Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...