Homeಕರ್ನಾಟಕ‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ ‘ಲ್ಯಾಂಡ್ ಲಾರ್ಡ್’ ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದರು. 

ಫೆಬ್ರವರಿ 3, ಮಂಗಳವಾರದಂದು ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿದ ತಂಡ ಮನವಿ ಪತ್ರ ನೀಡಿತು. 

ಪತ್ರದಲ್ಲಿ ಇತ್ತೀಚೆಗೆ ಬಿಡುಗಡೆಯಾದ ನಿರ್ದೇಶಕ ಜಡೆಶ್ ಕೆ. ಹಂಪಿ ಅವರ ದುನಿಯಾವಿಜಯ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರವು ಕೇವಲ ಮನರಂಜನೆಯ ಉದ್ದೇಶವಲ್ಲದೆ, ಭೂಮಿ-ಜಾತಿ-ಶ್ರಮ-ಮಾನವ ಗೌರವ ಎಂಬ ಮೂಲಭೂತ ಸಾಮಾಜಿಕ ಪ್ರಶ್ನೆಗಳನ್ನು ಗಂಭೀರವಾಗಿ ಸ್ಪರ್ಶಿಸುವ ಮಹತ್ವದ ಸಾಂಸ್ಕೃತಿಕ ಸಿನಿಮಾವಾಗಿದೆ ಎಂದಿರುವ ಸಂಘಟನೆ ಈ ಚಿತ್ರವು ಜಮೀನ್ದಾರಿ ವ್ಯವಸ್ಥೆಯ ಅವಶೇಷಗಳು, ಭೂಮಿಯಿಲ್ಲದ ಕಾರ್ಮಿಕರ ದೀರ್ಘಕಾಲದ ಹೋರಾಟ, ದಲಿತ-ಅಂಚಿನ ಸಮುದಾಯಗಳ ಬದುಕಿನ ಸಂಕಷ್ಟಗಳು ಮತ್ತು ಸಂವಿಧಾನವು ಪ್ರತಿಪಾದಿಸುವ ಸಮಾನತೆ, ಸ್ವಾತಂತ್ರ್ಯ, ಸಹೋದರತ್ನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ಪ್ರಯತ್ನವಾಗಿದೆ. ಇಂತಹ ವಿಷಯಾಧಾರಿತ ಚಿತ್ರಗಳು ಸಮಾಜದಲ್ಲಿ ಸಂವಿಧಾನಾತ್ಮಕ ಜಾಗೃತಿ ಮೂಡಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದೆ. 

ಮುಖ್ಯವಾಹಿನಿ ಕನ್ನಡ ಸಿನೆಮಾದಲ್ಲಿ ಅಪರೂಪಕ್ಕೆ ಮಾತ್ರ ಕಾಣಿಸುವ ಈ ರೀತಿಯ ಸಾಮಾಜಿಕ ಬದ್ಧತೆ ಹೊಂದಿರುವ ಚಿತ್ರಗಳಿಗೆ ಸರ್ಕಾರದಿಂದ ಪ್ರೋತ್ಸಾಹ ದೊರಕುವುದು ಸೃಜನಶೀಲತೆಗೂ, ಸಾರ್ವಜನಿಕ ಹಿತಾಸಕ್ತಿಗೂ ಅನುಕೂಲಕರವಾಗುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳು, ವಿದ್ಯಾರ್ಥಿಗಳು, ಕಾರ್ಮಿಕ ವರ್ಗ ಹಾಗೂ ಯುವಜನತೆಗೆ ಈ ಚಿತ್ರದ ಸಂದೇಶ ತಲುಪಲು ಸಂಪೂರ್ಣ ಮನರಂಜನಾ ತೆರಿಗೆ ವಿನಾಯಿತಿ ಮಹತ್ವದ ಪಾತ್ರ ವಹಿಸುತ್ತದೆ.

ಆದುದರಿಂದ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಚಿಂತನೆಗೆ ಬದ್ಧವಾದ ‘ಲ್ಯಾಂಡ್ ಲಾರ್ಡ್’ ಕನ್ನಡ ಚಲನಚಿತ್ರಕ್ಕೆ ಕರ್ನಾಟಕ ರಾಜ್ಯ ಸರ್ಕಾರವು ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕೆಂದು ವಿನಮ್ರವಾಗಿ ಮನು ಮಾಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿತ್ತು. 

ಇನ್ನು ಡಿಎಸ್ಎಸ್ ನಾಯಕರು ಮತ್ತು ದಲಿತ ಹೋರಾಟಗಾರರ ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ.  ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿರುವ ಅವರು ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ‘ಲ್ಯಾಂಡ್ ಲಾರ್ಡ್’ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ’ ಎಂದಿದ್ದಾರೆ. 

ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, ಹಿರಿಯ ಕವಿ ಸುಬ್ಬು ಹೊಲೆಯಾರ್, ಗೊಲ್ಲಹಳ್ಳಿ ಶಿವಪ್ರಸಾದ್, ಹುಲಿಕುಂಟೆ ಮೂರ್ತಿ, ಚಂದ್ರು ತರಹುಣಸೆ, ರವಿ ಈಚಲಮರ, ವಿಜಯಕುಮಾರ್ ಸೋನಾರೆ ಉಪಸ್ಥಿತರಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...