Homeನಿಜವೋ ಸುಳ್ಳೋ‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

ಫೇಸ್‍ಬುಕ್ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೌತಮ್ ಗಂಭೀರ್ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀರಾ ಹೊಸ ವಿವಾದವೆಂದರೆ ಅವರ ಡುಪ್ಲಿಕೇಟ್ ಗಂಭೀರ್ ಪ್ರಕರಣ. ಬಿಸಿಲಿನ ಝಳ ತಡೆಯಲಾರದೇ ಗೌತಮ್ ಕಾರಿನ ಒಳಗೆ ಕುಳಿತಿದ್ದರೆ, ಕಾರಿನ ತೆರೆದ ಮೇಲ್ಭಾಗದಲ್ಲಿ ಗೌತಮ್ ಗಂಭೀರ್‍ನ್ನು ಹೋಲುವ ಇನ್ನೊಬ್ಬ ವ್ಯಕ್ತಿ ಮತಯಾಚನೆ ಮಾಡುತ್ತಿರುವುದು ಫೋಟೊ ಒಂದು ಸೆರೆಯಾಗಿದೆ. ಇದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿರುವುದು ನಿಮಗೆಲ್ಲಾ ಗೊತ್ತೇ ಇದೆ.


ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಜನರು ಆ ಫೋಟೊವನ್ನು ಟ್ವಿಟ್ಟರ್ ಮತ್ತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿ ‘ಬಿಸಿಲಿಗೆ ಹೆದರುವ ಗಂಭೀರ್, ಯಾವ ರೀತಿ ಜನರ ಕಷ್ಟಗಳನ್ನು ಅರಿಯುತ್ತಾರೆ?’ ಎಂದು ವ್ಯಂಗ್ಯವಾಡಿದ್ದರು. ಇದರಿಂದಾಗುವ ಅಪಾಯವನ್ನರಿತ ಬಿಜೆಪಿ ತಕ್ಷಣ ಎಚ್ಚೆತ್ತುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ‘ಸೋಲಿನ ಭಯದಿಂದ ಆಪ್ ಪ್ರತಿದಿನ ನನ್ನ ಮೇಲೆ ಒಂದೊಂದು ಆರೋಪ ಮಾಡುತ್ತದೆ’ ಎಂದು ಆರೋಪಿಸಿದ್ದಾರೆ.

ಈಗ ಅಸಲಿ ವಿಚಾರ ಏನೆಂದರೆ ಯಾರಾದರೂ ಆ ಫೋಟೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದರೆ ಸಾಕು ಕ್ಷಣಾರ್ಧದಲ್ಲಿ ಅದರ ಮೇಲೇಯೇ ಇದು ಫೇಕ್ ಫೋಟೊ ಎಂದು ಬರುತ್ತಿದೆ. ಆ ಪೋಸ್ಟಿನ ಕೆಳಗಡೆಯೇ ರಿಲೇಟೆಡ್ ಆರ್ಟಿಕಲ್ ಎಂದು ಬೂಮ್‍ನವರು ನಡೆಸಿರುವ ಫ್ಯಾಕ್ಟ್ ಚೆಕ್‍ನ ಲಿಂಕ್ ಬರುತ್ತದೆ. ಇದನ್ನು ಬಿಜೆಪಿಯವರು ಫೇಸ್ ಬುಕ್‍ನಿಂದ ಮಾಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಏಳುತ್ತದೆ. ಫೇಸ್‍ಬುಕ್ ಈ ರೀತಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯೇ ಎಂದು ಭಾವನೆ ಬಂದರೆ ಆಶ್ಚರ್ಯವಿಲ್ಲ. ಏಕೆಂದು ತಿಳಿಯಲು ಮುಂದೆ ಓದಿ.


ಆದರೆ ಇದು ಫೇಕ್ ಫೋಟೊ ಅಲ್ಲ. ಅದನ್ನು ತಿಳಿಯಲು ನೀವು ದೂರ ಹೋಗಬೇಕಿಲ್ಲ. ಅದರ ಕೆಳಗಡೆಯೇ ಕೊಟ್ಟಿರುವ ಲಿಂಕ್, ಬೂಮ್ ವೆಬ್‍ಸೈಟ್ ನೋಡಿದರೆ ಸಾಕು. ಬೂಮ್‍ನವರು ಹೇಳಿರುವಂತೆ ಅವರು ಗಂಭೀರ್‍ರವರ ತದ್ರೂಪವಲ್ಲ. ಅವರು ಗಂಭೀರ್‍ರವರ ಗೆಳೆಯ ಗೌರವ್ ಅರೋರ ಆಗಿದ್ದಾರೆ. ದೆಹಲಿಯ ಸ್ಥಳೀಯ ನಾಯಕರಾಗಿರುವ ಅರೋರ ಹಲವು ವರ್ಷಗಳಿಂದ ಗಂಭೀರ್ ಪರ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಈಗ ಇಬ್ಬರೂ ಸಹ ಒಟ್ಟಿಗೆ ರೋಡ್ ಶೋಗಳಲ್ಲಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಆ ವ್ಯಕ್ತಿ ಯಾರು, ಏನು ಕೆಲಸ ಮಾಡುತ್ತಿದ್ದಾನೆ ಎಂಬುದನ್ನು ಬೂಮ್ ಪತ್ತೆ ಹಚ್ಚಿದೆಯೇ ವಿನಃ ಗೌತಮ್ ಗಂಭೀರ್ ಬಿಸಿಲು ತಡೆಯಲಾರದೇ ಕಾರಿನ ಒಳಗೆ ಕೂತಿರುವುದು ಸುಳ್ಳು ಎಂದಾಗಲಿ, ಅದು ಫೋಟೋ ಶಾಪ್ ಫೋಟೊ ಎಂದಾಗಲಿ ಎಲ್ಲಿಯೂ ಹೇಳಿಲ್ಲ.

ಹೀಗಿರುವಾಗ ಬಹಳಷ್ಟು ನೆಟ್ಟಿಗರು ಮಾಡಿರುವ ಟ್ರೋಲ್ ಸರಿಯಾಗಿಯೇ ಇದೆ. ಅವರ್ಯಾರು ಫೋಟೊದಲ್ಲಿರುವ ವ್ಯಕ್ತಿ ಗೌರವ್ ಅರೋರ ಅವರಲ್ಲ ಎಂದು ಹೇಳಿಲ್ಲ. ಗಂಭೀರ್ ಬಿಸಿಲಿಗೆ ಬಾರದೇ ಕಾರಿನಲ್ಲಿ ಕುಳಿತು ಅವರನ್ನು ಹೋಲುವವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಸರಿಯಾಗಿಯೇ ದೂರಿದ್ದಾರೆ. ವಾಸ್ತವದಲ್ಲಿ ಆಪ್ ಪಕ್ಷದವರು ಮೇಲೆ ನಿಂತಿರುವ ವ್ಯಕ್ತಿ ಗೌರವ್ ಅರೋರ ಎಂದೇ ಹೇಳಿದ್ದಾರೆ. ಆದರೂ ಫೇಸ್ ಬುಕ್ ಅದು ಫೇಕ್ ಫೋಟೊ ಅಂತಲೂ, ಅದರ ಮೇಲೆ ಮತ್ತು ಕೆಳಗೆ ಫ್ಯಾಕ್ಟ್ ಚೆಕ್ ಲಿಂಕ್ ಬರುವಂತೆಯೂ ಮಾಡಿದೆ. ಆ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿಗೆ ನೆರವಾಗಿದೆ.

ಹಾಗೇ ನೋಡಿದರೆ ಫೇಕ್ ಫೋಟೊಶಾಪ್‍ಗಳನ್ನು ಶುರುಮಾಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳು ಹರಡಿದ್ದು ಬಿಜೆಪಿಯ ಕಾರ್ಯಕರ್ತರೆ ಎಂಬುದು ಎಲ್ಲರಿಗೂ ಗೊತ್ತಿದೆ. ವಾಟ್ಸಾಪ್ ಯೂನಿವರ್ಸಿಟಿ ಎಂದು ವ್ಯಂಗ್ಯದಿಂದ ಕರೆಸಿಕೊಳ್ಳುವುದನ್ನು ಆರಂಭಿಸಿರುವುದು ಸಹ ಬಿಜೆಪಿಯೇ. ಹೀಗಿರುವಾಗ ಒಂದು ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಅದು ಏನಾದರೂ ಮಾಡಿ ಆ ಸತ್ಯ ಹರಡದಂತೆ ತಡೆಯಲು ಮುಂದಾಗುತ್ತಿದೆ ಎಂಬುದಕ್ಕೆ ಗಂಭೀರ್ ಪ್ರಕರಣ ಒಂದು ಉದಾಹರಣೆ. ಈ ಹಿಂದೆ ಪಟೇಲ್ ಪ್ರತಿಮೆ ಅನಾವರಣವಾದಾಗ ಒಂದು ಕಡೆ ದೊಡ್ಡ ಪಟೇಲ್ ಪ್ರತಿಮೆ ಇನ್ನೊಂದು ಕಡೆ ಬಡಕುಟುಂಬ ಹೊಟ್ಟೆಗಿಲ್ಲದೆ ಇರುವ ಫೋಟೊವೊಂದನ್ನು ಫೋಟೊಶಾಪ್ ಮಾಡಲಾಗಿತ್ತು. ಆಗಲೂ ಇದೇ ರೀತಿ ಆ ಫೋಟೊವನ್ನು ಯಾರಾದರೂ ಷೇರ್ ಮಾಡಿದರೆ ಅದು ಫೇಕ್ ಪೋಟೊ ಅಂತ ಬರುತ್ತಿತ್ತು. ಕೆಳಗೆ ಬೂಮ್ ಫ್ಯಾಕ್ಟ್ ಚೆಕ್ ಸಹ. ಆಗ ಅದು ಫೋಟೊಶಾಪ್ ಆದ್ದರಿಂದ ಪರವಾಗಿಲ್ಲ ಎನ್ನಬಹುದು. ಆದರೆ ಈಗ ನಿಜ ಫೋಟೊಗೂ ಫೇಕ್ ಎಂದು ಬರುತ್ತಿರುವುದು ಅಕ್ಷಮ್ಯವಾಗಿದೆ.
ಇದರಿಂದ ಫೇಸ್‍ಬುಕ್ ಬಿಜೆಪಿ ಪರವಾಗಿ, ಮೋದಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಹೇಳುತ್ತದೆ. ಏಕೆಂದರೆ ಬಿಜೆಪಿಯ ಸುಳ್ಳುಗಳಿಗೆ ಯಾವುದೇ ಕಡಿವಾಣ ಹಾಕದೇ ಇತರ ಪಕ್ಷಗಳ ಸತ್ಯಗಳನ್ನು ಸಹ ಸುಳ್ಳು ಎಂದು ಹೇಳುವುದು ಯಾವ ರೀತಿ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...