HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...