HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...