Homeಮುಖಪುಟಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮಾನ್ಸೂನ್‌ ಮಳೆಯ ಆರ್ಭಟಕ್ಕೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಭಾರತದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಆರಂಭವಾಗಿದೆ. ಜೂನ್‌ ಮೊದಲ ವಾರದಲ್ಲಿ ಕೇರಳದ ಮೂಲಕ ಭಾರತ ಪ್ರವೇಶಿಸಿದ ಮಾನ್ಸೂನ್ ಈಗ ಕರ್ನಾಟಕ, ಮಹಾರಾಷ್ಟ್ರ ಗುಜರಾತ್‌ ರಾಜ್ಯಗಳಲ್ಲಿ ಉತ್ತಮ ಮಳೆ ಸುರಿಸುತ್ತಿದೆ. ಕರ್ನಾಟಕ ಮತ್ತು ಕೇರಳದಲ್ಲಿ ಮಾನ್ಸೂನ್‌ ಅಬ್ಬರ ಸಾಧರಣವಾಗಿದೆ. ಪಶ್ಚಿಮ ಕರಾವಳಿಯ ಮಹಾನಗರ ಮುಂಬೈನಲ್ಲಿ ನಿನ್ನೆ ಮಂಗಳವಾರ ಜೂನ್‌ 8 ರಿಂದ ಮಾನ್ಸೂನ್‌ ಆರ್ಭಟ ತೀವ್ರಗೊಂಡಿದೆ. ಇಂದು ಬುಧವಾರ ಜೂನ್ 9 ರಂದು ಕೂಡ ಮುಂಬೈ ನಗರ ಮತ್ತು ಸುತ್ತ ಮುತ್ತ ಭಾರಿ ಮಳೆ ಸುರಿದಿದೆ.

ಚಿತ್ರ ಕೃಪೆ : ಕ್ವಿಂಟ್

ಮಾನ್ಸೂನ್‌ ಮಳೆಯ ಪರಿಣಾಮ ಮುಂಬೈನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿ ಸಾವಿರಾರು ಜನರು ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಇನ್ನೊಂದೆಡೆ ರಸ್ತೆಗಳು ಕೂಡ ಜಲಾವೃತವಾಗಿದ್ದು ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಮುಂಬೈ ನಗರ ಮತ್ತು ಉಪನಗರಗಳ ಹಲವಾರು ಕಡೆ ವಿದ್ಯತ್‌ ಕಂಬಗಳು ಧರೆಗುರಿಳಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.‌‌

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಯಿಂದಾಗಿ ರಸ್ತೆಗಳ ತುಂಬಾ ನೀರು ಹರಿಯುತ್ತಿರುವುದು ವಾಹನಗಳ ಸಂಪರ್ಕಕ್ಕೆ ತೊಡಕಾಗಿದೆ. ಮುಂಬೈ ನಗರದ ಚೆಂಬುರ್‌, ಈಸ್ಟರ್ನ್‌ ಎಕ್ಸ್‌ಪ್ರೆಸ್‌ ವೇ, ದಾದರ್‌ ಕಿಂಗ್‌ ಸರ್ಕಲ್‌, ಸಿಯೋನ್‌ ಮತ್ತು ಜಿಟಿಬಿ ನಗರಗಳಲ್ಲಿ ಭಾರೀ ಮಳೆಯಿಂದಾಗಿ ಗಂಟೆಗಳ ಕಾಲ ಕಿಲೋಮಿಟರ್‌ಗಳ ದೂರ ವಾಹನಗಳು ಸಾಲಾಗಿ ನಿಂತಿವೆ.

ಚಿತ್ರ ಕೃಪೆ : ಕ್ವಿಂಟ್

ಭಾರಿ ಮಳೆಗೆ ರೈಲು ಸಂಚಾರ ಸ್ಥಗಿತ

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನ್ಸನ್‌ (CSMT) ನಿಂದ ಅನೇಕ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಮುಂಬೈ-ಕುರ್ಲಾ ಮಾರ್ಗದಲ್ಲಿ ಇಂದು ಬೆಳಗ್ಗೆ 10:20 ಗಂಟೆಯಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ CRPO ತಿಳಿಸಿದ್ದಾರೆ. ಕುರ್ಲಾ, ಚೆಂಬೂರ್‌ ಗಳಲ್ಲಿ ರೈಲ್ವೆ ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದು ರೈಲುಗಳ ಸಂಚಾರವನ್ನು ಆಸಾಧ್ಯಗೊಳಿಸಿದೆ. ಕುರ್ಲಾ ಮಾರ್ಗವಾಗಿ ಮುಂಬೈ ಛತ್ರಪತಿ ಶಿವಾಜಿ ಸ್ಟೇಷನ್‌ ಗೆ ಬರುವ ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಲಾಗಿದೆ ಎಂದು ಸೆಂಟ್ರಲ್‌ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ಜೂನ್‌ 8 ರ ಮುಂಜಾನೆ 8:30 ಗಂಟೆಯಿಂದ ಬುಧವಾರ 8:30 ನಿಮಿಷದ ಅವಧಿಯಲ್ಲಿ ಕೊಲಾಬಾ ಒಂದರಲ್ಲೇ 65.4 ಮಿಲಿಮೀಟರ್‌ ಮಳೆಯಾಗಿದೆಯೆಂದು ವರದಿಯಾಗಿದೆ. ಇದೇ ವೇಳೆಯಲ್ಲಿ ಸಾಂತಾಕ್ರೂಝ್‌ನಲ್ಲಿ 50 ಮಿಲಿಮೀಟರ್‌ ಮಳೆಯಾಗಿದೆ.

4.16 ಮೀಟರ್‌ ಎತ್ತರದ ಅಲೆಗಳು ಸಮದ್ರದಲ್ಲಿ ಕಾಣಿಸಿಕೊಳ್ಳಲಿವೆ. ಮೀನುಗಾರರು ಮತ್ತು ಇತರರು ಯಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮುಂಬೈ, ಪುಣೆ, ಸೇರಿ ಮಹಾರಾಷ್ಟ್ರದ ನಗರಗಳಲ್ಲಿ ಮುಂದಿನ 4 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.‌


ಇದನ್ನೂ ಓದಿ :ಉತ್ತರ ಪ್ರದೇಶ: ಹಿಂದೊಮ್ಮೆ ರಾಹುಲ್‍ ಗಾಂಧಿಗೆ ನಿಕಟವಾಗಿದ್ದ ಜಿತಿನ್‍ ಪ್ರಸಾದ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...