Homeಮುಖಪುಟಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ...

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷ ರೋನಕ್ ಖತ್ರಿ ನೇತೃತ್ವದ ವಿದ್ಯಾರ್ಥಿಗಳು ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿದಿದ್ದಾರೆ. ಬೇಸಿಗೆಯ ಬಿಸಿಲಿನ ತಾಪವನ್ನು ತಗ್ಗಿಸಲು ಕಾಲೇಜಿನ ತರಗತಿ ಕೊಠಡಿಗಳಿಗೆ ಸಗಣಿಯಿಂದ ಸಾರಿಸಿದ್ದ ಪ್ರಾಂಶುಪಾಲೆಯ  ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆದಿದೆ ಎಂದು ಖತ್ರಿ ಆರೋಪಿಸಿದ್ದಾರೆ.

ಈ ಹಿಂದೆ ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿತ್ತು. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ಕಾಲೇಜು ಪ್ರಾಂಶುಪಾಲರ ಅನುಪಸ್ಥಿತಿಯಲ್ಲಿ ಖತ್ರಿಯವರು ಉಪ ಪ್ರಾಂಶುಪಾಲೆಯವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ಕಾಣಬಹುದು.

ಕ್ಯಾಂಪಸ್‌ನಲ್ಲಿ ಪ್ರಚಾರ ಮಾಡಲಾದ “ಅಸಂಬದ್ಧ ಮತ್ತು ಅವೈಜ್ಞಾನಿಕ” ವಾದ ಈ ಸಗಣಿ ಬಳಿಯುವ ಪದ್ಧತಿಯನ್ನು ಎತ್ತಿ ತೋರಿಸುವ ಉದ್ದೇಶದಿಂದ ತಮ್ಮ ಈ ಪ್ರತಿಭಟನೆಯ ಉದ್ದೇಶ ಎಂದು ಅವರು ಹೇಳಿದ್ದಾರೆ.

ಪ್ರಾಂಶುಪಾಲೆಯ ಜೊತೆ ತೀವ್ರ ವಾಗ್ವಾದದ ನಂತರ ಡಿಯುಎಸ್‌ಯು ಅಧ್ಯಕ್ಷರು ಇತರ ವಿದ್ಯಾರ್ಥಿಗಳೊಂದಿಗೆ ಸೇರಿ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳು ಮತ್ತು ಶೌಚಾಲಯದ ಮೇಲೆ ಸಗಣಿಯಿಂದ ಸಾರಿಸಿದ್ದಾರೆ.

ಪ್ರಾಂಶುಪಾಲೆ ಕಾಲೇಜಿನ ಕೊಠಡಿಗೆ ಸಗಣಿ ಬಳಿಯುವ ಕ್ಲಿಪ್‌ನಲ್ಲಿ, ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಬಳಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ ಸಿಬ್ಬಂದಿಯ ಸಹಾಯದಿಂದ ಗೋಡೆಗಳಿಗೆ ಲೇಪಿಸುತ್ತಿರುವುದನ್ನು ಕಾಣಬಹುದು.

ಈಗ ವೈರಲ್ ಆಗಿರುವ ವೀಡಿಯೊ ವಿಶ್ವವಿದ್ಯಾಲಯದಾದ್ಯಂತ ಆಕ್ರೋಶ ಮತ್ತು ಗೊಂದಲವನ್ನು ಹುಟ್ಟುಹಾಕಿತ್ತು ಮತ್ತು ಕಾಲೇಜು ಆಡಳಿತದ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಪ್ರಾಂಶುಪಾಲರಾದ ಪ್ರತ್ಯುಷ್ ವತ್ಸಲಾ ಅವರು, ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಗಣಿ ಬಳಿಯುವ ಕ್ರಮವು ಸಂಶೋಧನಾ ಯೋಜನೆಯ ಭಾಗವಾಗಿದೆ ಎಂದು ಹೇಳಿದರು. ‘ಸಾಂಪ್ರದಾಯಿಕ ಭಾರತೀಯ ಜ್ಞಾನವನ್ನು ಬಳಸಿಕೊಂಡು ಶಾಖ ಒತ್ತಡ ನಿಯಂತ್ರಣದ ಅಧ್ಯಯನ’ ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು.

ಇದು ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ. ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಾಗದ ಕಾರಣ ನಾನು ಅವುಗಳಲ್ಲಿ ಒಂದನ್ನು ನಾನೇ ಲೇಪಿಸಿದೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಪ್ರತ್ಯುಷ್ ವತ್ಸಲಾ ಹೇಳುತ್ತಾರೆ.

ಕಾಲೇಜು ಆಡಳಿತವು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅನೇಕ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆರೋಗ್ಯ ಕಾಳಜಿ ಮತ್ತು ಅಂತಹ ಕ್ರಮಕ್ಕೆ ವೈಜ್ಞಾನಿಕ ಆಧಾರಗಳ ಕೊರತೆಯನ್ನು ಉಲ್ಲೇಖಿಸಿದ್ದಾರೆ.

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...