Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....