Homeಅಂತರಾಷ್ಟ್ರೀಯಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

ಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಐರ್ಲ್ಯಾಂಡ್ ರಾಜಧಾನಿ ಡಬ್ಲಿನ್ ನಗರದಲ್ಲಿ ಮಹಿಳೆ ಮತ್ತು ಚಿಕ್ಕ ಮಕ್ಕಳಿಗೆ ಚೂರಿಯಿಂದ ಇರಿದ ಬಳಿಕ ಭೀಕರ ಹಿಂಸಾಚಾರ ಭುಗಿಲೆದ್ದಿದ್ದು, ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಹಾಗೂ ಗಲಭೆ ನಿಗ್ರಹಕ್ಕೆ ಪ್ರಯತ್ನಿಸುತ್ತಿದ್ದ ಪೊಲೀಸರ ಮೇಲೆ ಕೂಡ ದಾಳಿ ನಡೆಸಲಾಗಿದೆ.

ಡಬ್ಲಿನ್ ನಗರದ ಓ ಕಾನ್ನೆಲ್ ಸ್ಟ್ರೀಟ್‌ನ ಮುಖ್ಯ ರಸ್ತೆಯ ಬಳಿ 5 ವರ್ಷದ ಬಾಲಕಿ, ಓರ್ವ ಮಹಿಳೆ ಹಾಗೂ ಇನ್ನಿಬ್ಬರು ಸಣ್ಣ ಮಕ್ಕಳ ಮೇಲೆ ದುಷ್ಕರ್ಮಿಯೋರ್ವ ಚಾಕುವಿನಿಂದ ದಾಳಿ ನಡೆಸಿದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಗಲಭೆಗೆ ಬಲಪಂಥೀಯ ಪ್ರತಿಭಟನಾಕಾರರು ಕಾರಣ ಎಂದು ಆರೋಪಿಸಲಾಗಿದೆ. ವಲಸೆ ನೀತಿ ವಿರೋಧಿಸಿ ಸಣ್ಣ ಗುಂಪೊಂದು ಪ್ರತಿಭಟನೆ ನಡೆಸಿದೆ. ಈ ಸಂದರ್ಭದಲ್ಲಿ ಇರಿತವಾಗಿದೆ. ಆಗ ಪೊಲೀಸರು ಮತ್ತು ಪ್ರತಿಭಟನಾ ಗುಂಪಿನ ನಡುವೆ ಘರ್ಷಣೆಯೂ ನಡೆದಿದೆ.

ಸುಮಾರು 200ರಿಂದ 300 ಜನರಿದ್ದ ಗುಂಪು ಡಬ್ಬಲ್ ಡೆಕ್ಕರ್ ಬಸ್, ಪೊಲೀಸ್ ಕಾರು, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧಗೊಂಡಿತ್ತು. ಗಲಭೆಕೋರರು ಅಂಗಡಿಯ ಕಿಟಕಿಗಳನ್ನು ಒಡೆದು ಹಾಕಿದ್ದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದೆ. ಹಾಲಿಡೇ ಇನ್‌ ಹೋಟೆಲ್ ಮೇಲೆ ಕೂಡ ಉದ್ರಿಕ್ತ ಗುಂಪು ದಾಳಿ ನಡೆಸಿದೆ.

ಮುಖ್ಯ ಅಧೀಕ್ಷಕ ಪ್ಯಾಟ್ರಿಕ್ ಮ್ಯಾಕ್‌ಮೆನಾಮಿನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಇದು ಅನಪೇಕ್ಷವಾಗಿ ನಿರ್ಮಿಸಿದ ಉದ್ರೀಕ್ತ ಪರಿಸ್ಥಿತಿ. ಶಾಂತಿಯನ್ನು ಪುನಃಸ್ಥಾಪಿಸಲಾಗಿದೆ. ಘಟನೆಯಲ್ಲಿ ನಮ್ಮ ಕೆಲ ಸಿಬ್ಬಂದಿಗಳಿಗೆ ಕೂಡ ಗಾಯಗಳಾಗಿದೆ ಆದರೆ ಯಾರಿಗೂ ಗಂಭೀರ ಪರಿಣಾಮದ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ.

ಮೂವರು ಚಿಕ್ಕ ಮಕ್ಕಳನ್ನು ಬೀದಿಯಲ್ಲಿ ಇರಿದಿದ್ದರಿಂದ ಉಂಟಾದ ಗಲಭೆಗೆ ಸಂಬಂಧಿಸಿ  34 ಜನರನ್ನು ಬಂಧಿಸಲಾಗಿದೆ ಮತ್ತು ಆ ಪ್ರದೇಶದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಹಿನ್ನೆಲೆ ಸೆಂಟ್ರಲ್ ಡಬ್ಲಿನ್‌ನ ಬೀದಿಗಳಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಚೂರಿ ಇರಿತಕ್ಕೆ ಸಂಬಂಧಿಸಿದಂತೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯಾವ ರಾಷ್ಟ್ರಕ್ಕೆ ಸೇರಿದವನು ಎಂಬುದು ಪತ್ತೆಯಾಗಿಲ್ಲ. ಸಾರ್ವಜನಿಕರ ಹಲ್ಲೆಯಿಂದ ಆತನಿಗೂ ಗಂಭೀರ ಗಾಯಗಳಾಗಿದೆ. ಈತನ ರಾಷ್ಟ್ರೀಯತೆಯ ಬಗ್ಗೆ ವದಂತಿ ಹರಡಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿತ್ತು. ಇರಿತದ ಕೃತ್ಯ ನಡೆಸಿದ ಆರೋಪಿಗೆ ಭಯೋತ್ಪಾದಕ ಗುಂಪಿನ ನಂಟಿರುವ ಸಾಧ್ಯತೆಯ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.

ಶಂಕಿತ ಆರೋಪಿಯು ಡಬ್ಲಿನ್‌ನ ಪಾರ್ನೆಲ್ ಸ್ಕ್ವಾರ್ ಈಸ್ಟ್ ಪ್ರದೇಶದಲ್ಲಿ ಹಲವಾರು ಮಂದಿಯನ್ನು ಇರಿದಿದ್ದಾನೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ಪೊಲೀಸ್ ಅಧೀಕ್ಷಕ ಲಿಯಾಮ್ ಗೆರಾಗ್ಟಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆಯನ್ನು ಐರ್ಲ್ಯಾಂಡ್ ಪ್ರಧಾನಿ ಲಿಯೊ ವರಾಡ್ಕರ್ ಕೂಡ ಖಂಡಿಸಿದ್ದಾರೆ.

ಇದನ್ನು ಓದಿ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...