Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...