Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...