Homeಮುಖಪುಟದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

- Advertisement -
- Advertisement -

ಎಲ್ಲರಿಗೂ ‘ಸಮಾನ ನ್ಯಾಯ’ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯವನ್ನು ನಿರಾಕರಿಸುವ ಸರ್ಕಾರದ ಯಾವುದೇ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಜ್ವಲಂತ ಉದಾಹರಣೆಯೆಂದರೆ 2008ರಲ್ಲಿ ತುಮಕೂರು ಜಿಲ್ಲೆಯ ದುಂಡಾ ಗ್ರಾಮದಲ್ಲಿ ಕ್ರೂರ ಜಾತಿ ಹಿಂಸೆಗೆ ಒಳಗಾದ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿರುವುದಾಗಿದೆ.

ದಲಿತರನ್ನು ಜಾತಿ ದೌರ್ಜನ್ಯದಿಂದ ರಕ್ಷಿಸಲು ವಿಫಲರಾದಾಗ ಸಾಮಾಜಿಕ ನ್ಯಾಯಾದ ಎಲ್ಲಾ ಭಾಗಿಗಳು ಮುಚ್ಚಿದಂತಾಗಿದೆ. ಜಾತಿ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಮೇಲ್ಮನವಿ ಸಲ್ಲಿಸಲು ಸರಕಾರ ವಿಫಲವಾಗುತ್ತದೆ. ಸರ್ಕಾರದ ಈ ನಿರಾಸಕ್ತಿಯು ಸಮಾನತೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಸಂವಿಧಾನದ ಮೂಲ ಮೌಲ್ಯಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆಯ ಮೂಲ ಆಶಯವನ್ನು ಜಾರಿಗೆ ಸರ್ಕಾರವು ಶ್ರದ್ಧೆ ತೋರದ ಹೊರತು, ಜಾತಿರಹಿತ ಸಮಾಜದ ನಿರ್ಮಾಣ ಕೇವಲ ಕನಸಾಗಿ ಉಳಿಯುತ್ತದೆ ಎಂದು ಸುಪ್ರೀಂಕೋರ್ಟ್ ಹಲವಾರು ಪ್ರಕರಣಗಳಲ್ಲಿ ಅಭಿಪ್ರಾಯಪಟ್ಟಿತ್ತು ಎನ್ನುವುದು ಗಮನಾರ್ಹ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂಡಾ ಗ್ರಾಮದಲ್ಲಿ 2008ರ ಆ.14ರಂದು ಹೇಯ ಜಾತಿ ದೌರ್ಜನ್ಯ ನಡೆದಿತ್ತು. ಗೋಪಾಲ ಕೃಷ್ಣ ಎಂಬ ಸವರ್ಣಿಯನ ಜಮೀನಿಗೆ ದಲಿತ ಸಮುದಾಯದ ಶಿವಮೂರ್ತಿ ಮತ್ತು ದಿಲೀಪ್ ಎಂಬ ದಲಿತ ಯುವಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಜಮೀನಿನ ಮಾಲಕ ಗೋಪಾಲ ಕೃಷ್ಣನ ಮೇಲೆ ಜಮೀನು ವಿವಾದ ಹೊಂದಿದ್ದ ಇನ್ನೋರ್ವ ಸವರ್ಣಿಯ ಜಾತಿಗೆ ಸೇರಿದ ಸುದೀಪ್ ಎಂಬಾತ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೂರ್ತಿ ಹಾಗೂ ದಿಲೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಸುದೀಪ್ ವಿರುದ್ಧ ಶಿವಮೂರ್ತಿ ಮತ್ತು ದಿಲೀಪ್ ದಂಡಿನಶಿವಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಲಿತರು ತಮ್ಮ ವಿರುದ್ಧ ದೂರು ದಾಖಲಿಸಲು ಧೈರ್ಯ ಮಾಡಿದ್ದಾರೆ ಎಂದು ಕೋಪಗೊಂಡ ಸುದೀಪ್ ಮತ್ತು ಸವರ್ಣಿಯ ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದಲಿತ ಸಮುದಾಯದ ಕೇರಿಗೆ ನುಗ್ಗಿದೆ.  ಅಲ್ಲಿ ದಲಿತ ಸಮುದಾಯದ ಜನರ ಮೇಲೆ ಜಾತಿ ನಿಂದನೆಗಳನ್ನು ಮಾಡಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ  ಸುಮಾರು 12 ಜನರಿಗೆ ಗಂಭೀರ ಗಾಯಗಳಾಗಿತ್ತು. ಈ ವೇಳೆ ಕೇರಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ದಲಿತ ಸಮುದಾಯದ ಗೋವಿಂದರಾಜು ಎಂಬ ಯುವಕ ಹಾಗೂ ಆತನ ತಾಯಿ ಲಕ್ಷ್ಮಮ್ಮ ಅವರಿಗೆ ಗಂಭೀರ ಗಾಯಗಳಾಗಿತ್ತು.

ಈ ಬಗ್ಗೆ ಗೋವಿಂದರಾಜು ಅವರ ತಾಯಿ ಲಕ್ಷ್ಮಮ್ಮ ಅವರು ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಸವರ್ಣಿಯ ಜಾತಿಯ ಗುಂಪಿನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 147, 148, 323, 324 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(10), (11)ರಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಆರೋಪಿ ವಿರುದ್ಧ 2008ರ ಡಿ. 4ರಂದು ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ 2011ರ ಜೂ.23ರಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪು ಸಂತ್ರಸ್ತರಿಗೆ ಆಘಾತ ಮತ್ತು ನಿರಾಶೆಯನ್ನುಂಟುಮಾಡಿದೆ ಮತ್ತು ಕಂಬಾಲಪಲ್ಲಿಯಲ್ಲಿ ದಲಿತ ಸಮುದಾಯಕ್ಕೆ ಆದ ಅನ್ಯಾಯ ಪುನರಾವರ್ತನೆಯಾಗಿದೆ ಎಂದು ಸಮುದಾಯ ಭಾವಿಸಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯ ಕಂಬಾಲಪಲ್ಲಿ ಗ್ರಾಮದಲ್ಲಿ 7ಮಂದಿ ದಲಿತರನ್ನು 2000 ವಿಷವಿಯ ಮಾ.11ರಂದು ಭೀಕರವಾಗಿ ಹತ್ಯೆ ಮಾಡಲಾಯಿತು. ದಲಿತರ ಮೇಲೆ ಹಲ್ಲೆ ನಡೆಸಿ 2 ಮನೆಗಳಿಗೆ ಬೀಗ ಹಾಕಿ ನಂತರ ಮನೆಗೆ ಬೆಂಕಿ ಹಚ್ಚಿ ದಲಿತರನ್ನು ಸುಟ್ಟು ಹಾಕಲಾಗಿತ್ತು. ಕರ್ನಾಟಕವಷ್ಟೇ ಅಲ್ಲ ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಈ ಘೋರ ಕೃತ್ಯದಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ನಿಂದ ಆರೋಪಿಗಳು ಖುಲಾಸೆಗೊಂಡು ಮುಕ್ತವಾಗಿ ನಡೆದಾಡುತ್ತಿದ್ದಾರೆ.

ದುಂಡಾ ಜಾತಿ ದೌರ್ಜನ್ಯಕ್ಕೆ ಒಳಗಾದ ಗೋವಿಂದರಾಜು ಮತ್ತು ಅವರ ತಾಯಿ ಲಕ್ಷ್ಮಮ್ಮ ಅವರು ತಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ದಲಿತ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಬಗ್ಗೆ ಅವರು ಹಲವಾರು ಬಾರಿ ಸರ್ಕಾರದ ಗಮನ ಸೆಳೆದಿದ್ದರು. ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಅಂದಿನ ಬಿಜೆಪಿ ಸರಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಫಲವಾಗಿತ್ತು. ದಲಿತ ಸಮುದಾಯದ ಬಗ್ಗೆ ಬಿಜೆಪಿ ಸರಕಾರ ಹೊಂದಿದ್ದ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. ಆದರೂ ದಲಿತ ಸಂಘಟನೆಗಳ ಬೆಂಬಲದೊಂದಿಗೆ 2011ರ ಆ.23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿಸಂತ್ರಸ್ತರು  ಮೇಲ್ಮನವಿ ಸಲ್ಲಿಸಿದ್ದರು.

ಘೋರ ಘಟನೆಯ ಹದಿನೈದು ವರ್ಷಗಳ ನಂತರ ಕರ್ನಾಟಕ ಉಚ್ಚ ನ್ಯಾಯಾಲಯವು ವಾದಗಳನ್ನು ಆಲಿಸಿ ಮತ್ತು ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅ.31, 2023ರಂದು ತನ್ನ ತೀರ್ಪನ್ನು ನೀಡಿತು. ಈ ಅಪರಾಧಗಳಲ್ಲಿ ಎಲ್ಲಾ 11 ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು  ಕೆಳಹಂತದ ವಿಚಾರಣಾ ನ್ಯಾಯಾಲಯವು ಸೂಕ್ತವಾಗಿ ಪರಿಗಣಿಸಲಿಲ್ಲ ಮತ್ತು ಎಲ್ಲಾ ಆರೋಪಿಗಳು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ತೋರಿಸುವ ಸ್ಪಷ್ಟ ಪುರಾವೆಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರದಲ್ಲಿದ್ದ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ದಲಿತ ಸಮುದಾಯದ ಆರೋಪ. ತುಮಕೂರು ಜಿಲ್ಲಾ ನ್ಯಾಯಾಲಯ ನೀಡಿದ ಖುಲಾಸೆ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿರುವುದು ಗಂಭೀರ ಜಾತಿ ದೌರ್ಜನ್ಯ ನಡೆಸುವ ಅಪರಾಧಿಗಳು ಕಾನೂನು ಕ್ರಮಗಳಿಂದ ಪಾರಾಗಲು ಅನುವು ಮಾಡಿಕೊಡುವುದನ್ನು ಪ್ರತಿಬಿಂಬಿಸುತ್ತದೆ.

ಹೈಕೋರ್ಟ್ ತೀರ್ಪು ಸಂತ್ರಸ್ತ ದಲಿತರ ಕುಟುಂಬಗಳಿಗೆ ನೆಮ್ಮದಿ ತಂದಿದ್ದರೂ, ವಿಚಾರಣಾ ನ್ಯಾಯಾಲಯದ ಖುಲಾಸೆ ಆದೇಶದ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಿರುವುದು ಬಿಜೆಪಿ ಸರ್ಕಾರದ ಪರಿಣಾಮಕಾರಿತ್ವ ಮತ್ತು ನ್ಯಾಯದ ಬದ್ಧತೆಯ ಬಗ್ಗೆ ದಲಿತರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಜೆಪಿ ಸರಕಾರ  ಪ್ರಕರಣದಲ್ಲಿ ದಲಿತರಿಗೆ ನ್ಯಾಯವನ್ನು ನಿರಾಕರಿಸಿದೆ ಮತ್ತು ದುಂಡಾ ಗ್ರಾಮದಲ್ಲಿ ನಡೆದ ಜಾತಿ ದೌರ್ಜನ್ಯವನ್ನು ನಿರ್ಲಕ್ಷಿಸಿದೆ ಎಂದು ದಲಿತರು ಆರೋಪಿಸಿದ್ದಾರೆ.

ಇದನ್ನು ಓದಿ: ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...