಿ 3, ಮಂಗಳವಾರದಂದು ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ ತಂಡ ಮನವಿ ಪತ್ರ ನೀಡಿತು. 

ಪತ್ರದಲ್ಲಿ ಇತ್ತೀಚೆಗೆ ಬಿಡುಗಡೆಯಾದ ನಿರ್ದೇಶಕ ಜಡೆಶ್ ಕೆ. ಹಂಪಿ ಅವರ ದುನಿಯಾವಿಜಯ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರವು ಕೇವಲ ಮನರಂಜನೆಯ ಉದ್ದೇಶವಲ್ಲದೆ, ಭೂಮಿ-ಜಾತಿ-ಶ್ರಮ-ಮಾನವ ಗೌರವ ಎಂಬ ಮೂಲಭೂತ ಸಾಮಾಜಿಕ ಪ್ರಶ್ನೆಗಳನ್ನು ಗಂಭೀರವಾಗಿ ಸ್ಪರ್ಶಿಸುವ ಮಹತ್ವದ ಸಾಂಸ್ಕೃತಿಕ ಸಿನಿಮಾವಾಗಿದೆ ಎಂದಿರುವ ಸಂಘಟನೆ ಈ ಚಿತ್ರವು ಜಮೀನ್ದಾರಿ ವ್ಯವಸ್ಥೆಯ ಅವಶೇಷಗಳು, ಭೂಮಿಯಿಲ್ಲದ ಕಾರ್ಮಿಕರ ದೀರ್ಘಕಾಲದ ಹೋರಾಟ, ದಲಿತ-ಅಂಚಿನ ಸಮುದಾಯಗಳ ಬದುಕಿನ ಸಂಕಷ್ಟಗಳು ಮತ್ತು ಸಂವಿಧಾನವು ಪ್ರತಿಪಾದಿಸುವ ಸಮಾನತೆ, ಸ್ವಾತಂತ್ರ್ಯ, ಸಹೋದರತ್ನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ಪ್ರಯತ್ನವಾಗಿದೆ. ಇಂತಹ ವಿಷಯಾಧಾರಿತ ಚಿತ್ರಗಳು ಸಮಾಜದಲ್ಲಿ ಸಂವಿಧಾನಾತ್ಮಕ ಜಾಗೃತಿ ಮೂಡಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದೆ. 

ಮುಖ್ಯವಾಹಿನಿ ಕನ್ನಡ ಸಿನೆಮಾದಲ್ಲಿ ಅಪರೂಪಕ್ಕೆ ಮಾತ್ರ ಕಾಣಿಸುವ ಈ ರೀತಿಯ ಸಾಮಾಜಿಕ ಬದ್ಧತೆ ಹೊಂದಿರುವ ಚಿತ್ರಗಳಿಗೆ ಸರ್ಕಾರದಿಂದ ಪ್ರೋತ್ಸಾಹ ದೊರಕುವುದು ಸೃಜನಶೀಲತೆಗೂ, ಸಾರ್ವಜನಿಕ ಹಿತಾಸಕ್ತಿಗೂ ಅನುಕೂಲಕರವಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು, ವಿದ್ಯಾರ್ಥಿಗಳು, ಕಾರ್ಮಿಕ ವರ್ಗ ಹಾಗೂ ಯುವಜನತೆಗೆ ಈ ಚಿತ್ರದ ಸಂದೇಶ ತಲುಪಲು ಸಂಪೂರ್ಣ ಮನರಂಜನಾ ತೆರಿಗೆ ವಿನಾಯಿತಿ ಮಹತ್ವದ ಪಾತ್ರ ವಹಿಸುತ್ತದೆ.

ಆದುದರಿಂದ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಚಿಂತನೆಗೆ ಬದ್ಧವಾದ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕೆಂದು ವಿನಮ್ರವಾಗಿ ಮನು ಮಾಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿತ್ತು. 

ಇನ್ನು ಡಿಎಸ್ಎಸ್ ನಾಯಕರು ಮತ್ತು ದಲಿತ ಹೋರಾಟಗಾರರ ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ.  ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿರುವ ಅವರು ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ‘ಲ್ಯಾಂಡ್ ಲಾರ್ಡ್’ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದಿದ್ದಾರೆ. 

ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, ಹಿರಿಯ ಕವಿ ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿ ಈಚಲಮರ, ವಿಜಯಕುಮಾರ್ ಸೋನಾರೆ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...