Homeನಿಜವೋ ಸುಳ್ಳೋ‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

ಫೇಸ್‍ಬುಕ್ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೌತಮ್ ಗಂಭೀರ್ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀರಾ ಹೊಸ ವಿವಾದವೆಂದರೆ ಅವರ ಡುಪ್ಲಿಕೇಟ್ ಗಂಭೀರ್ ಪ್ರಕರಣ. ಬಿಸಿಲಿನ ಝಳ ತಡೆಯಲಾರದೇ ಗೌತಮ್ ಕಾರಿನ ಒಳಗೆ ಕುಳಿತಿದ್ದರೆ, ಕಾರಿನ ತೆರೆದ ಮೇಲ್ಭಾಗದಲ್ಲಿ ಗೌತಮ್ ಗಂಭೀರ್‍ನ್ನು ಹೋಲುವ ಇನ್ನೊಬ್ಬ ವ್ಯಕ್ತಿ ಮತಯಾಚನೆ ಮಾಡುತ್ತಿರುವುದು ಫೋಟೊ ಒಂದು ಸೆರೆಯಾಗಿದೆ. ಇದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿರುವುದು ನಿಮಗೆಲ್ಲಾ ಗೊತ್ತೇ ಇದೆ.


ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಜನರು ಆ ಫೋಟೊವನ್ನು ಟ್ವಿಟ್ಟರ್ ಮತ್ತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿ ‘ಬಿಸಿಲಿಗೆ ಹೆದರುವ ಗಂಭೀರ್, ಯಾವ ರೀತಿ ಜನರ ಕಷ್ಟಗಳನ್ನು ಅರಿಯುತ್ತಾರೆ?’ ಎಂದು ವ್ಯಂಗ್ಯವಾಡಿದ್ದರು. ಇದರಿಂದಾಗುವ ಅಪಾಯವನ್ನರಿತ ಬಿಜೆಪಿ ತಕ್ಷಣ ಎಚ್ಚೆತ್ತುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ‘ಸೋಲಿನ ಭಯದಿಂದ ಆಪ್ ಪ್ರತಿದಿನ ನನ್ನ ಮೇಲೆ ಒಂದೊಂದು ಆರೋಪ ಮಾಡುತ್ತದೆ’ ಎಂದು ಆರೋಪಿಸಿದ್ದಾರೆ.

ಈಗ ಅಸಲಿ ವಿಚಾರ ಏನೆಂದರೆ ಯಾರಾದರೂ ಆ ಫೋಟೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದರೆ ಸಾಕು ಕ್ಷಣಾರ್ಧದಲ್ಲಿ ಅದರ ಮೇಲೇಯೇ ಇದು ಫೇಕ್ ಫೋಟೊ ಎಂದು ಬರುತ್ತಿದೆ. ಆ ಪೋಸ್ಟಿನ ಕೆಳಗಡೆಯೇ ರಿಲೇಟೆಡ್ ಆರ್ಟಿಕಲ್ ಎಂದು ಬೂಮ್‍ನವರು ನಡೆಸಿರುವ ಫ್ಯಾಕ್ಟ್ ಚೆಕ್‍ನ ಲಿಂಕ್ ಬರುತ್ತದೆ. ಇದನ್ನು ಬಿಜೆಪಿಯವರು ಫೇಸ್ ಬುಕ್‍ನಿಂದ ಮಾಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಏಳುತ್ತದೆ. ಫೇಸ್‍ಬುಕ್ ಈ ರೀತಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯೇ ಎಂದು ಭಾವನೆ ಬಂದರೆ ಆಶ್ಚರ್ಯವಿಲ್ಲ. ಏಕೆಂದು ತಿಳಿಯಲು ಮುಂದೆ ಓದಿ.


ಆದರೆ ಇದು ಫೇಕ್ ಫೋಟೊ ಅಲ್ಲ. ಅದನ್ನು ತಿಳಿಯಲು ನೀವು ದೂರ ಹೋಗಬೇಕಿಲ್ಲ. ಅದರ ಕೆಳಗಡೆಯೇ ಕೊಟ್ಟಿರುವ ಲಿಂಕ್, ಬೂಮ್ ವೆಬ್‍ಸೈಟ್ ನೋಡಿದರೆ ಸಾಕು. ಬೂಮ್‍ನವರು ಹೇಳಿರುವಂತೆ ಅವರು ಗಂಭೀರ್‍ರವರ ತದ್ರೂಪವಲ್ಲ. ಅವರು ಗಂಭೀರ್‍ರವರ ಗೆಳೆಯ ಗೌರವ್ ಅರೋರ ಆಗಿದ್ದಾರೆ. ದೆಹಲಿಯ ಸ್ಥಳೀಯ ನಾಯಕರಾಗಿರುವ ಅರೋರ ಹಲವು ವರ್ಷಗಳಿಂದ ಗಂಭೀರ್ ಪರ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಈಗ ಇಬ್ಬರೂ ಸಹ ಒಟ್ಟಿಗೆ ರೋಡ್ ಶೋಗಳಲ್ಲಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಆ ವ್ಯಕ್ತಿ ಯಾರು, ಏನು ಕೆಲಸ ಮಾಡುತ್ತಿದ್ದಾನೆ ಎಂಬುದನ್ನು ಬೂಮ್ ಪತ್ತೆ ಹಚ್ಚಿದೆಯೇ ವಿನಃ ಗೌತಮ್ ಗಂಭೀರ್ ಬಿಸಿಲು ತಡೆಯಲಾರದೇ ಕಾರಿನ ಒಳಗೆ ಕೂತಿರುವುದು ಸುಳ್ಳು ಎಂದಾಗಲಿ, ಅದು ಫೋಟೋ ಶಾಪ್ ಫೋಟೊ ಎಂದಾಗಲಿ ಎಲ್ಲಿಯೂ ಹೇಳಿಲ್ಲ.

ಹೀಗಿರುವಾಗ ಬಹಳಷ್ಟು ನೆಟ್ಟಿಗರು ಮಾಡಿರುವ ಟ್ರೋಲ್ ಸರಿಯಾಗಿಯೇ ಇದೆ. ಅವರ್ಯಾರು ಫೋಟೊದಲ್ಲಿರುವ ವ್ಯಕ್ತಿ ಗೌರವ್ ಅರೋರ ಅವರಲ್ಲ ಎಂದು ಹೇಳಿಲ್ಲ. ಗಂಭೀರ್ ಬಿಸಿಲಿಗೆ ಬಾರದೇ ಕಾರಿನಲ್ಲಿ ಕುಳಿತು ಅವರನ್ನು ಹೋಲುವವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಸರಿಯಾಗಿಯೇ ದೂರಿದ್ದಾರೆ. ವಾಸ್ತವದಲ್ಲಿ ಆಪ್ ಪಕ್ಷದವರು ಮೇಲೆ ನಿಂತಿರುವ ವ್ಯಕ್ತಿ ಗೌರವ್ ಅರೋರ ಎಂದೇ ಹೇಳಿದ್ದಾರೆ. ಆದರೂ ಫೇಸ್ ಬುಕ್ ಅದು ಫೇಕ್ ಫೋಟೊ ಅಂತಲೂ, ಅದರ ಮೇಲೆ ಮತ್ತು ಕೆಳಗೆ ಫ್ಯಾಕ್ಟ್ ಚೆಕ್ ಲಿಂಕ್ ಬರುವಂತೆಯೂ ಮಾಡಿದೆ. ಆ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿಗೆ ನೆರವಾಗಿದೆ.

ಹಾಗೇ ನೋಡಿದರೆ ಫೇಕ್ ಫೋಟೊಶಾಪ್‍ಗಳನ್ನು ಶುರುಮಾಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳು ಹರಡಿದ್ದು ಬಿಜೆಪಿಯ ಕಾರ್ಯಕರ್ತರೆ ಎಂಬುದು ಎಲ್ಲರಿಗೂ ಗೊತ್ತಿದೆ. ವಾಟ್ಸಾಪ್ ಯೂನಿವರ್ಸಿಟಿ ಎಂದು ವ್ಯಂಗ್ಯದಿಂದ ಕರೆಸಿಕೊಳ್ಳುವುದನ್ನು ಆರಂಭಿಸಿರುವುದು ಸಹ ಬಿಜೆಪಿಯೇ. ಹೀಗಿರುವಾಗ ಒಂದು ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಅದು ಏನಾದರೂ ಮಾಡಿ ಆ ಸತ್ಯ ಹರಡದಂತೆ ತಡೆಯಲು ಮುಂದಾಗುತ್ತಿದೆ ಎಂಬುದಕ್ಕೆ ಗಂಭೀರ್ ಪ್ರಕರಣ ಒಂದು ಉದಾಹರಣೆ. ಈ ಹಿಂದೆ ಪಟೇಲ್ ಪ್ರತಿಮೆ ಅನಾವರಣವಾದಾಗ ಒಂದು ಕಡೆ ದೊಡ್ಡ ಪಟೇಲ್ ಪ್ರತಿಮೆ ಇನ್ನೊಂದು ಕಡೆ ಬಡಕುಟುಂಬ ಹೊಟ್ಟೆಗಿಲ್ಲದೆ ಇರುವ ಫೋಟೊವೊಂದನ್ನು ಫೋಟೊಶಾಪ್ ಮಾಡಲಾಗಿತ್ತು. ಆಗಲೂ ಇದೇ ರೀತಿ ಆ ಫೋಟೊವನ್ನು ಯಾರಾದರೂ ಷೇರ್ ಮಾಡಿದರೆ ಅದು ಫೇಕ್ ಪೋಟೊ ಅಂತ ಬರುತ್ತಿತ್ತು. ಕೆಳಗೆ ಬೂಮ್ ಫ್ಯಾಕ್ಟ್ ಚೆಕ್ ಸಹ. ಆಗ ಅದು ಫೋಟೊಶಾಪ್ ಆದ್ದರಿಂದ ಪರವಾಗಿಲ್ಲ ಎನ್ನಬಹುದು. ಆದರೆ ಈಗ ನಿಜ ಫೋಟೊಗೂ ಫೇಕ್ ಎಂದು ಬರುತ್ತಿರುವುದು ಅಕ್ಷಮ್ಯವಾಗಿದೆ.
ಇದರಿಂದ ಫೇಸ್‍ಬುಕ್ ಬಿಜೆಪಿ ಪರವಾಗಿ, ಮೋದಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಹೇಳುತ್ತದೆ. ಏಕೆಂದರೆ ಬಿಜೆಪಿಯ ಸುಳ್ಳುಗಳಿಗೆ ಯಾವುದೇ ಕಡಿವಾಣ ಹಾಕದೇ ಇತರ ಪಕ್ಷಗಳ ಸತ್ಯಗಳನ್ನು ಸಹ ಸುಳ್ಳು ಎಂದು ಹೇಳುವುದು ಯಾವ ರೀತಿ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...