HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...