Homeಮುಖಪುಟದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

- Advertisement -
- Advertisement -

ಎಲ್ಲರಿಗೂ ‘ಸಮಾನ ನ್ಯಾಯ’ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯವನ್ನು ನಿರಾಕರಿಸುವ ಸರ್ಕಾರದ ಯಾವುದೇ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಜ್ವಲಂತ ಉದಾಹರಣೆಯೆಂದರೆ 2008ರಲ್ಲಿ ತುಮಕೂರು ಜಿಲ್ಲೆಯ ದುಂಡಾ ಗ್ರಾಮದಲ್ಲಿ ಕ್ರೂರ ಜಾತಿ ಹಿಂಸೆಗೆ ಒಳಗಾದ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿರುವುದಾಗಿದೆ.

ದಲಿತರನ್ನು ಜಾತಿ ದೌರ್ಜನ್ಯದಿಂದ ರಕ್ಷಿಸಲು ವಿಫಲರಾದಾಗ ಸಾಮಾಜಿಕ ನ್ಯಾಯಾದ ಎಲ್ಲಾ ಭಾಗಿಗಳು ಮುಚ್ಚಿದಂತಾಗಿದೆ. ಜಾತಿ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಮೇಲ್ಮನವಿ ಸಲ್ಲಿಸಲು ಸರಕಾರ ವಿಫಲವಾಗುತ್ತದೆ. ಸರ್ಕಾರದ ಈ ನಿರಾಸಕ್ತಿಯು ಸಮಾನತೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಸಂವಿಧಾನದ ಮೂಲ ಮೌಲ್ಯಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆಯ ಮೂಲ ಆಶಯವನ್ನು ಜಾರಿಗೆ ಸರ್ಕಾರವು ಶ್ರದ್ಧೆ ತೋರದ ಹೊರತು, ಜಾತಿರಹಿತ ಸಮಾಜದ ನಿರ್ಮಾಣ ಕೇವಲ ಕನಸಾಗಿ ಉಳಿಯುತ್ತದೆ ಎಂದು ಸುಪ್ರೀಂಕೋರ್ಟ್ ಹಲವಾರು ಪ್ರಕರಣಗಳಲ್ಲಿ ಅಭಿಪ್ರಾಯಪಟ್ಟಿತ್ತು ಎನ್ನುವುದು ಗಮನಾರ್ಹ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂಡಾ ಗ್ರಾಮದಲ್ಲಿ 2008ರ ಆ.14ರಂದು ಹೇಯ ಜಾತಿ ದೌರ್ಜನ್ಯ ನಡೆದಿತ್ತು. ಗೋಪಾಲ ಕೃಷ್ಣ ಎಂಬ ಸವರ್ಣಿಯನ ಜಮೀನಿಗೆ ದಲಿತ ಸಮುದಾಯದ ಶಿವಮೂರ್ತಿ ಮತ್ತು ದಿಲೀಪ್ ಎಂಬ ದಲಿತ ಯುವಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಜಮೀನಿನ ಮಾಲಕ ಗೋಪಾಲ ಕೃಷ್ಣನ ಮೇಲೆ ಜಮೀನು ವಿವಾದ ಹೊಂದಿದ್ದ ಇನ್ನೋರ್ವ ಸವರ್ಣಿಯ ಜಾತಿಗೆ ಸೇರಿದ ಸುದೀಪ್ ಎಂಬಾತ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೂರ್ತಿ ಹಾಗೂ ದಿಲೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಸುದೀಪ್ ವಿರುದ್ಧ ಶಿವಮೂರ್ತಿ ಮತ್ತು ದಿಲೀಪ್ ದಂಡಿನಶಿವಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಲಿತರು ತಮ್ಮ ವಿರುದ್ಧ ದೂರು ದಾಖಲಿಸಲು ಧೈರ್ಯ ಮಾಡಿದ್ದಾರೆ ಎಂದು ಕೋಪಗೊಂಡ ಸುದೀಪ್ ಮತ್ತು ಸವರ್ಣಿಯ ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದಲಿತ ಸಮುದಾಯದ ಕೇರಿಗೆ ನುಗ್ಗಿದೆ.  ಅಲ್ಲಿ ದಲಿತ ಸಮುದಾಯದ ಜನರ ಮೇಲೆ ಜಾತಿ ನಿಂದನೆಗಳನ್ನು ಮಾಡಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ  ಸುಮಾರು 12 ಜನರಿಗೆ ಗಂಭೀರ ಗಾಯಗಳಾಗಿತ್ತು. ಈ ವೇಳೆ ಕೇರಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ದಲಿತ ಸಮುದಾಯದ ಗೋವಿಂದರಾಜು ಎಂಬ ಯುವಕ ಹಾಗೂ ಆತನ ತಾಯಿ ಲಕ್ಷ್ಮಮ್ಮ ಅವರಿಗೆ ಗಂಭೀರ ಗಾಯಗಳಾಗಿತ್ತು.

ಈ ಬಗ್ಗೆ ಗೋವಿಂದರಾಜು ಅವರ ತಾಯಿ ಲಕ್ಷ್ಮಮ್ಮ ಅವರು ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಸವರ್ಣಿಯ ಜಾತಿಯ ಗುಂಪಿನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 147, 148, 323, 324 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(10), (11)ರಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಆರೋಪಿ ವಿರುದ್ಧ 2008ರ ಡಿ. 4ರಂದು ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ 2011ರ ಜೂ.23ರಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪು ಸಂತ್ರಸ್ತರಿಗೆ ಆಘಾತ ಮತ್ತು ನಿರಾಶೆಯನ್ನುಂಟುಮಾಡಿದೆ ಮತ್ತು ಕಂಬಾಲಪಲ್ಲಿಯಲ್ಲಿ ದಲಿತ ಸಮುದಾಯಕ್ಕೆ ಆದ ಅನ್ಯಾಯ ಪುನರಾವರ್ತನೆಯಾಗಿದೆ ಎಂದು ಸಮುದಾಯ ಭಾವಿಸಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯ ಕಂಬಾಲಪಲ್ಲಿ ಗ್ರಾಮದಲ್ಲಿ 7ಮಂದಿ ದಲಿತರನ್ನು 2000 ವಿಷವಿಯ ಮಾ.11ರಂದು ಭೀಕರವಾಗಿ ಹತ್ಯೆ ಮಾಡಲಾಯಿತು. ದಲಿತರ ಮೇಲೆ ಹಲ್ಲೆ ನಡೆಸಿ 2 ಮನೆಗಳಿಗೆ ಬೀಗ ಹಾಕಿ ನಂತರ ಮನೆಗೆ ಬೆಂಕಿ ಹಚ್ಚಿ ದಲಿತರನ್ನು ಸುಟ್ಟು ಹಾಕಲಾಗಿತ್ತು. ಕರ್ನಾಟಕವಷ್ಟೇ ಅಲ್ಲ ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಈ ಘೋರ ಕೃತ್ಯದಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ನಿಂದ ಆರೋಪಿಗಳು ಖುಲಾಸೆಗೊಂಡು ಮುಕ್ತವಾಗಿ ನಡೆದಾಡುತ್ತಿದ್ದಾರೆ.

ದುಂಡಾ ಜಾತಿ ದೌರ್ಜನ್ಯಕ್ಕೆ ಒಳಗಾದ ಗೋವಿಂದರಾಜು ಮತ್ತು ಅವರ ತಾಯಿ ಲಕ್ಷ್ಮಮ್ಮ ಅವರು ತಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ದಲಿತ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಬಗ್ಗೆ ಅವರು ಹಲವಾರು ಬಾರಿ ಸರ್ಕಾರದ ಗಮನ ಸೆಳೆದಿದ್ದರು. ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಅಂದಿನ ಬಿಜೆಪಿ ಸರಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಫಲವಾಗಿತ್ತು. ದಲಿತ ಸಮುದಾಯದ ಬಗ್ಗೆ ಬಿಜೆಪಿ ಸರಕಾರ ಹೊಂದಿದ್ದ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. ಆದರೂ ದಲಿತ ಸಂಘಟನೆಗಳ ಬೆಂಬಲದೊಂದಿಗೆ 2011ರ ಆ.23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿಸಂತ್ರಸ್ತರು  ಮೇಲ್ಮನವಿ ಸಲ್ಲಿಸಿದ್ದರು.

ಘೋರ ಘಟನೆಯ ಹದಿನೈದು ವರ್ಷಗಳ ನಂತರ ಕರ್ನಾಟಕ ಉಚ್ಚ ನ್ಯಾಯಾಲಯವು ವಾದಗಳನ್ನು ಆಲಿಸಿ ಮತ್ತು ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅ.31, 2023ರಂದು ತನ್ನ ತೀರ್ಪನ್ನು ನೀಡಿತು. ಈ ಅಪರಾಧಗಳಲ್ಲಿ ಎಲ್ಲಾ 11 ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು  ಕೆಳಹಂತದ ವಿಚಾರಣಾ ನ್ಯಾಯಾಲಯವು ಸೂಕ್ತವಾಗಿ ಪರಿಗಣಿಸಲಿಲ್ಲ ಮತ್ತು ಎಲ್ಲಾ ಆರೋಪಿಗಳು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ತೋರಿಸುವ ಸ್ಪಷ್ಟ ಪುರಾವೆಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರದಲ್ಲಿದ್ದ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ದಲಿತ ಸಮುದಾಯದ ಆರೋಪ. ತುಮಕೂರು ಜಿಲ್ಲಾ ನ್ಯಾಯಾಲಯ ನೀಡಿದ ಖುಲಾಸೆ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿರುವುದು ಗಂಭೀರ ಜಾತಿ ದೌರ್ಜನ್ಯ ನಡೆಸುವ ಅಪರಾಧಿಗಳು ಕಾನೂನು ಕ್ರಮಗಳಿಂದ ಪಾರಾಗಲು ಅನುವು ಮಾಡಿಕೊಡುವುದನ್ನು ಪ್ರತಿಬಿಂಬಿಸುತ್ತದೆ.

ಹೈಕೋರ್ಟ್ ತೀರ್ಪು ಸಂತ್ರಸ್ತ ದಲಿತರ ಕುಟುಂಬಗಳಿಗೆ ನೆಮ್ಮದಿ ತಂದಿದ್ದರೂ, ವಿಚಾರಣಾ ನ್ಯಾಯಾಲಯದ ಖುಲಾಸೆ ಆದೇಶದ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಿರುವುದು ಬಿಜೆಪಿ ಸರ್ಕಾರದ ಪರಿಣಾಮಕಾರಿತ್ವ ಮತ್ತು ನ್ಯಾಯದ ಬದ್ಧತೆಯ ಬಗ್ಗೆ ದಲಿತರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಜೆಪಿ ಸರಕಾರ  ಪ್ರಕರಣದಲ್ಲಿ ದಲಿತರಿಗೆ ನ್ಯಾಯವನ್ನು ನಿರಾಕರಿಸಿದೆ ಮತ್ತು ದುಂಡಾ ಗ್ರಾಮದಲ್ಲಿ ನಡೆದ ಜಾತಿ ದೌರ್ಜನ್ಯವನ್ನು ನಿರ್ಲಕ್ಷಿಸಿದೆ ಎಂದು ದಲಿತರು ಆರೋಪಿಸಿದ್ದಾರೆ.

ಇದನ್ನು ಓದಿ: ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...