Homeಅಂತರಾಷ್ಟ್ರೀಯದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

ದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

- Advertisement -
- Advertisement -

ಮಾಜಿ ಪತ್ನಿಗೆ ವಿಚ್ಚೇದನ ಪರಿಹಾರ ಮತ್ತು ಮಕ್ಕಳ ಭದ್ರತೆಗಾಗಿ ಅವರಿಗೆ 550 ಮಿಲಿಯನ್ ಪೌಂಡ್‌ಗಳ (5,509 ಕೋಟಿ ರೂ.) ಪರಿಹಾರ ನೀಡುವಂತೆ ಯುಎಇ (ಸಂಯ್ತುಕ ಅರಬ್ ಸಂಸ್ಥಾನ)ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್-ಮಕ್ತೌಮ್ ಅವರಿಗೆ ಲಂಡನ್‌ ಹೈಕೋರ್ಟ್‌ ಆದೇಶಿಸಿದೆ.

ಪ್ರಧಾನಿ ಮಕ್ತೌಮ್ ಅವರ ಮಾಜಿ ಪತ್ನಿಯಾದ ಯುಕೆ ಮೂಲದ ರಾಜಕುಮಾರಿ ಹಯಾ ಬಿಂತ್‌‌ ಅಲ್-ಹುಸೇನ್‌ ಅವರಿಗೆ ವಿಚ್ಚೇದನದ ಪರಿಹಾರವಾಗಿ 251.5 ಮಿಲಿಯನ್ ಪೌಂಡ್‌ಗಳು ಮತ್ತು ಅವರ ಮಕ್ಕಳಾದ ಮಕ್ಕಳಾದ ಜಲೀಲಾ ಮತ್ತು ಜಾಯೆದ್ ಅವರ ಭದ್ರತೆಗಾಗಿ ಹಾಗೂ ಅವರಿಗೆ ಅಗತ್ಯವಿರುವ ಐದು ಮನೆಗೆಲಸದವರನ್ನು ನೇಮಿಸಿಕೊಳ್ಳುವುಕ್ಕಾಗಿ 290 ಮಿಲಿಯನ್ ಪೌಂಡ್‌ಗಳನ್ನು ಪಾವತಿಸಬೇಕು ಎಂದು ಬ್ರಿಟನ್‌ ಕೋರ್ಟ್‌ ಆದೇಶ ನೀಡಿದೆ.

ಇದನ್ನೂ ಓದಿ:‘ಡೀಪ್ ಡೈವ್ ದುಬೈ’ – ವಿಶ್ವದ ಅತ್ಯಂತ ಆಳವಾದ ಈಜುಕೊಳದ ವಿಡಿಯೊಗೆ ಹರ್ಷಗೊಂಡ ನೆಟ್ಟಿಗರು!

ಮಕ್ಕಳು ಅಪ್ರಾಪ್ತರಾಗಿರುವ ಕಾರಣ, ಅವರು ಅರ್ಹ ವಯಸ್ಸಿಗೆ ತಲುಪಿದ ನಂತರ ಅವರಿಗೆ ಹಣವನ್ನು ಪಾವತಿಸಲಾಗುವುದು. ಆದಾಗ್ಯೂ, ಅವರು ತಮ್ಮ ತಂದೆಯೊಂದಿಗೆ ಮಾತುಕತೆ ನಡೆಸುತ್ತಾರೆಯೇ ಎಂಬ ಅಂಶಗಳ ಆಧಾರದ ಮೇಲೆ ಅವರ ಮಕ್ಕಳು ಪಡೆಯುವ ಅಂತಿಮ ಮೊತ್ತವನ್ನು ಬದಲಾಯಿಸಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ವಿಚ್ಚೇದನ ಪರಿಹಾರದ ಮೊತ್ತವು ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ದುಬಾರಿ ವಿಚ್ಛೇದನದ ಪರಿಹಾರವಾಗಿದೆ ಎಂದು ಹೇಳಲಾಗಿದೆ.

ನ್ಯಾಯಾಲಯದ ತೀರ್ಪಿನ ಪ್ರಕಾರ, ದುಬೈ ಪ್ರಧಾನಿ ಅವರು ತಮ್ಮ ಮಾಜಿ ಪತ್ನಿ ಹಯಾ ಮತ್ತು ಮಕ್ಕಳ ಭದ್ರತಾ ವೆಚ್ಚವಾಗಿ ವರ್ಷಕ್ಕೆ 11 ಮಿಲಿಯನ್ ಪೌಂಡ್‌ಗಳ ಪರಿಹಾರ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ:ನಿಷೇಧ ತೆರವು; ಶನಿವಾರದಿಂದ ದುಬೈಗೆ ಏರ್ ಇಂಡಿಯಾ ಸೇವೆ ಪ್ರಾರಂಭ

ವಿಶೇಷವೇನೆಂದರೆ, ರಾಜಕುಮಾರಿ ಹಯಾ ಅವರು ಜೋರ್ಡಾನ್‌‌ನ ದಿವಂಗತ ರಾಜ ಹುಸೇನ್ ಅವರ ಮಗಳು. ಹಯಾ 2004 ರಲ್ಲಿ ದುಬೈ ಪ್ರಧಾನಿಯಾಗಿರುವ ಮಕ್ತೌಮ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಮತ್ತು 2019 ರವರೆಗೆ ಒಟ್ಟಿಗೆ ವಾಸಿಸುತ್ತಿದ್ದರು. ಅದೇ ವರ್ಷ ಹಯಾ ಅವರು ಮಕ್ತೌಮ್ ಅವರನ್ನು ತೊರೆದು ಯುಕೆಗೆ ವಾಪಸ್ಸಾದರು.

ತರುವಾಯ, ಹಯಾ ಅವರು ತನ್ನ ಮತ್ತು ತನ್ನ ಇಬ್ಬರು ಮಕ್ಕಳ ಪಾಲನೆಗಾಗಿ ಪರಿಹಾರ ನೀಡುವಂತೆ ಮೊಕದ್ದಮೆ ಹೂಡಿದ್ದರು.

ಶೇಖ್ ಮೊಹಮ್ಮದ್ ತನ್ನ ಹೆಂಡತಿಯ ಮೇಲೆ ಕಣ್ಣಿಡಲು ಪೆಗಾಸಸ್ ಬಳಸಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ನಂತರ, ಹಯಾ ಮತ್ತು ಅವರ ವಕೀಲರ ಫೋನ್‌ ಅನ್ನು ದುಬೈ ಪ್ರಧಾನಿ ಹ್ಯಾಕ್‌ ಮಾಡಿದ್ದಾರೆ. ಅದಕ್ಕಾಗಿ, ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ನಿರ್ಮಿಸಿದ ಪೆಗಾಸಸ್ ಸ್ಪೈವೇರ್ ಬಳಸಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ:ದುಬೈನಿಂದ ಬಂದ ಮುಸ್ಲಿಂ ಹುಡುಗರು ಕೊರೊನಾ ಟೆಸ್ಟ್‌ ಮಾಡಿಸಿಲ್ಲ ಎಂದು ಸುಳ್ಳು ಹರಡಿದ ಪಬ್ಲಿಕ್‌ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...