HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...

ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ : ದೆಹಲಿ ಹೈಕೋರ್ಟ್

ಪಿಎಂ ಕೇರ್ಸ್ ನಿಧಿಯು ಕಾನೂನು ಅಥವಾ ಸರ್ಕಾರಿ ಘಟಕವಾಗಿದ್ದರೂ, ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಗೌಪ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ (ಜ.13) ಮೌಖಿಕವಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು...

ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿಯಾದ ಚೀನಾ ಕಮ್ಯುನಿಸ್ಟ್ ಪಕ್ಷದ ನಿಯೋಗ

ಗಾಲ್ವಾನ್ ಘರ್ಷಣೆಯ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿರುವ ಚೀನಾದ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ನಿಯೋಗ ಬಿಜೆಪಿ-ಆರ್‌ಎಸ್‌ಎಸ್‌ ನಾಯಕರನ್ನು ಭೇಟಿ ಮಾಡಿದೆ ಎಂದು ವರದಿಯಾಗಿದೆ. ಸೋಮವಾರ (ಜ.12) ನವದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ...

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...