Homeಮುಖಪುಟದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

- Advertisement -
- Advertisement -

ಎಲ್ಲರಿಗೂ ‘ಸಮಾನ ನ್ಯಾಯ’ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯವನ್ನು ನಿರಾಕರಿಸುವ ಸರ್ಕಾರದ ಯಾವುದೇ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಜ್ವಲಂತ ಉದಾಹರಣೆಯೆಂದರೆ 2008ರಲ್ಲಿ ತುಮಕೂರು ಜಿಲ್ಲೆಯ ದುಂಡಾ ಗ್ರಾಮದಲ್ಲಿ ಕ್ರೂರ ಜಾತಿ ಹಿಂಸೆಗೆ ಒಳಗಾದ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿರುವುದಾಗಿದೆ.

ದಲಿತರನ್ನು ಜಾತಿ ದೌರ್ಜನ್ಯದಿಂದ ರಕ್ಷಿಸಲು ವಿಫಲರಾದಾಗ ಸಾಮಾಜಿಕ ನ್ಯಾಯಾದ ಎಲ್ಲಾ ಭಾಗಿಗಳು ಮುಚ್ಚಿದಂತಾಗಿದೆ. ಜಾತಿ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಮೇಲ್ಮನವಿ ಸಲ್ಲಿಸಲು ಸರಕಾರ ವಿಫಲವಾಗುತ್ತದೆ. ಸರ್ಕಾರದ ಈ ನಿರಾಸಕ್ತಿಯು ಸಮಾನತೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಸಂವಿಧಾನದ ಮೂಲ ಮೌಲ್ಯಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆಯ ಮೂಲ ಆಶಯವನ್ನು ಜಾರಿಗೆ ಸರ್ಕಾರವು ಶ್ರದ್ಧೆ ತೋರದ ಹೊರತು, ಜಾತಿರಹಿತ ಸಮಾಜದ ನಿರ್ಮಾಣ ಕೇವಲ ಕನಸಾಗಿ ಉಳಿಯುತ್ತದೆ ಎಂದು ಸುಪ್ರೀಂಕೋರ್ಟ್ ಹಲವಾರು ಪ್ರಕರಣಗಳಲ್ಲಿ ಅಭಿಪ್ರಾಯಪಟ್ಟಿತ್ತು ಎನ್ನುವುದು ಗಮನಾರ್ಹ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂಡಾ ಗ್ರಾಮದಲ್ಲಿ 2008ರ ಆ.14ರಂದು ಹೇಯ ಜಾತಿ ದೌರ್ಜನ್ಯ ನಡೆದಿತ್ತು. ಗೋಪಾಲ ಕೃಷ್ಣ ಎಂಬ ಸವರ್ಣಿಯನ ಜಮೀನಿಗೆ ದಲಿತ ಸಮುದಾಯದ ಶಿವಮೂರ್ತಿ ಮತ್ತು ದಿಲೀಪ್ ಎಂಬ ದಲಿತ ಯುವಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಜಮೀನಿನ ಮಾಲಕ ಗೋಪಾಲ ಕೃಷ್ಣನ ಮೇಲೆ ಜಮೀನು ವಿವಾದ ಹೊಂದಿದ್ದ ಇನ್ನೋರ್ವ ಸವರ್ಣಿಯ ಜಾತಿಗೆ ಸೇರಿದ ಸುದೀಪ್ ಎಂಬಾತ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೂರ್ತಿ ಹಾಗೂ ದಿಲೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಸುದೀಪ್ ವಿರುದ್ಧ ಶಿವಮೂರ್ತಿ ಮತ್ತು ದಿಲೀಪ್ ದಂಡಿನಶಿವಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಲಿತರು ತಮ್ಮ ವಿರುದ್ಧ ದೂರು ದಾಖಲಿಸಲು ಧೈರ್ಯ ಮಾಡಿದ್ದಾರೆ ಎಂದು ಕೋಪಗೊಂಡ ಸುದೀಪ್ ಮತ್ತು ಸವರ್ಣಿಯ ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದಲಿತ ಸಮುದಾಯದ ಕೇರಿಗೆ ನುಗ್ಗಿದೆ.  ಅಲ್ಲಿ ದಲಿತ ಸಮುದಾಯದ ಜನರ ಮೇಲೆ ಜಾತಿ ನಿಂದನೆಗಳನ್ನು ಮಾಡಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ  ಸುಮಾರು 12 ಜನರಿಗೆ ಗಂಭೀರ ಗಾಯಗಳಾಗಿತ್ತು. ಈ ವೇಳೆ ಕೇರಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ದಲಿತ ಸಮುದಾಯದ ಗೋವಿಂದರಾಜು ಎಂಬ ಯುವಕ ಹಾಗೂ ಆತನ ತಾಯಿ ಲಕ್ಷ್ಮಮ್ಮ ಅವರಿಗೆ ಗಂಭೀರ ಗಾಯಗಳಾಗಿತ್ತು.

ಈ ಬಗ್ಗೆ ಗೋವಿಂದರಾಜು ಅವರ ತಾಯಿ ಲಕ್ಷ್ಮಮ್ಮ ಅವರು ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಸವರ್ಣಿಯ ಜಾತಿಯ ಗುಂಪಿನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 147, 148, 323, 324 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(10), (11)ರಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಆರೋಪಿ ವಿರುದ್ಧ 2008ರ ಡಿ. 4ರಂದು ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ 2011ರ ಜೂ.23ರಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪು ಸಂತ್ರಸ್ತರಿಗೆ ಆಘಾತ ಮತ್ತು ನಿರಾಶೆಯನ್ನುಂಟುಮಾಡಿದೆ ಮತ್ತು ಕಂಬಾಲಪಲ್ಲಿಯಲ್ಲಿ ದಲಿತ ಸಮುದಾಯಕ್ಕೆ ಆದ ಅನ್ಯಾಯ ಪುನರಾವರ್ತನೆಯಾಗಿದೆ ಎಂದು ಸಮುದಾಯ ಭಾವಿಸಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯ ಕಂಬಾಲಪಲ್ಲಿ ಗ್ರಾಮದಲ್ಲಿ 7ಮಂದಿ ದಲಿತರನ್ನು 2000 ವಿಷವಿಯ ಮಾ.11ರಂದು ಭೀಕರವಾಗಿ ಹತ್ಯೆ ಮಾಡಲಾಯಿತು. ದಲಿತರ ಮೇಲೆ ಹಲ್ಲೆ ನಡೆಸಿ 2 ಮನೆಗಳಿಗೆ ಬೀಗ ಹಾಕಿ ನಂತರ ಮನೆಗೆ ಬೆಂಕಿ ಹಚ್ಚಿ ದಲಿತರನ್ನು ಸುಟ್ಟು ಹಾಕಲಾಗಿತ್ತು. ಕರ್ನಾಟಕವಷ್ಟೇ ಅಲ್ಲ ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಈ ಘೋರ ಕೃತ್ಯದಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ನಿಂದ ಆರೋಪಿಗಳು ಖುಲಾಸೆಗೊಂಡು ಮುಕ್ತವಾಗಿ ನಡೆದಾಡುತ್ತಿದ್ದಾರೆ.

ದುಂಡಾ ಜಾತಿ ದೌರ್ಜನ್ಯಕ್ಕೆ ಒಳಗಾದ ಗೋವಿಂದರಾಜು ಮತ್ತು ಅವರ ತಾಯಿ ಲಕ್ಷ್ಮಮ್ಮ ಅವರು ತಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ದಲಿತ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಬಗ್ಗೆ ಅವರು ಹಲವಾರು ಬಾರಿ ಸರ್ಕಾರದ ಗಮನ ಸೆಳೆದಿದ್ದರು. ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಅಂದಿನ ಬಿಜೆಪಿ ಸರಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಫಲವಾಗಿತ್ತು. ದಲಿತ ಸಮುದಾಯದ ಬಗ್ಗೆ ಬಿಜೆಪಿ ಸರಕಾರ ಹೊಂದಿದ್ದ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. ಆದರೂ ದಲಿತ ಸಂಘಟನೆಗಳ ಬೆಂಬಲದೊಂದಿಗೆ 2011ರ ಆ.23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿಸಂತ್ರಸ್ತರು  ಮೇಲ್ಮನವಿ ಸಲ್ಲಿಸಿದ್ದರು.

ಘೋರ ಘಟನೆಯ ಹದಿನೈದು ವರ್ಷಗಳ ನಂತರ ಕರ್ನಾಟಕ ಉಚ್ಚ ನ್ಯಾಯಾಲಯವು ವಾದಗಳನ್ನು ಆಲಿಸಿ ಮತ್ತು ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅ.31, 2023ರಂದು ತನ್ನ ತೀರ್ಪನ್ನು ನೀಡಿತು. ಈ ಅಪರಾಧಗಳಲ್ಲಿ ಎಲ್ಲಾ 11 ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು  ಕೆಳಹಂತದ ವಿಚಾರಣಾ ನ್ಯಾಯಾಲಯವು ಸೂಕ್ತವಾಗಿ ಪರಿಗಣಿಸಲಿಲ್ಲ ಮತ್ತು ಎಲ್ಲಾ ಆರೋಪಿಗಳು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ತೋರಿಸುವ ಸ್ಪಷ್ಟ ಪುರಾವೆಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರದಲ್ಲಿದ್ದ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ದಲಿತ ಸಮುದಾಯದ ಆರೋಪ. ತುಮಕೂರು ಜಿಲ್ಲಾ ನ್ಯಾಯಾಲಯ ನೀಡಿದ ಖುಲಾಸೆ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿರುವುದು ಗಂಭೀರ ಜಾತಿ ದೌರ್ಜನ್ಯ ನಡೆಸುವ ಅಪರಾಧಿಗಳು ಕಾನೂನು ಕ್ರಮಗಳಿಂದ ಪಾರಾಗಲು ಅನುವು ಮಾಡಿಕೊಡುವುದನ್ನು ಪ್ರತಿಬಿಂಬಿಸುತ್ತದೆ.

ಹೈಕೋರ್ಟ್ ತೀರ್ಪು ಸಂತ್ರಸ್ತ ದಲಿತರ ಕುಟುಂಬಗಳಿಗೆ ನೆಮ್ಮದಿ ತಂದಿದ್ದರೂ, ವಿಚಾರಣಾ ನ್ಯಾಯಾಲಯದ ಖುಲಾಸೆ ಆದೇಶದ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಿರುವುದು ಬಿಜೆಪಿ ಸರ್ಕಾರದ ಪರಿಣಾಮಕಾರಿತ್ವ ಮತ್ತು ನ್ಯಾಯದ ಬದ್ಧತೆಯ ಬಗ್ಗೆ ದಲಿತರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಜೆಪಿ ಸರಕಾರ  ಪ್ರಕರಣದಲ್ಲಿ ದಲಿತರಿಗೆ ನ್ಯಾಯವನ್ನು ನಿರಾಕರಿಸಿದೆ ಮತ್ತು ದುಂಡಾ ಗ್ರಾಮದಲ್ಲಿ ನಡೆದ ಜಾತಿ ದೌರ್ಜನ್ಯವನ್ನು ನಿರ್ಲಕ್ಷಿಸಿದೆ ಎಂದು ದಲಿತರು ಆರೋಪಿಸಿದ್ದಾರೆ.

ಇದನ್ನು ಓದಿ: ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...