Homeನಿಜವೋ ಸುಳ್ಳೋ‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

ಫೇಸ್‍ಬುಕ್ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೌತಮ್ ಗಂಭೀರ್ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀರಾ ಹೊಸ ವಿವಾದವೆಂದರೆ ಅವರ ಡುಪ್ಲಿಕೇಟ್ ಗಂಭೀರ್ ಪ್ರಕರಣ. ಬಿಸಿಲಿನ ಝಳ ತಡೆಯಲಾರದೇ ಗೌತಮ್ ಕಾರಿನ ಒಳಗೆ ಕುಳಿತಿದ್ದರೆ, ಕಾರಿನ ತೆರೆದ ಮೇಲ್ಭಾಗದಲ್ಲಿ ಗೌತಮ್ ಗಂಭೀರ್‍ನ್ನು ಹೋಲುವ ಇನ್ನೊಬ್ಬ ವ್ಯಕ್ತಿ ಮತಯಾಚನೆ ಮಾಡುತ್ತಿರುವುದು ಫೋಟೊ ಒಂದು ಸೆರೆಯಾಗಿದೆ. ಇದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿರುವುದು ನಿಮಗೆಲ್ಲಾ ಗೊತ್ತೇ ಇದೆ.


ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಜನರು ಆ ಫೋಟೊವನ್ನು ಟ್ವಿಟ್ಟರ್ ಮತ್ತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿ ‘ಬಿಸಿಲಿಗೆ ಹೆದರುವ ಗಂಭೀರ್, ಯಾವ ರೀತಿ ಜನರ ಕಷ್ಟಗಳನ್ನು ಅರಿಯುತ್ತಾರೆ?’ ಎಂದು ವ್ಯಂಗ್ಯವಾಡಿದ್ದರು. ಇದರಿಂದಾಗುವ ಅಪಾಯವನ್ನರಿತ ಬಿಜೆಪಿ ತಕ್ಷಣ ಎಚ್ಚೆತ್ತುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ‘ಸೋಲಿನ ಭಯದಿಂದ ಆಪ್ ಪ್ರತಿದಿನ ನನ್ನ ಮೇಲೆ ಒಂದೊಂದು ಆರೋಪ ಮಾಡುತ್ತದೆ’ ಎಂದು ಆರೋಪಿಸಿದ್ದಾರೆ.

ಈಗ ಅಸಲಿ ವಿಚಾರ ಏನೆಂದರೆ ಯಾರಾದರೂ ಆ ಫೋಟೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದರೆ ಸಾಕು ಕ್ಷಣಾರ್ಧದಲ್ಲಿ ಅದರ ಮೇಲೇಯೇ ಇದು ಫೇಕ್ ಫೋಟೊ ಎಂದು ಬರುತ್ತಿದೆ. ಆ ಪೋಸ್ಟಿನ ಕೆಳಗಡೆಯೇ ರಿಲೇಟೆಡ್ ಆರ್ಟಿಕಲ್ ಎಂದು ಬೂಮ್‍ನವರು ನಡೆಸಿರುವ ಫ್ಯಾಕ್ಟ್ ಚೆಕ್‍ನ ಲಿಂಕ್ ಬರುತ್ತದೆ. ಇದನ್ನು ಬಿಜೆಪಿಯವರು ಫೇಸ್ ಬುಕ್‍ನಿಂದ ಮಾಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಏಳುತ್ತದೆ. ಫೇಸ್‍ಬುಕ್ ಈ ರೀತಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯೇ ಎಂದು ಭಾವನೆ ಬಂದರೆ ಆಶ್ಚರ್ಯವಿಲ್ಲ. ಏಕೆಂದು ತಿಳಿಯಲು ಮುಂದೆ ಓದಿ.


ಆದರೆ ಇದು ಫೇಕ್ ಫೋಟೊ ಅಲ್ಲ. ಅದನ್ನು ತಿಳಿಯಲು ನೀವು ದೂರ ಹೋಗಬೇಕಿಲ್ಲ. ಅದರ ಕೆಳಗಡೆಯೇ ಕೊಟ್ಟಿರುವ ಲಿಂಕ್, ಬೂಮ್ ವೆಬ್‍ಸೈಟ್ ನೋಡಿದರೆ ಸಾಕು. ಬೂಮ್‍ನವರು ಹೇಳಿರುವಂತೆ ಅವರು ಗಂಭೀರ್‍ರವರ ತದ್ರೂಪವಲ್ಲ. ಅವರು ಗಂಭೀರ್‍ರವರ ಗೆಳೆಯ ಗೌರವ್ ಅರೋರ ಆಗಿದ್ದಾರೆ. ದೆಹಲಿಯ ಸ್ಥಳೀಯ ನಾಯಕರಾಗಿರುವ ಅರೋರ ಹಲವು ವರ್ಷಗಳಿಂದ ಗಂಭೀರ್ ಪರ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಈಗ ಇಬ್ಬರೂ ಸಹ ಒಟ್ಟಿಗೆ ರೋಡ್ ಶೋಗಳಲ್ಲಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಆ ವ್ಯಕ್ತಿ ಯಾರು, ಏನು ಕೆಲಸ ಮಾಡುತ್ತಿದ್ದಾನೆ ಎಂಬುದನ್ನು ಬೂಮ್ ಪತ್ತೆ ಹಚ್ಚಿದೆಯೇ ವಿನಃ ಗೌತಮ್ ಗಂಭೀರ್ ಬಿಸಿಲು ತಡೆಯಲಾರದೇ ಕಾರಿನ ಒಳಗೆ ಕೂತಿರುವುದು ಸುಳ್ಳು ಎಂದಾಗಲಿ, ಅದು ಫೋಟೋ ಶಾಪ್ ಫೋಟೊ ಎಂದಾಗಲಿ ಎಲ್ಲಿಯೂ ಹೇಳಿಲ್ಲ.

ಹೀಗಿರುವಾಗ ಬಹಳಷ್ಟು ನೆಟ್ಟಿಗರು ಮಾಡಿರುವ ಟ್ರೋಲ್ ಸರಿಯಾಗಿಯೇ ಇದೆ. ಅವರ್ಯಾರು ಫೋಟೊದಲ್ಲಿರುವ ವ್ಯಕ್ತಿ ಗೌರವ್ ಅರೋರ ಅವರಲ್ಲ ಎಂದು ಹೇಳಿಲ್ಲ. ಗಂಭೀರ್ ಬಿಸಿಲಿಗೆ ಬಾರದೇ ಕಾರಿನಲ್ಲಿ ಕುಳಿತು ಅವರನ್ನು ಹೋಲುವವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಸರಿಯಾಗಿಯೇ ದೂರಿದ್ದಾರೆ. ವಾಸ್ತವದಲ್ಲಿ ಆಪ್ ಪಕ್ಷದವರು ಮೇಲೆ ನಿಂತಿರುವ ವ್ಯಕ್ತಿ ಗೌರವ್ ಅರೋರ ಎಂದೇ ಹೇಳಿದ್ದಾರೆ. ಆದರೂ ಫೇಸ್ ಬುಕ್ ಅದು ಫೇಕ್ ಫೋಟೊ ಅಂತಲೂ, ಅದರ ಮೇಲೆ ಮತ್ತು ಕೆಳಗೆ ಫ್ಯಾಕ್ಟ್ ಚೆಕ್ ಲಿಂಕ್ ಬರುವಂತೆಯೂ ಮಾಡಿದೆ. ಆ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿಗೆ ನೆರವಾಗಿದೆ.

ಹಾಗೇ ನೋಡಿದರೆ ಫೇಕ್ ಫೋಟೊಶಾಪ್‍ಗಳನ್ನು ಶುರುಮಾಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳು ಹರಡಿದ್ದು ಬಿಜೆಪಿಯ ಕಾರ್ಯಕರ್ತರೆ ಎಂಬುದು ಎಲ್ಲರಿಗೂ ಗೊತ್ತಿದೆ. ವಾಟ್ಸಾಪ್ ಯೂನಿವರ್ಸಿಟಿ ಎಂದು ವ್ಯಂಗ್ಯದಿಂದ ಕರೆಸಿಕೊಳ್ಳುವುದನ್ನು ಆರಂಭಿಸಿರುವುದು ಸಹ ಬಿಜೆಪಿಯೇ. ಹೀಗಿರುವಾಗ ಒಂದು ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಅದು ಏನಾದರೂ ಮಾಡಿ ಆ ಸತ್ಯ ಹರಡದಂತೆ ತಡೆಯಲು ಮುಂದಾಗುತ್ತಿದೆ ಎಂಬುದಕ್ಕೆ ಗಂಭೀರ್ ಪ್ರಕರಣ ಒಂದು ಉದಾಹರಣೆ. ಈ ಹಿಂದೆ ಪಟೇಲ್ ಪ್ರತಿಮೆ ಅನಾವರಣವಾದಾಗ ಒಂದು ಕಡೆ ದೊಡ್ಡ ಪಟೇಲ್ ಪ್ರತಿಮೆ ಇನ್ನೊಂದು ಕಡೆ ಬಡಕುಟುಂಬ ಹೊಟ್ಟೆಗಿಲ್ಲದೆ ಇರುವ ಫೋಟೊವೊಂದನ್ನು ಫೋಟೊಶಾಪ್ ಮಾಡಲಾಗಿತ್ತು. ಆಗಲೂ ಇದೇ ರೀತಿ ಆ ಫೋಟೊವನ್ನು ಯಾರಾದರೂ ಷೇರ್ ಮಾಡಿದರೆ ಅದು ಫೇಕ್ ಪೋಟೊ ಅಂತ ಬರುತ್ತಿತ್ತು. ಕೆಳಗೆ ಬೂಮ್ ಫ್ಯಾಕ್ಟ್ ಚೆಕ್ ಸಹ. ಆಗ ಅದು ಫೋಟೊಶಾಪ್ ಆದ್ದರಿಂದ ಪರವಾಗಿಲ್ಲ ಎನ್ನಬಹುದು. ಆದರೆ ಈಗ ನಿಜ ಫೋಟೊಗೂ ಫೇಕ್ ಎಂದು ಬರುತ್ತಿರುವುದು ಅಕ್ಷಮ್ಯವಾಗಿದೆ.
ಇದರಿಂದ ಫೇಸ್‍ಬುಕ್ ಬಿಜೆಪಿ ಪರವಾಗಿ, ಮೋದಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಹೇಳುತ್ತದೆ. ಏಕೆಂದರೆ ಬಿಜೆಪಿಯ ಸುಳ್ಳುಗಳಿಗೆ ಯಾವುದೇ ಕಡಿವಾಣ ಹಾಕದೇ ಇತರ ಪಕ್ಷಗಳ ಸತ್ಯಗಳನ್ನು ಸಹ ಸುಳ್ಳು ಎಂದು ಹೇಳುವುದು ಯಾವ ರೀತಿ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಟಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...