HomeಚಳವಳಿDSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ.

- Advertisement -
- Advertisement -

ದಲಿತ ಚಳವಳಿ ನಮ್ಮ ಕಾಲಮಾನದಲ್ಲಿ ದೊಡ್ಡಸಾಧನೆಗಳನ್ನು ಮಾಡಿದೆ. ನಾವು ಹೋರಾಟಗಳ ಮೂಲಕ ಕಟ್ಟಿಕೊಟ್ಟಂತಹ ವಿಚಾರಗಳು ಲಕ್ಷಾಂತರ ದಲಿತರ ಹೃದಯದಲ್ಲಿ ಸ್ವಾಭಿಮಾನಿದ ಕಿಚ್ಚು ಹತ್ತಿಸಿದೆ. DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ ಎಂದು ಹಿರಿಯ ದಲಿತ ಹೋರಾಟಗಾರ ಇಂದೂಧರ ಹೊನ್ನಾಪುರ ಅಭಿಪ್ರಾಯಪಟ್ಟರು.

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶದ ಪ್ರಾಸ್ತವಿಕ ಮಾತುಗಳನ್ನಾಡಿದ ಅವರು, “ಇಂದು ಬಾಬಾ ಸಾಹೇಬರ 66ನೇ ಪರಿನಿಬ್ಬಾಣದ ದಿನ. ಬಾಬಾ ಸಾಹೇಬರು, ಬುದ್ಧ, ಬಸವಣ್ಣ್ರಾರಾಧಿಯಾಗಿ…. ದಲಿತ ಬಂಧುಗಳ ವಿಮುಕ್ತಗಾಗಿ ಪ್ರಾಣಾರ್ಪಣೆ ಮಾಡಿದವರಿಗೆ ಈ ಸಮಾವೇಶವನ್ನು ಅರ್ಪಿಸುತ್ತೇವೆ. ದಲಿತರೆಂದರೆ ಕೇವಲ ಅಸ್ಪಶ್ಯತೆರಲ್ಲ, ಈ ನಾಡಿನ ಎಲ್ಲಾ ನೊಂದವರು. ಎಲ್ಲ ನೊಂದವರ ಪರ ಡಿಎಸ್‌ಎಸ್‌ ಹೋರಾಟ ಮಾಡಿದೆ. ಹಿಂದುಳಿದ ವರ್ಗದ ಅನುಸೂಯಮ್ಮನವರ ಪರ ಹೋರಾಡಿತ್ತು” ಎಂದರು.

ದಲಿತ ಚಳವಳಿ ಆರಂಭವಾಗಿ ಐವತ್ತು ವರ್ಷಗಳಾಗಿವೆ. ದಲಿತರು ಕೂಗುತ್ತಿರುವ ಘೋಷಣೆಗಳು ಕಾರ್ಯಕ್ರಮಗಳಾಗಿವೆ. ಇವೆಲ್ಲವೂ ನಮ್ಮ ಹೆಮ್ಮೆ. ದಲಿತ ಸಂಘಟನೆ ವಿಘಟನೆಯಾಗಿವೆ, ಆಯಾಸವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೇರಿರುವ ಜನಸ್ತೋಮ ನಮ್ಮ ಒಗ್ಗಟ್ಟನ್ನು ಸಾರಿ ಹೇಳಿದೆ ಎಂದರು.

ಹಂಚಿಕೊಂಡು ತಿಂದು ಬೆಳೆದ ದೇಶವಿದು. ಈ ದೇಶ ಯಾವ ಸ್ಥಿತಿ ಹೋಗಿದೆ ನೋಡುಗತ್ತಿದ್ದೇವೆ. ನಮ್ಮ ಸಂಸ್ಕೃತಿ, ಆಹಾರ, ಉದ್ಯೋಗ, ಉಡುಗೆ ತೊಡುಗೆಯನ್ನು ಕಿತ್ತುಕೊಂಡಿದ್ದಾರೆ. ನಮ್ಮ ದೇಸ ಅಕ್ಕಪಕ್ಕದ ದೇಶಕ್ಕಿಂತ ಕೆಳಗೆ ಇಳಕಿಯುತ್ತಿದೆ. ಸಂವಿಧಾನದ ಹೆಸರಲ್ಲಿ ವಂಚನೆ ಮಾಡುತ್ತಿದ್ದಾರೆ. ಸ್ಕಾಲರ್‌ಶಿಪ್ ನಿಲ್ಲಿಸಿ, ಲಕ್ಷಾಂತರ ರೂಪಾಯಿ ಕಾರ್ಪೊರೇಟರ್‌ಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ಅಂಕಿ- ಅಂಶಗಳನ್ನು ತಡೆದು ಬಡತನ ಇಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅಂದು ಮನುಸ್ಮೃತಿಯನ್ನು ಸುಟ್ಟರು. ಆದರೆ ಸಂವಿಧಾನದ ಹೆಸರಲ್ಲಿ ಆಳುವವರು ಇಂದು ಮನುಸ್ಮತಿ ಮತ್ತು ಪಂಚಾಂಗವನ್ನು ಹೇರುತ್ತಿದ್ದಾರೆ. ಅದರ ವಿರುದ್ಧ ದಲಿತರು ಇವತ್ತು ಬೀದಿಳಿದಿದ್ದಾರೆ. ಸಂಘಟನೆಗಳು ಒಂದಾಗಿದ್ದಾರೆ. ಇದಕ್ಕೆ ಕಾರಣವಾದ ಸರ್ಕಾರಕ್ಕೆ ಧನ್ಯವಾದ ಹೇಳಬೇಕು ಎಂದರು.

ರಾಮರಾಜ್ಯದ ಹೆಸರಲ್ಲಿ ಹಿಂಸೆ, ದೌರ್ಜನ್ಯ ಎಸಗುತ್ತಿದ್ದಾರೆ. ಪ್ರಶ್ನೆ ಕೇಳಿದರೆ ಜೈಲಿಗೆ ಹಾಕುತ್ತಿದ್ದಾರೆ. ಆನಂದ್ ತೇಲ್ತುಂಬ್ಡೆಯವರನ್ನು ಎರಡು ವರ್ಷ ಜೈಲಿಗೆ ಹಾಕಿದ್ದಾರೆ. ನ್ಯಾಯ ಕೇಳಿದರೆ ಜೈಲಿಗೆ ಹಾಕುತ್ತಾರೆ. ನೀವು ದೇಶದ್ರೋಹಿಗಳು. ದಲಿತರ ಹಕ್ಕು, ಬಡವರ ಹಕ್ಕು ಕಿತ್ತುಕೊಳ್ಳುತ್ತಿದ್ದೀರಿ. ನೀವು ದೇಶದ್ರೋಹಿಗಳು. ಆರ್ ಎಸ್ ಎಸ್, ಬಿಜೆಪಿ ದೇಶದ್ರೋಹಿಗಳು. ಸತ್ಯ ಹೇಳಿದರೆ ತಪ್ಪು ಎನ್ನುವುದಾದರೆ ನಿಮ್ಮಂಥ ಪಾಖಂಡಿಗಳು ಇನ್ನಾರೂ ಇಲ್ಲ. ಶಾಸ್ತ್ರ ಹೇಳುವವರು ದೇಶ ಕಟ್ಟಿಲ್ಲ. ದಲಿತರು, ತಳಸಮುದಾಯಗಳಾದ ನಾವು ದೇಶ ಕಟ್ಟಿದ್ದೇವೆ ಎಂದರು.

ಸಂವಿಧಾನ ಆಶಯಗಳನ್ನು ಬುಡಮೇಲು ಮಾಡಲು ಹೊರಟಿದ್ದೀರಿ. ಬಿಕ್ಷುಕರ ಮೇಲೆ ಜಿಎಸ್ ಟಿ ಹಾಕುತ್ತಿದ್ದೀರಿ. ಈ ದೇಶವನ್ನು ಲೂಟಿ ಹೊಡೆಯುತ್ತಿರುವವರನ್ನು ಏಕೆ ಪ್ರಶ್ನಿಸುತ್ತಿಲ್ಲ. ಈ ವಂಚಕರನ್ನು ಚುನಾವಣೆ ಮೂಲಕ ಕಿತ್ತು ಎಸಯನಬೇಕಾಗಿದೆ. ಒನ್ ಮ್ಯಾನ್ ಒನ್ ವೋಟು ನಮ್ಮ ತಂದೆ ಅಂಬೇಡ್ಕರ್ ಕೊಟ್ಟಿದ್ದೇ ಹೊರತು ಯಾರೋ ವೈದಿಕರಲ್ಲ. ನ್ಯಾಯ ಕೇಳುವುದು, ಹಕ್ಕಿಗಾಗಿ ಹೋರಾಡುವುದು ದೇಶದ್ರೋಹವಲ್ಲ. ಸುಳ್ಳು ಹೇಳಿ, ಮೋಸ ಮಾಡುವ ಕೋಮುವಾದಿಗಳೇ ಅತಿ ದೊಡ್ಡ ದೇಶದ್ರೋಹಿಗಳು. ನಮ್ಮ ಓಟಿನ ಮೂಲಕ ನಿಮ್ಮನ್ನು ಸೋಲಿಸಿ ಮನೆಗೆ ಕಳಿಸುತ್ತೇವೆ. ಬಾಬಾ ಸಾಹೇಬರು ಕೊಟ್ಟ ಒಂದು ಓಟಿನ ಹಕ್ಕಿನಿಂದ ನಿಮ್ಮ ಸೋಲಿಸುತ್ತೇವೆ ಎಂದರು.

ಹತ್ತು ಸಂಘಟನೆಯ ನಾಯಕರು ವೇದಿಕೆ ಮೇಲೆ ನಿಂತಿದ್ದಾರೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇದು ಮುಂದುವರಿಯುತ್ತದೆ. ಜಾತ್ಯತೀತರು ಎಲ್ಲರನ್ನೂ ಒಳಗೊಳ್ಳುತ್ತೇವೆ. ಮನುವಾದಿಗಳ ಪರ, ಸಂವಿಧಾನ ವಿರೋಧಿಗಳ ಜೊತೆ ನಿಂತವರನ್ನು ಬಿಟ್ಟು ನಾವು ಒಂದಾಗುಗುತ್ತೇವೆ. ನಾವೆಲ್ಲ ಒಂದಾಗದಿದ್ದರೆ ರೌರವ ನರಕಕ್ಕೆ ಹೋಗುತ್ತೇವೆ ಎಂದರು.

ಬಾಬಾಸಾಹೇಬರ, ಬುದ್ದರ ತತ್ವ ಸಿದ್ದಾಂತಗಳನ್ನು ನಂಬಿ ಬರುವವರಿಗೆ ನಮ್ಮಲ್ಲಿ ಮುಕ್ತ ಪ್ರವೇಶವಿದೆ. ನಾವು ಯಾರನ್ನೂ ಹೊರಗಡೆ ಇಡುವುದಿಲ್ಲ. ಆದರೆ ಕೋಮುವಾದಿಗಳೊಂದಗೆ ಹೋದವರಿಗೆ ನಮ್ಮಲ್ಲಿ ಪ್ರವೇಶವಿಲ್ಲ. ನಾಲ್ಕು ಪರ್ಸೆಂಟ್ ಇರುವವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕೊಡುತ್ತಿದ್ದಿರಿ. ಆತ್ಮ ವಂಚಕರು ನೀವು, ನಿಮ್ಮನ್ನು ಸೋಲಿಸುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕವನ್ನು ಯುಪಿ, ಗುಜರಾತ್, ಬಿಹಾರ ಮಾಡಲು ಬಿಡುವುದಿಲ್ಲ: ಸಿ ಬಸವಲಿಂಗಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...