Homeಮುಖಪುಟಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ...

ಸಗಣಿ ಬಳಿದ ಪ್ರಕರಣ: ಪ್ರಾಂಶುಪಾಲೆಯ ಕಚೇರಿ ಗೋಡೆಗೆ ಸಗಣಿ ಬಳಿದು ಪ್ರತಿಭಟಿಸಿದ ವಿದ್ಯಾರ್ಥಿ ಒಕ್ಕೂಟ; ವೀಡಿಯೋ ವೈರಲ್

- Advertisement -
- Advertisement -

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಅಧ್ಯಕ್ಷ ರೋನಕ್ ಖತ್ರಿ ನೇತೃತ್ವದ ವಿದ್ಯಾರ್ಥಿಗಳು ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿದಿದ್ದಾರೆ. ಬೇಸಿಗೆಯ ಬಿಸಿಲಿನ ತಾಪವನ್ನು ತಗ್ಗಿಸಲು ಕಾಲೇಜಿನ ತರಗತಿ ಕೊಠಡಿಗಳಿಗೆ ಸಗಣಿಯಿಂದ ಸಾರಿಸಿದ್ದ ಪ್ರಾಂಶುಪಾಲೆಯ  ಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆದಿದೆ ಎಂದು ಖತ್ರಿ ಆರೋಪಿಸಿದ್ದಾರೆ.

ಈ ಹಿಂದೆ ದೆಹಲಿ ವಿಶ್ವವಿದ್ಯಾಲಯದ ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲೆಯು ತರಗತಿಯ ಗೋಡೆಗಳಿಗೆ ಹಸುವಿನ ಸಗಣಿ ಬಳಿಯುತ್ತಿರುವ ವಿಡಿಯೊ ವೈರಲ್ ಆಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವ್ಯಂಗ್ಯಕ್ಕೀಡಾಗಿತ್ತು. ಕೃತ್ಯವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ, ಇದನ್ನು ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಯೋಜನೆಯ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದರು.

ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊದಲ್ಲಿ, ಕಾಲೇಜು ಪ್ರಾಂಶುಪಾಲರ ಅನುಪಸ್ಥಿತಿಯಲ್ಲಿ ಖತ್ರಿಯವರು ಉಪ ಪ್ರಾಂಶುಪಾಲೆಯವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ಕಾಣಬಹುದು.

ಕ್ಯಾಂಪಸ್‌ನಲ್ಲಿ ಪ್ರಚಾರ ಮಾಡಲಾದ “ಅಸಂಬದ್ಧ ಮತ್ತು ಅವೈಜ್ಞಾನಿಕ” ವಾದ ಈ ಸಗಣಿ ಬಳಿಯುವ ಪದ್ಧತಿಯನ್ನು ಎತ್ತಿ ತೋರಿಸುವ ಉದ್ದೇಶದಿಂದ ತಮ್ಮ ಈ ಪ್ರತಿಭಟನೆಯ ಉದ್ದೇಶ ಎಂದು ಅವರು ಹೇಳಿದ್ದಾರೆ.

ಪ್ರಾಂಶುಪಾಲೆಯ ಜೊತೆ ತೀವ್ರ ವಾಗ್ವಾದದ ನಂತರ ಡಿಯುಎಸ್‌ಯು ಅಧ್ಯಕ್ಷರು ಇತರ ವಿದ್ಯಾರ್ಥಿಗಳೊಂದಿಗೆ ಸೇರಿ ಪ್ರಾಂಶುಪಾಲೆಯ ಕಚೇರಿಯ ಗೋಡೆಗಳು ಮತ್ತು ಶೌಚಾಲಯದ ಮೇಲೆ ಸಗಣಿಯಿಂದ ಸಾರಿಸಿದ್ದಾರೆ.

ಪ್ರಾಂಶುಪಾಲೆ ಕಾಲೇಜಿನ ಕೊಠಡಿಗೆ ಸಗಣಿ ಬಳಿಯುವ ಕ್ಲಿಪ್‌ನಲ್ಲಿ, ಸಿ ಬ್ಲಾಕ್‌ನಲ್ಲಿ ತರಗತಿ ಕೊಠಡಿಗಳನ್ನು ತಂಪಾಗಿಸಲು ಸ್ಥಳೀಯ ವಿಧಾನಗಳನ್ನು ಬಳಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲಾ ಸಿಬ್ಬಂದಿಯ ಸಹಾಯದಿಂದ ಗೋಡೆಗಳಿಗೆ ಲೇಪಿಸುತ್ತಿರುವುದನ್ನು ಕಾಣಬಹುದು.

ಈಗ ವೈರಲ್ ಆಗಿರುವ ವೀಡಿಯೊ ವಿಶ್ವವಿದ್ಯಾಲಯದಾದ್ಯಂತ ಆಕ್ರೋಶ ಮತ್ತು ಗೊಂದಲವನ್ನು ಹುಟ್ಟುಹಾಕಿತ್ತು ಮತ್ತು ಕಾಲೇಜು ಆಡಳಿತದ ಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು.

ಪ್ರಾಂಶುಪಾಲರಾದ ಪ್ರತ್ಯುಷ್ ವತ್ಸಲಾ ಅವರು, ಅಧ್ಯಾಪಕರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಗಣಿ ಬಳಿಯುವ ಕ್ರಮವು ಸಂಶೋಧನಾ ಯೋಜನೆಯ ಭಾಗವಾಗಿದೆ ಎಂದು ಹೇಳಿದರು. ‘ಸಾಂಪ್ರದಾಯಿಕ ಭಾರತೀಯ ಜ್ಞಾನವನ್ನು ಬಳಸಿಕೊಂಡು ಶಾಖ ಒತ್ತಡ ನಿಯಂತ್ರಣದ ಅಧ್ಯಯನ’ ಎಂಬ ಶೀರ್ಷಿಕೆಯ ಅಧ್ಯಯನವು ಇನ್ನೂ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದರು.

ಇದು ಪ್ರಕ್ರಿಯೆಯಲ್ಲಿದೆ. ಒಂದು ವಾರದ ನಂತರ ನಾನು ಪೂರ್ಣ ಸಂಶೋಧನೆಯ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಪೋರ್ಟಾ ಕ್ಯಾಬಿನ್‌ಗಳಲ್ಲಿ ಸಂಶೋಧನೆಯನ್ನು ನಡೆಸಲಾಗುತ್ತಿದೆ. ನೈಸರ್ಗಿಕ ಮಣ್ಣನ್ನು ಮುಟ್ಟುವುದರಿಂದ ಯಾವುದೇ ಹಾನಿಯಾಗದ ಕಾರಣ ನಾನು ಅವುಗಳಲ್ಲಿ ಒಂದನ್ನು ನಾನೇ ಲೇಪಿಸಿದೆ. ಕೆಲವು ಜನರು ಪೂರ್ಣ ವಿವರಗಳನ್ನು ತಿಳಿಯದೆ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಪ್ರತ್ಯುಷ್ ವತ್ಸಲಾ ಹೇಳುತ್ತಾರೆ.

ಕಾಲೇಜು ಆಡಳಿತವು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡದಿದ್ದರೂ, ಅನೇಕ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಆರೋಗ್ಯ ಕಾಳಜಿ ಮತ್ತು ಅಂತಹ ಕ್ರಮಕ್ಕೆ ವೈಜ್ಞಾನಿಕ ಆಧಾರಗಳ ಕೊರತೆಯನ್ನು ಉಲ್ಲೇಖಿಸಿದ್ದಾರೆ.

ಬೇಸಿಗೆಯಲ್ಲಿ ತಂಪಾಗಿರಲು ಕಾಲೇಜು ಗೋಡೆಗೆ ಸೆಗಣಿ ಬಳಿದ ಪ್ರಾಂಶುಪಾಲೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...