Homeಅಂತರಾಷ್ಟ್ರೀಯದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

ದುಬೈ: ಮಾಜಿ ಪತ್ನಿಗೆ 5,509 ಕೋಟಿ ರೂ. ವಿಚ್ಛೇದನ ಪರಿಹಾರ ನೀಡುವಂತೆ ಪ್ರಧಾನಿಗೆ ಕೋರ್ಟ್‌ ಆದೇಶ!

- Advertisement -
- Advertisement -

ಮಾಜಿ ಪತ್ನಿಗೆ ವಿಚ್ಚೇದನ ಪರಿಹಾರ ಮತ್ತು ಮಕ್ಕಳ ಭದ್ರತೆಗಾಗಿ ಅವರಿಗೆ 550 ಮಿಲಿಯನ್ ಪೌಂಡ್‌ಗಳ (5,509 ಕೋಟಿ ರೂ.) ಪರಿಹಾರ ನೀಡುವಂತೆ ಯುಎಇ (ಸಂಯ್ತುಕ ಅರಬ್ ಸಂಸ್ಥಾನ)ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್-ಮಕ್ತೌಮ್ ಅವರಿಗೆ ಲಂಡನ್‌ ಹೈಕೋರ್ಟ್‌ ಆದೇಶಿಸಿದೆ.

ಪ್ರಧಾನಿ ಮಕ್ತೌಮ್ ಅವರ ಮಾಜಿ ಪತ್ನಿಯಾದ ಯುಕೆ ಮೂಲದ ರಾಜಕುಮಾರಿ ಹಯಾ ಬಿಂತ್‌‌ ಅಲ್-ಹುಸೇನ್‌ ಅವರಿಗೆ ವಿಚ್ಚೇದನದ ಪರಿಹಾರವಾಗಿ 251.5 ಮಿಲಿಯನ್ ಪೌಂಡ್‌ಗಳು ಮತ್ತು ಅವರ ಮಕ್ಕಳಾದ ಮಕ್ಕಳಾದ ಜಲೀಲಾ ಮತ್ತು ಜಾಯೆದ್ ಅವರ ಭದ್ರತೆಗಾಗಿ ಹಾಗೂ ಅವರಿಗೆ ಅಗತ್ಯವಿರುವ ಐದು ಮನೆಗೆಲಸದವರನ್ನು ನೇಮಿಸಿಕೊಳ್ಳುವುಕ್ಕಾಗಿ 290 ಮಿಲಿಯನ್ ಪೌಂಡ್‌ಗಳನ್ನು ಪಾವತಿಸಬೇಕು ಎಂದು ಬ್ರಿಟನ್‌ ಕೋರ್ಟ್‌ ಆದೇಶ ನೀಡಿದೆ.

ಇದನ್ನೂ ಓದಿ:‘ಡೀಪ್ ಡೈವ್ ದುಬೈ’ – ವಿಶ್ವದ ಅತ್ಯಂತ ಆಳವಾದ ಈಜುಕೊಳದ ವಿಡಿಯೊಗೆ ಹರ್ಷಗೊಂಡ ನೆಟ್ಟಿಗರು!

ಮಕ್ಕಳು ಅಪ್ರಾಪ್ತರಾಗಿರುವ ಕಾರಣ, ಅವರು ಅರ್ಹ ವಯಸ್ಸಿಗೆ ತಲುಪಿದ ನಂತರ ಅವರಿಗೆ ಹಣವನ್ನು ಪಾವತಿಸಲಾಗುವುದು. ಆದಾಗ್ಯೂ, ಅವರು ತಮ್ಮ ತಂದೆಯೊಂದಿಗೆ ಮಾತುಕತೆ ನಡೆಸುತ್ತಾರೆಯೇ ಎಂಬ ಅಂಶಗಳ ಆಧಾರದ ಮೇಲೆ ಅವರ ಮಕ್ಕಳು ಪಡೆಯುವ ಅಂತಿಮ ಮೊತ್ತವನ್ನು ಬದಲಾಯಿಸಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ವಿಚ್ಚೇದನ ಪರಿಹಾರದ ಮೊತ್ತವು ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ದುಬಾರಿ ವಿಚ್ಛೇದನದ ಪರಿಹಾರವಾಗಿದೆ ಎಂದು ಹೇಳಲಾಗಿದೆ.

ನ್ಯಾಯಾಲಯದ ತೀರ್ಪಿನ ಪ್ರಕಾರ, ದುಬೈ ಪ್ರಧಾನಿ ಅವರು ತಮ್ಮ ಮಾಜಿ ಪತ್ನಿ ಹಯಾ ಮತ್ತು ಮಕ್ಕಳ ಭದ್ರತಾ ವೆಚ್ಚವಾಗಿ ವರ್ಷಕ್ಕೆ 11 ಮಿಲಿಯನ್ ಪೌಂಡ್‌ಗಳ ಪರಿಹಾರ ಮೊತ್ತವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ:ನಿಷೇಧ ತೆರವು; ಶನಿವಾರದಿಂದ ದುಬೈಗೆ ಏರ್ ಇಂಡಿಯಾ ಸೇವೆ ಪ್ರಾರಂಭ

ವಿಶೇಷವೇನೆಂದರೆ, ರಾಜಕುಮಾರಿ ಹಯಾ ಅವರು ಜೋರ್ಡಾನ್‌‌ನ ದಿವಂಗತ ರಾಜ ಹುಸೇನ್ ಅವರ ಮಗಳು. ಹಯಾ 2004 ರಲ್ಲಿ ದುಬೈ ಪ್ರಧಾನಿಯಾಗಿರುವ ಮಕ್ತೌಮ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಮತ್ತು 2019 ರವರೆಗೆ ಒಟ್ಟಿಗೆ ವಾಸಿಸುತ್ತಿದ್ದರು. ಅದೇ ವರ್ಷ ಹಯಾ ಅವರು ಮಕ್ತೌಮ್ ಅವರನ್ನು ತೊರೆದು ಯುಕೆಗೆ ವಾಪಸ್ಸಾದರು.

ತರುವಾಯ, ಹಯಾ ಅವರು ತನ್ನ ಮತ್ತು ತನ್ನ ಇಬ್ಬರು ಮಕ್ಕಳ ಪಾಲನೆಗಾಗಿ ಪರಿಹಾರ ನೀಡುವಂತೆ ಮೊಕದ್ದಮೆ ಹೂಡಿದ್ದರು.

ಶೇಖ್ ಮೊಹಮ್ಮದ್ ತನ್ನ ಹೆಂಡತಿಯ ಮೇಲೆ ಕಣ್ಣಿಡಲು ಪೆಗಾಸಸ್ ಬಳಸಿದ್ದಾನೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ನಂತರ, ಹಯಾ ಮತ್ತು ಅವರ ವಕೀಲರ ಫೋನ್‌ ಅನ್ನು ದುಬೈ ಪ್ರಧಾನಿ ಹ್ಯಾಕ್‌ ಮಾಡಿದ್ದಾರೆ. ಅದಕ್ಕಾಗಿ, ಇಸ್ರೇಲ್‌ನ ಎನ್‌ಎಸ್‌ಒ ಗ್ರೂಪ್ ನಿರ್ಮಿಸಿದ ಪೆಗಾಸಸ್ ಸ್ಪೈವೇರ್ ಬಳಸಿದ್ದಾರೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ:ದುಬೈನಿಂದ ಬಂದ ಮುಸ್ಲಿಂ ಹುಡುಗರು ಕೊರೊನಾ ಟೆಸ್ಟ್‌ ಮಾಡಿಸಿಲ್ಲ ಎಂದು ಸುಳ್ಳು ಹರಡಿದ ಪಬ್ಲಿಕ್‌ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....