Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...