Homeಮುಖಪುಟದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

- Advertisement -
- Advertisement -

ಎಲ್ಲರಿಗೂ ‘ಸಮಾನ ನ್ಯಾಯ’ ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯವನ್ನು ನಿರಾಕರಿಸುವ ಸರ್ಕಾರದ ಯಾವುದೇ ಕ್ರಮವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಜ್ವಲಂತ ಉದಾಹರಣೆಯೆಂದರೆ 2008ರಲ್ಲಿ ತುಮಕೂರು ಜಿಲ್ಲೆಯ ದುಂಡಾ ಗ್ರಾಮದಲ್ಲಿ ಕ್ರೂರ ಜಾತಿ ಹಿಂಸೆಗೆ ಒಳಗಾದ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸಲು ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ವಿಫಲವಾಗಿರುವುದಾಗಿದೆ.

ದಲಿತರನ್ನು ಜಾತಿ ದೌರ್ಜನ್ಯದಿಂದ ರಕ್ಷಿಸಲು ವಿಫಲರಾದಾಗ ಸಾಮಾಜಿಕ ನ್ಯಾಯಾದ ಎಲ್ಲಾ ಭಾಗಿಗಳು ಮುಚ್ಚಿದಂತಾಗಿದೆ. ಜಾತಿ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆಗೊಳಿಸಿದಾಗ ಮೇಲ್ಮನವಿ ಸಲ್ಲಿಸಲು ಸರಕಾರ ವಿಫಲವಾಗುತ್ತದೆ. ಸರ್ಕಾರದ ಈ ನಿರಾಸಕ್ತಿಯು ಸಮಾನತೆ ಮತ್ತು ನ್ಯಾಯವನ್ನು ಖಾತ್ರಿಪಡಿಸುವ ಸಂವಿಧಾನದ ಮೂಲ ಮೌಲ್ಯಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆಯ ಮೂಲ ಆಶಯವನ್ನು ಜಾರಿಗೆ ಸರ್ಕಾರವು ಶ್ರದ್ಧೆ ತೋರದ ಹೊರತು, ಜಾತಿರಹಿತ ಸಮಾಜದ ನಿರ್ಮಾಣ ಕೇವಲ ಕನಸಾಗಿ ಉಳಿಯುತ್ತದೆ ಎಂದು ಸುಪ್ರೀಂಕೋರ್ಟ್ ಹಲವಾರು ಪ್ರಕರಣಗಳಲ್ಲಿ ಅಭಿಪ್ರಾಯಪಟ್ಟಿತ್ತು ಎನ್ನುವುದು ಗಮನಾರ್ಹ.

ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದುಂಡಾ ಗ್ರಾಮದಲ್ಲಿ 2008ರ ಆ.14ರಂದು ಹೇಯ ಜಾತಿ ದೌರ್ಜನ್ಯ ನಡೆದಿತ್ತು. ಗೋಪಾಲ ಕೃಷ್ಣ ಎಂಬ ಸವರ್ಣಿಯನ ಜಮೀನಿಗೆ ದಲಿತ ಸಮುದಾಯದ ಶಿವಮೂರ್ತಿ ಮತ್ತು ದಿಲೀಪ್ ಎಂಬ ದಲಿತ ಯುವಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಜಮೀನಿನ ಮಾಲಕ ಗೋಪಾಲ ಕೃಷ್ಣನ ಮೇಲೆ ಜಮೀನು ವಿವಾದ ಹೊಂದಿದ್ದ ಇನ್ನೋರ್ವ ಸವರ್ಣಿಯ ಜಾತಿಗೆ ಸೇರಿದ ಸುದೀಪ್ ಎಂಬಾತ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೂರ್ತಿ ಹಾಗೂ ದಿಲೀಪ್ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಸುದೀಪ್ ವಿರುದ್ಧ ಶಿವಮೂರ್ತಿ ಮತ್ತು ದಿಲೀಪ್ ದಂಡಿನಶಿವಿರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಲಿತರು ತಮ್ಮ ವಿರುದ್ಧ ದೂರು ದಾಖಲಿಸಲು ಧೈರ್ಯ ಮಾಡಿದ್ದಾರೆ ಎಂದು ಕೋಪಗೊಂಡ ಸುದೀಪ್ ಮತ್ತು ಸವರ್ಣಿಯ ಜನರ ಗುಂಪು ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದಲಿತ ಸಮುದಾಯದ ಕೇರಿಗೆ ನುಗ್ಗಿದೆ.  ಅಲ್ಲಿ ದಲಿತ ಸಮುದಾಯದ ಜನರ ಮೇಲೆ ಜಾತಿ ನಿಂದನೆಗಳನ್ನು ಮಾಡಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ  ಸುಮಾರು 12 ಜನರಿಗೆ ಗಂಭೀರ ಗಾಯಗಳಾಗಿತ್ತು. ಈ ವೇಳೆ ಕೇರಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ದಲಿತ ಸಮುದಾಯದ ಗೋವಿಂದರಾಜು ಎಂಬ ಯುವಕ ಹಾಗೂ ಆತನ ತಾಯಿ ಲಕ್ಷ್ಮಮ್ಮ ಅವರಿಗೆ ಗಂಭೀರ ಗಾಯಗಳಾಗಿತ್ತು.

ಈ ಬಗ್ಗೆ ಗೋವಿಂದರಾಜು ಅವರ ತಾಯಿ ಲಕ್ಷ್ಮಮ್ಮ ಅವರು ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಸವರ್ಣಿಯ ಜಾತಿಯ ಗುಂಪಿನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 147, 148, 323, 324 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(10), (11)ರಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಪೊಲೀಸರು ಆರೋಪಿ ವಿರುದ್ಧ 2008ರ ಡಿ. 4ರಂದು ತುಮಕೂರು 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ, ವಿಚಾರಣೆ ನಡೆಸಿದ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ 2011ರ ಜೂ.23ರಂದು ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ತೀರ್ಪು ಸಂತ್ರಸ್ತರಿಗೆ ಆಘಾತ ಮತ್ತು ನಿರಾಶೆಯನ್ನುಂಟುಮಾಡಿದೆ ಮತ್ತು ಕಂಬಾಲಪಲ್ಲಿಯಲ್ಲಿ ದಲಿತ ಸಮುದಾಯಕ್ಕೆ ಆದ ಅನ್ಯಾಯ ಪುನರಾವರ್ತನೆಯಾಗಿದೆ ಎಂದು ಸಮುದಾಯ ಭಾವಿಸಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯ ಕಂಬಾಲಪಲ್ಲಿ ಗ್ರಾಮದಲ್ಲಿ 7ಮಂದಿ ದಲಿತರನ್ನು 2000 ವಿಷವಿಯ ಮಾ.11ರಂದು ಭೀಕರವಾಗಿ ಹತ್ಯೆ ಮಾಡಲಾಯಿತು. ದಲಿತರ ಮೇಲೆ ಹಲ್ಲೆ ನಡೆಸಿ 2 ಮನೆಗಳಿಗೆ ಬೀಗ ಹಾಕಿ ನಂತರ ಮನೆಗೆ ಬೆಂಕಿ ಹಚ್ಚಿ ದಲಿತರನ್ನು ಸುಟ್ಟು ಹಾಕಲಾಗಿತ್ತು. ಕರ್ನಾಟಕವಷ್ಟೇ ಅಲ್ಲ ಇಡೀ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಈ ಘೋರ ಕೃತ್ಯದಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ನಿಂದ ಆರೋಪಿಗಳು ಖುಲಾಸೆಗೊಂಡು ಮುಕ್ತವಾಗಿ ನಡೆದಾಡುತ್ತಿದ್ದಾರೆ.

ದುಂಡಾ ಜಾತಿ ದೌರ್ಜನ್ಯಕ್ಕೆ ಒಳಗಾದ ಗೋವಿಂದರಾಜು ಮತ್ತು ಅವರ ತಾಯಿ ಲಕ್ಷ್ಮಮ್ಮ ಅವರು ತಮ್ಮ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಲು ದಲಿತ ಸಂಘಟನೆಗಳೊಂದಿಗೆ ಕೈಜೋಡಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಬಗ್ಗೆ ಅವರು ಹಲವಾರು ಬಾರಿ ಸರ್ಕಾರದ ಗಮನ ಸೆಳೆದಿದ್ದರು. ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಅಂದಿನ ಬಿಜೆಪಿ ಸರಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ವಿಫಲವಾಗಿತ್ತು. ದಲಿತ ಸಮುದಾಯದ ಬಗ್ಗೆ ಬಿಜೆಪಿ ಸರಕಾರ ಹೊಂದಿದ್ದ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ. ಆದರೂ ದಲಿತ ಸಂಘಟನೆಗಳ ಬೆಂಬಲದೊಂದಿಗೆ 2011ರ ಆ.23ರಂದು ಕರ್ನಾಟಕ ಹೈಕೋರ್ಟ್‌ನಲ್ಲಿಸಂತ್ರಸ್ತರು  ಮೇಲ್ಮನವಿ ಸಲ್ಲಿಸಿದ್ದರು.

ಘೋರ ಘಟನೆಯ ಹದಿನೈದು ವರ್ಷಗಳ ನಂತರ ಕರ್ನಾಟಕ ಉಚ್ಚ ನ್ಯಾಯಾಲಯವು ವಾದಗಳನ್ನು ಆಲಿಸಿ ಮತ್ತು ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅ.31, 2023ರಂದು ತನ್ನ ತೀರ್ಪನ್ನು ನೀಡಿತು. ಈ ಅಪರಾಧಗಳಲ್ಲಿ ಎಲ್ಲಾ 11 ವ್ಯಕ್ತಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿತು. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು  ಕೆಳಹಂತದ ವಿಚಾರಣಾ ನ್ಯಾಯಾಲಯವು ಸೂಕ್ತವಾಗಿ ಪರಿಗಣಿಸಲಿಲ್ಲ ಮತ್ತು ಎಲ್ಲಾ ಆರೋಪಿಗಳು ಅಪರಾಧಗಳಲ್ಲಿ ತಪ್ಪಿತಸ್ಥರು ಎಂದು ತೋರಿಸುವ ಸ್ಪಷ್ಟ ಪುರಾವೆಗಳಿವೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅಧಿಕಾರದಲ್ಲಿದ್ದ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ದಲಿತ ಸಮುದಾಯದ ಆರೋಪ. ತುಮಕೂರು ಜಿಲ್ಲಾ ನ್ಯಾಯಾಲಯ ನೀಡಿದ ಖುಲಾಸೆ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿರುವುದು ಗಂಭೀರ ಜಾತಿ ದೌರ್ಜನ್ಯ ನಡೆಸುವ ಅಪರಾಧಿಗಳು ಕಾನೂನು ಕ್ರಮಗಳಿಂದ ಪಾರಾಗಲು ಅನುವು ಮಾಡಿಕೊಡುವುದನ್ನು ಪ್ರತಿಬಿಂಬಿಸುತ್ತದೆ.

ಹೈಕೋರ್ಟ್ ತೀರ್ಪು ಸಂತ್ರಸ್ತ ದಲಿತರ ಕುಟುಂಬಗಳಿಗೆ ನೆಮ್ಮದಿ ತಂದಿದ್ದರೂ, ವಿಚಾರಣಾ ನ್ಯಾಯಾಲಯದ ಖುಲಾಸೆ ಆದೇಶದ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸದಿರುವುದು ಬಿಜೆಪಿ ಸರ್ಕಾರದ ಪರಿಣಾಮಕಾರಿತ್ವ ಮತ್ತು ನ್ಯಾಯದ ಬದ್ಧತೆಯ ಬಗ್ಗೆ ದಲಿತರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಿಜೆಪಿ ಸರಕಾರ  ಪ್ರಕರಣದಲ್ಲಿ ದಲಿತರಿಗೆ ನ್ಯಾಯವನ್ನು ನಿರಾಕರಿಸಿದೆ ಮತ್ತು ದುಂಡಾ ಗ್ರಾಮದಲ್ಲಿ ನಡೆದ ಜಾತಿ ದೌರ್ಜನ್ಯವನ್ನು ನಿರ್ಲಕ್ಷಿಸಿದೆ ಎಂದು ದಲಿತರು ಆರೋಪಿಸಿದ್ದಾರೆ.

ಇದನ್ನು ಓದಿ: ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್‌ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...