Homeನಿಜವೋ ಸುಳ್ಳೋ‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

ಫೇಸ್‍ಬುಕ್ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೌತಮ್ ಗಂಭೀರ್ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀರಾ ಹೊಸ ವಿವಾದವೆಂದರೆ ಅವರ ಡುಪ್ಲಿಕೇಟ್ ಗಂಭೀರ್ ಪ್ರಕರಣ. ಬಿಸಿಲಿನ ಝಳ ತಡೆಯಲಾರದೇ ಗೌತಮ್ ಕಾರಿನ ಒಳಗೆ ಕುಳಿತಿದ್ದರೆ, ಕಾರಿನ ತೆರೆದ ಮೇಲ್ಭಾಗದಲ್ಲಿ ಗೌತಮ್ ಗಂಭೀರ್‍ನ್ನು ಹೋಲುವ ಇನ್ನೊಬ್ಬ ವ್ಯಕ್ತಿ ಮತಯಾಚನೆ ಮಾಡುತ್ತಿರುವುದು ಫೋಟೊ ಒಂದು ಸೆರೆಯಾಗಿದೆ. ಇದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿರುವುದು ನಿಮಗೆಲ್ಲಾ ಗೊತ್ತೇ ಇದೆ.


ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಜನರು ಆ ಫೋಟೊವನ್ನು ಟ್ವಿಟ್ಟರ್ ಮತ್ತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿ ‘ಬಿಸಿಲಿಗೆ ಹೆದರುವ ಗಂಭೀರ್, ಯಾವ ರೀತಿ ಜನರ ಕಷ್ಟಗಳನ್ನು ಅರಿಯುತ್ತಾರೆ?’ ಎಂದು ವ್ಯಂಗ್ಯವಾಡಿದ್ದರು. ಇದರಿಂದಾಗುವ ಅಪಾಯವನ್ನರಿತ ಬಿಜೆಪಿ ತಕ್ಷಣ ಎಚ್ಚೆತ್ತುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ‘ಸೋಲಿನ ಭಯದಿಂದ ಆಪ್ ಪ್ರತಿದಿನ ನನ್ನ ಮೇಲೆ ಒಂದೊಂದು ಆರೋಪ ಮಾಡುತ್ತದೆ’ ಎಂದು ಆರೋಪಿಸಿದ್ದಾರೆ.

ಈಗ ಅಸಲಿ ವಿಚಾರ ಏನೆಂದರೆ ಯಾರಾದರೂ ಆ ಫೋಟೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದರೆ ಸಾಕು ಕ್ಷಣಾರ್ಧದಲ್ಲಿ ಅದರ ಮೇಲೇಯೇ ಇದು ಫೇಕ್ ಫೋಟೊ ಎಂದು ಬರುತ್ತಿದೆ. ಆ ಪೋಸ್ಟಿನ ಕೆಳಗಡೆಯೇ ರಿಲೇಟೆಡ್ ಆರ್ಟಿಕಲ್ ಎಂದು ಬೂಮ್‍ನವರು ನಡೆಸಿರುವ ಫ್ಯಾಕ್ಟ್ ಚೆಕ್‍ನ ಲಿಂಕ್ ಬರುತ್ತದೆ. ಇದನ್ನು ಬಿಜೆಪಿಯವರು ಫೇಸ್ ಬುಕ್‍ನಿಂದ ಮಾಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಏಳುತ್ತದೆ. ಫೇಸ್‍ಬುಕ್ ಈ ರೀತಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯೇ ಎಂದು ಭಾವನೆ ಬಂದರೆ ಆಶ್ಚರ್ಯವಿಲ್ಲ. ಏಕೆಂದು ತಿಳಿಯಲು ಮುಂದೆ ಓದಿ.


ಆದರೆ ಇದು ಫೇಕ್ ಫೋಟೊ ಅಲ್ಲ. ಅದನ್ನು ತಿಳಿಯಲು ನೀವು ದೂರ ಹೋಗಬೇಕಿಲ್ಲ. ಅದರ ಕೆಳಗಡೆಯೇ ಕೊಟ್ಟಿರುವ ಲಿಂಕ್, ಬೂಮ್ ವೆಬ್‍ಸೈಟ್ ನೋಡಿದರೆ ಸಾಕು. ಬೂಮ್‍ನವರು ಹೇಳಿರುವಂತೆ ಅವರು ಗಂಭೀರ್‍ರವರ ತದ್ರೂಪವಲ್ಲ. ಅವರು ಗಂಭೀರ್‍ರವರ ಗೆಳೆಯ ಗೌರವ್ ಅರೋರ ಆಗಿದ್ದಾರೆ. ದೆಹಲಿಯ ಸ್ಥಳೀಯ ನಾಯಕರಾಗಿರುವ ಅರೋರ ಹಲವು ವರ್ಷಗಳಿಂದ ಗಂಭೀರ್ ಪರ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಈಗ ಇಬ್ಬರೂ ಸಹ ಒಟ್ಟಿಗೆ ರೋಡ್ ಶೋಗಳಲ್ಲಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಆ ವ್ಯಕ್ತಿ ಯಾರು, ಏನು ಕೆಲಸ ಮಾಡುತ್ತಿದ್ದಾನೆ ಎಂಬುದನ್ನು ಬೂಮ್ ಪತ್ತೆ ಹಚ್ಚಿದೆಯೇ ವಿನಃ ಗೌತಮ್ ಗಂಭೀರ್ ಬಿಸಿಲು ತಡೆಯಲಾರದೇ ಕಾರಿನ ಒಳಗೆ ಕೂತಿರುವುದು ಸುಳ್ಳು ಎಂದಾಗಲಿ, ಅದು ಫೋಟೋ ಶಾಪ್ ಫೋಟೊ ಎಂದಾಗಲಿ ಎಲ್ಲಿಯೂ ಹೇಳಿಲ್ಲ.

ಹೀಗಿರುವಾಗ ಬಹಳಷ್ಟು ನೆಟ್ಟಿಗರು ಮಾಡಿರುವ ಟ್ರೋಲ್ ಸರಿಯಾಗಿಯೇ ಇದೆ. ಅವರ್ಯಾರು ಫೋಟೊದಲ್ಲಿರುವ ವ್ಯಕ್ತಿ ಗೌರವ್ ಅರೋರ ಅವರಲ್ಲ ಎಂದು ಹೇಳಿಲ್ಲ. ಗಂಭೀರ್ ಬಿಸಿಲಿಗೆ ಬಾರದೇ ಕಾರಿನಲ್ಲಿ ಕುಳಿತು ಅವರನ್ನು ಹೋಲುವವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಸರಿಯಾಗಿಯೇ ದೂರಿದ್ದಾರೆ. ವಾಸ್ತವದಲ್ಲಿ ಆಪ್ ಪಕ್ಷದವರು ಮೇಲೆ ನಿಂತಿರುವ ವ್ಯಕ್ತಿ ಗೌರವ್ ಅರೋರ ಎಂದೇ ಹೇಳಿದ್ದಾರೆ. ಆದರೂ ಫೇಸ್ ಬುಕ್ ಅದು ಫೇಕ್ ಫೋಟೊ ಅಂತಲೂ, ಅದರ ಮೇಲೆ ಮತ್ತು ಕೆಳಗೆ ಫ್ಯಾಕ್ಟ್ ಚೆಕ್ ಲಿಂಕ್ ಬರುವಂತೆಯೂ ಮಾಡಿದೆ. ಆ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿಗೆ ನೆರವಾಗಿದೆ.

ಹಾಗೇ ನೋಡಿದರೆ ಫೇಕ್ ಫೋಟೊಶಾಪ್‍ಗಳನ್ನು ಶುರುಮಾಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳು ಹರಡಿದ್ದು ಬಿಜೆಪಿಯ ಕಾರ್ಯಕರ್ತರೆ ಎಂಬುದು ಎಲ್ಲರಿಗೂ ಗೊತ್ತಿದೆ. ವಾಟ್ಸಾಪ್ ಯೂನಿವರ್ಸಿಟಿ ಎಂದು ವ್ಯಂಗ್ಯದಿಂದ ಕರೆಸಿಕೊಳ್ಳುವುದನ್ನು ಆರಂಭಿಸಿರುವುದು ಸಹ ಬಿಜೆಪಿಯೇ. ಹೀಗಿರುವಾಗ ಒಂದು ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಅದು ಏನಾದರೂ ಮಾಡಿ ಆ ಸತ್ಯ ಹರಡದಂತೆ ತಡೆಯಲು ಮುಂದಾಗುತ್ತಿದೆ ಎಂಬುದಕ್ಕೆ ಗಂಭೀರ್ ಪ್ರಕರಣ ಒಂದು ಉದಾಹರಣೆ. ಈ ಹಿಂದೆ ಪಟೇಲ್ ಪ್ರತಿಮೆ ಅನಾವರಣವಾದಾಗ ಒಂದು ಕಡೆ ದೊಡ್ಡ ಪಟೇಲ್ ಪ್ರತಿಮೆ ಇನ್ನೊಂದು ಕಡೆ ಬಡಕುಟುಂಬ ಹೊಟ್ಟೆಗಿಲ್ಲದೆ ಇರುವ ಫೋಟೊವೊಂದನ್ನು ಫೋಟೊಶಾಪ್ ಮಾಡಲಾಗಿತ್ತು. ಆಗಲೂ ಇದೇ ರೀತಿ ಆ ಫೋಟೊವನ್ನು ಯಾರಾದರೂ ಷೇರ್ ಮಾಡಿದರೆ ಅದು ಫೇಕ್ ಪೋಟೊ ಅಂತ ಬರುತ್ತಿತ್ತು. ಕೆಳಗೆ ಬೂಮ್ ಫ್ಯಾಕ್ಟ್ ಚೆಕ್ ಸಹ. ಆಗ ಅದು ಫೋಟೊಶಾಪ್ ಆದ್ದರಿಂದ ಪರವಾಗಿಲ್ಲ ಎನ್ನಬಹುದು. ಆದರೆ ಈಗ ನಿಜ ಫೋಟೊಗೂ ಫೇಕ್ ಎಂದು ಬರುತ್ತಿರುವುದು ಅಕ್ಷಮ್ಯವಾಗಿದೆ.
ಇದರಿಂದ ಫೇಸ್‍ಬುಕ್ ಬಿಜೆಪಿ ಪರವಾಗಿ, ಮೋದಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಹೇಳುತ್ತದೆ. ಏಕೆಂದರೆ ಬಿಜೆಪಿಯ ಸುಳ್ಳುಗಳಿಗೆ ಯಾವುದೇ ಕಡಿವಾಣ ಹಾಕದೇ ಇತರ ಪಕ್ಷಗಳ ಸತ್ಯಗಳನ್ನು ಸಹ ಸುಳ್ಳು ಎಂದು ಹೇಳುವುದು ಯಾವ ರೀತಿ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...