Homeಅಂತರಾಷ್ಟ್ರೀಯದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

ದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

- Advertisement -
- Advertisement -

ಮಾಜಿ ಪತ್ನಿಗೆ ವಿಚ್ಚೇದನ ಪರಿಹಾರ ಮತ್ತು ಮಕ್ಕಳ ಭದ್ರತೆಗಾಗಿ ಅವರಿಗೆ 550 ಮಿಲಿಯನ್ ಪೌಂಡ್‌ಗಳ (5,509 ಕೋಟಿ ರೂ.) ಪರಿಹಾರ ನೀಡುವಂತೆ ಯುಎಇ (ಸಂಯ್ತುಕ ಅರಬ್ ಸಂಸ್ಥಾನ)ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್-ಮಕ್ತೌಮ್ ಅವರಿಗೆ ಲಂಡನ್‌ ಹೈಕೋರ್ಟ್‌ ಆದೇಶಿಸಿದೆ.

ಪ್ರಧಾನಿ ಮಕ್ತೌಮ್ ಅವರ ಮಾಜಿ ಪತ್ನಿಯಾದ ಯುಕೆ ಮೂಲದ ರಾಜಕುಮಾರಿ ಹಯಾ ಬಿಂತ್‌‌ ಅಲ್-ಹುಸೇನ್‌ ಅವರಿಗೆ ವಿಚ್ಚೇದನದ ಪರಿಹಾರವಾಗಿ 251.5 ಮಿಲಿಯನ್ ಪೌಂಡ್‌ಗಳು ಮತ್ತು ಅವರ ಮಕ್ಕಳಾದ ಮಕ್ಕಳಾದ ಜಲೀಲಾ ಮತ್ತು ಜಾಯೆದ್ ಅವರ ಭದ್ರತೆಗಾಗಿ ಹಾಗೂ ಅವರಿಗೆ ಅಗತ್ಯವಿರುವ ಐದು ಮನೆಗೆಲಸದವರನ್ನು ನೇಮಿಸಿಕೊಳ್ಳುವುಕ್ಕಾಗಿ 290 ಮಿಲಿಯನ್ ಪೌಂಡ್‌ಗಳನ್ನು ಪಾವತಿಸಬೇಕು ಎಂದು ಬ್ರಿಟನ್‌ ಕೋರ್ಟ್‌ ಆದೇಶ ನೀಡಿದೆ.

ಇದನ್ನೂ ಓದಿ:‘ಡೀಪ್ ಡೈವ್ ದುಬೈ’ – ವಿಶ್ವದ ಅತ್ಯಂತ ಆಳವಾದ ಈಜುಕೊಳದ ವಿಡಿಯೊಗೆ ಹರ್ಷಗೊಂಡ ನೆಟ್ಟಿಗರು!

ಮಕ್ಕಳು ಅಪ್ರಾಪ್ತರಾಗಿರುವ ಕಾರಣ, ಅವರು ಅರ್ಹ ವಯಸ್ಸಿಗೆ ತಲುಪಿದ ನಂತರ ಅವರಿಗೆ ಹಣವನ್ನು ಪಾವತಿಸಲಾಗುವುದು. ಆದಾಗ್ಯೂ, ಅವರು ತಮ್ಮ ತಂದೆಯೊಂದಿಗೆ ಮಾತುಕತೆ ನಡೆಸುತ್ತಾರೆಯೇ ಎಂಬ ಅಂಶಗಳ ಆಧಾರದ ಮೇಲೆ ಅವರ ಮಕ್ಕಳು ಪಡೆಯುವ ಅಂತಿಮ ಮೊತ್ತವನ್ನು ಬದಲಾಯಿಸಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ವಿಚ್ಚೇದನ ಪರಿಹಾರದ ಮೊತ್ತವು ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ದುಬಾರಿ ವಿಚ್ಛೇದನದ ಪರಿಹಾರವಾಗಿದೆ ಎಂದು ಹೇಳಲಾಗಿದೆ.

ನ್ಯಾಯಾಲಯದ ತೀರ್ಪಿನ ಪ್ರಕಾರ, ದುಬೈ ಪ್ರಧಾನಿ ಅವರು ತಮ್ಮ ಮಾಜಿ ಪತ್ನಿ ಹಯಾ ಮತ್ತು ಮಕ್ಕಳ ಭದ್ರತಾ ವೆಚ್ಚವಾಗಿ ವರ್ಷಕ್ಕೆ 11 ಮಿಲಿಯನ್ ಪೌಂಡ್‌ಗಳ ಪರಿಹಾರ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ:ನಿಷೇಧ ತೆರವು; ಶನಿವಾರದಿಂದ ದುಬೈಗೆ ಏರ್ ಇಂಡಿಯಾ ಸೇವೆ ಪ್ರಾರಂಭ

ವಿಶೇಷವೇನೆಂದರೆ, ರಾಜಕುಮಾರಿ ಹಯಾ ಅವರು ಜೋರ್ಡಾನ್‌‌ನ ದಿವಂಗತ ರಾಜ ಹುಸೇನ್ ಅವರ ಮಗಳು. ಹಯಾ 2004 ರಲ್ಲಿ ದುಬೈ ಪ್ರಧಾನಿಯಾಗಿರುವ ಮಕ್ತೌಮ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಮತ್ತು 2019 ರವರೆಗೆ ಒಟ್ಟಿಗೆ ವಾಸಿಸುತ್ತಿದ್ದರು. ಅದೇ ವರ್ಷ ಹಯಾ ಅವರು ಮಕ್ತೌಮ್ ಅವರನ್ನು ತೊರೆದು ಯುಕೆಗೆ ವಾಪಸ್ಸಾದರು.

ತರುವಾಯ, ಹಯಾ ಅವರು ತನ್ನ ಮತ್ತು ತನ್ನ ಇಬ್ಬರು ಮಕ್ಕಳ ಪಾಲನೆಗಾಗಿ ಪರಿಹಾರ ನೀಡುವಂತೆ ಮೊಕದ್ದಮೆ ಹೂಡಿದ್ದರು.

ಶೇಖ್ ಮೊಹಮ್ಮದ್ ತನ್ನ ಹೆಂಡತಿಯ ಮೇಲೆ ಕಣ್ಣಿಡಲು ಪೆಗಾಸಸ್ ಬಳಸಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ನಂತರ, ಹಯಾ ಮತ್ತು ಅವರ ವಕೀಲರ ಫೋನ್‌ ಅನ್ನು ದುಬೈ ಪ್ರಧಾನಿ ಹ್ಯಾಕ್‌ ಮಾಡಿದ್ದಾರೆ. ಅದಕ್ಕಾಗಿ, ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ನಿರ್ಮಿಸಿದ ಪೆಗಾಸಸ್ ಸ್ಪೈವೇರ್ ಬಳಸಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ:ದುಬೈನಿಂದ ಬಂದ ಮುಸ್ಲಿಂ ಹುಡುಗರು ಕೊರೊನಾ ಟೆಸ್ಟ್‌ ಮಾಡಿಸಿಲ್ಲ ಎಂದು ಸುಳ್ಳು ಹರಡಿದ ಪಬ್ಲಿಕ್‌ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...