Homeನಿಜವೋ ಸುಳ್ಳೋ‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

‘ಡುಪ್ಲಿಕೇಟ್ ಗಂಭೀರ್’ ಪ್ರಕರಣ: ಸತ್ಯವನ್ನು ಸುಳ್ಳಾಗಿಸಲು ಬಿಜೆಪಿ ಹರಸಾಹಸ

ಫೇಸ್‍ಬುಕ್ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯ

- Advertisement -
- Advertisement -

| ನಾನುಗೌರಿ ಡೆಸ್ಕ್ |

ದೆಹಲಿ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿಯ ಗೌತಮ್ ಗಂಭೀರ್ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀರಾ ಹೊಸ ವಿವಾದವೆಂದರೆ ಅವರ ಡುಪ್ಲಿಕೇಟ್ ಗಂಭೀರ್ ಪ್ರಕರಣ. ಬಿಸಿಲಿನ ಝಳ ತಡೆಯಲಾರದೇ ಗೌತಮ್ ಕಾರಿನ ಒಳಗೆ ಕುಳಿತಿದ್ದರೆ, ಕಾರಿನ ತೆರೆದ ಮೇಲ್ಭಾಗದಲ್ಲಿ ಗೌತಮ್ ಗಂಭೀರ್‍ನ್ನು ಹೋಲುವ ಇನ್ನೊಬ್ಬ ವ್ಯಕ್ತಿ ಮತಯಾಚನೆ ಮಾಡುತ್ತಿರುವುದು ಫೋಟೊ ಒಂದು ಸೆರೆಯಾಗಿದೆ. ಇದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿರುವುದು ನಿಮಗೆಲ್ಲಾ ಗೊತ್ತೇ ಇದೆ.


ಆಮ್ ಆದ್ಮಿ ಪಕ್ಷದ ಮನೀಶ್ ಸಿಸೋಡಿಯಾ ಸೇರಿದಂತೆ ನೂರಾರು ಜನರು ಆ ಫೋಟೊವನ್ನು ಟ್ವಿಟ್ಟರ್ ಮತ್ತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿ ‘ಬಿಸಿಲಿಗೆ ಹೆದರುವ ಗಂಭೀರ್, ಯಾವ ರೀತಿ ಜನರ ಕಷ್ಟಗಳನ್ನು ಅರಿಯುತ್ತಾರೆ?’ ಎಂದು ವ್ಯಂಗ್ಯವಾಡಿದ್ದರು. ಇದರಿಂದಾಗುವ ಅಪಾಯವನ್ನರಿತ ಬಿಜೆಪಿ ತಕ್ಷಣ ಎಚ್ಚೆತ್ತುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್ ‘ಸೋಲಿನ ಭಯದಿಂದ ಆಪ್ ಪ್ರತಿದಿನ ನನ್ನ ಮೇಲೆ ಒಂದೊಂದು ಆರೋಪ ಮಾಡುತ್ತದೆ’ ಎಂದು ಆರೋಪಿಸಿದ್ದಾರೆ.

ಈಗ ಅಸಲಿ ವಿಚಾರ ಏನೆಂದರೆ ಯಾರಾದರೂ ಆ ಫೋಟೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದರೆ ಸಾಕು ಕ್ಷಣಾರ್ಧದಲ್ಲಿ ಅದರ ಮೇಲೇಯೇ ಇದು ಫೇಕ್ ಫೋಟೊ ಎಂದು ಬರುತ್ತಿದೆ. ಆ ಪೋಸ್ಟಿನ ಕೆಳಗಡೆಯೇ ರಿಲೇಟೆಡ್ ಆರ್ಟಿಕಲ್ ಎಂದು ಬೂಮ್‍ನವರು ನಡೆಸಿರುವ ಫ್ಯಾಕ್ಟ್ ಚೆಕ್‍ನ ಲಿಂಕ್ ಬರುತ್ತದೆ. ಇದನ್ನು ಬಿಜೆಪಿಯವರು ಫೇಸ್ ಬುಕ್‍ನಿಂದ ಮಾಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಏಳುತ್ತದೆ. ಫೇಸ್‍ಬುಕ್ ಈ ರೀತಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆಯೇ ಎಂದು ಭಾವನೆ ಬಂದರೆ ಆಶ್ಚರ್ಯವಿಲ್ಲ. ಏಕೆಂದು ತಿಳಿಯಲು ಮುಂದೆ ಓದಿ.


ಆದರೆ ಇದು ಫೇಕ್ ಫೋಟೊ ಅಲ್ಲ. ಅದನ್ನು ತಿಳಿಯಲು ನೀವು ದೂರ ಹೋಗಬೇಕಿಲ್ಲ. ಅದರ ಕೆಳಗಡೆಯೇ ಕೊಟ್ಟಿರುವ ಲಿಂಕ್, ಬೂಮ್ ವೆಬ್‍ಸೈಟ್ ನೋಡಿದರೆ ಸಾಕು. ಬೂಮ್‍ನವರು ಹೇಳಿರುವಂತೆ ಅವರು ಗಂಭೀರ್‍ರವರ ತದ್ರೂಪವಲ್ಲ. ಅವರು ಗಂಭೀರ್‍ರವರ ಗೆಳೆಯ ಗೌರವ್ ಅರೋರ ಆಗಿದ್ದಾರೆ. ದೆಹಲಿಯ ಸ್ಥಳೀಯ ನಾಯಕರಾಗಿರುವ ಅರೋರ ಹಲವು ವರ್ಷಗಳಿಂದ ಗಂಭೀರ್ ಪರ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು ಈಗ ಇಬ್ಬರೂ ಸಹ ಒಟ್ಟಿಗೆ ರೋಡ್ ಶೋಗಳಲ್ಲಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಆ ವ್ಯಕ್ತಿ ಯಾರು, ಏನು ಕೆಲಸ ಮಾಡುತ್ತಿದ್ದಾನೆ ಎಂಬುದನ್ನು ಬೂಮ್ ಪತ್ತೆ ಹಚ್ಚಿದೆಯೇ ವಿನಃ ಗೌತಮ್ ಗಂಭೀರ್ ಬಿಸಿಲು ತಡೆಯಲಾರದೇ ಕಾರಿನ ಒಳಗೆ ಕೂತಿರುವುದು ಸುಳ್ಳು ಎಂದಾಗಲಿ, ಅದು ಫೋಟೋ ಶಾಪ್ ಫೋಟೊ ಎಂದಾಗಲಿ ಎಲ್ಲಿಯೂ ಹೇಳಿಲ್ಲ.

ಹೀಗಿರುವಾಗ ಬಹಳಷ್ಟು ನೆಟ್ಟಿಗರು ಮಾಡಿರುವ ಟ್ರೋಲ್ ಸರಿಯಾಗಿಯೇ ಇದೆ. ಅವರ್ಯಾರು ಫೋಟೊದಲ್ಲಿರುವ ವ್ಯಕ್ತಿ ಗೌರವ್ ಅರೋರ ಅವರಲ್ಲ ಎಂದು ಹೇಳಿಲ್ಲ. ಗಂಭೀರ್ ಬಿಸಿಲಿಗೆ ಬಾರದೇ ಕಾರಿನಲ್ಲಿ ಕುಳಿತು ಅವರನ್ನು ಹೋಲುವವರಿಂದ ಪ್ರಚಾರ ಮಾಡಿಸುತ್ತಿದ್ದಾರೆ ಎಂದು ಸರಿಯಾಗಿಯೇ ದೂರಿದ್ದಾರೆ. ವಾಸ್ತವದಲ್ಲಿ ಆಪ್ ಪಕ್ಷದವರು ಮೇಲೆ ನಿಂತಿರುವ ವ್ಯಕ್ತಿ ಗೌರವ್ ಅರೋರ ಎಂದೇ ಹೇಳಿದ್ದಾರೆ. ಆದರೂ ಫೇಸ್ ಬುಕ್ ಅದು ಫೇಕ್ ಫೋಟೊ ಅಂತಲೂ, ಅದರ ಮೇಲೆ ಮತ್ತು ಕೆಳಗೆ ಫ್ಯಾಕ್ಟ್ ಚೆಕ್ ಲಿಂಕ್ ಬರುವಂತೆಯೂ ಮಾಡಿದೆ. ಆ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಜೆಪಿಗೆ ನೆರವಾಗಿದೆ.

ಹಾಗೇ ನೋಡಿದರೆ ಫೇಕ್ ಫೋಟೊಶಾಪ್‍ಗಳನ್ನು ಶುರುಮಾಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳು ಹರಡಿದ್ದು ಬಿಜೆಪಿಯ ಕಾರ್ಯಕರ್ತರೆ ಎಂಬುದು ಎಲ್ಲರಿಗೂ ಗೊತ್ತಿದೆ. ವಾಟ್ಸಾಪ್ ಯೂನಿವರ್ಸಿಟಿ ಎಂದು ವ್ಯಂಗ್ಯದಿಂದ ಕರೆಸಿಕೊಳ್ಳುವುದನ್ನು ಆರಂಭಿಸಿರುವುದು ಸಹ ಬಿಜೆಪಿಯೇ. ಹೀಗಿರುವಾಗ ಒಂದು ಕಹಿ ಸತ್ಯವನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ದವಿಲ್ಲ. ಅದು ಏನಾದರೂ ಮಾಡಿ ಆ ಸತ್ಯ ಹರಡದಂತೆ ತಡೆಯಲು ಮುಂದಾಗುತ್ತಿದೆ ಎಂಬುದಕ್ಕೆ ಗಂಭೀರ್ ಪ್ರಕರಣ ಒಂದು ಉದಾಹರಣೆ. ಈ ಹಿಂದೆ ಪಟೇಲ್ ಪ್ರತಿಮೆ ಅನಾವರಣವಾದಾಗ ಒಂದು ಕಡೆ ದೊಡ್ಡ ಪಟೇಲ್ ಪ್ರತಿಮೆ ಇನ್ನೊಂದು ಕಡೆ ಬಡಕುಟುಂಬ ಹೊಟ್ಟೆಗಿಲ್ಲದೆ ಇರುವ ಫೋಟೊವೊಂದನ್ನು ಫೋಟೊಶಾಪ್ ಮಾಡಲಾಗಿತ್ತು. ಆಗಲೂ ಇದೇ ರೀತಿ ಆ ಫೋಟೊವನ್ನು ಯಾರಾದರೂ ಷೇರ್ ಮಾಡಿದರೆ ಅದು ಫೇಕ್ ಪೋಟೊ ಅಂತ ಬರುತ್ತಿತ್ತು. ಕೆಳಗೆ ಬೂಮ್ ಫ್ಯಾಕ್ಟ್ ಚೆಕ್ ಸಹ. ಆಗ ಅದು ಫೋಟೊಶಾಪ್ ಆದ್ದರಿಂದ ಪರವಾಗಿಲ್ಲ ಎನ್ನಬಹುದು. ಆದರೆ ಈಗ ನಿಜ ಫೋಟೊಗೂ ಫೇಕ್ ಎಂದು ಬರುತ್ತಿರುವುದು ಅಕ್ಷಮ್ಯವಾಗಿದೆ.
ಇದರಿಂದ ಫೇಸ್‍ಬುಕ್ ಬಿಜೆಪಿ ಪರವಾಗಿ, ಮೋದಿ ಪರವಾಗಿ ಬ್ಯಾಟಿಂಗ್ ಮಾಡುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಹೇಳುತ್ತದೆ. ಏಕೆಂದರೆ ಬಿಜೆಪಿಯ ಸುಳ್ಳುಗಳಿಗೆ ಯಾವುದೇ ಕಡಿವಾಣ ಹಾಕದೇ ಇತರ ಪಕ್ಷಗಳ ಸತ್ಯಗಳನ್ನು ಸಹ ಸುಳ್ಳು ಎಂದು ಹೇಳುವುದು ಯಾವ ರೀತಿ ಸರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...