HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...