Homeಕರ್ನಾಟಕಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ರೀತಿ ನಕಲಿ ಪತ್ರವನ್ನು ಸೃಷ್ಟಿಸಲಾಗಿದೆ.

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸೋಲಿನ ಹತಾಶೆಯಲ್ಲಿ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ನೀಡಿದೆ. ಬಿಜೆಪಿಯ ನಕಲಿ ಮೋರ್ಚಾವು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಸರ್ಕಾರಿ ಲೆಟರ್ ಹೆಡ್, ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿದ್ದು ಗಂಭೀರ ಅಪರಾಧ. ಚುನಾವಣಾ ಆಯೋಗ ಹಾಗೂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದವರೆಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದೆ.

ನಕಲಿ ಪತ್ರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯನವರು, “ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಪಕ್ಷ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

ನಕಲಿ ಪತ್ರದಲ್ಲಿ ಏನಿದೆ?

ಕಳೆದ ಮೂರು ವರ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಚುನಾವಣೆ ವರ್ಷದಲ್ಲಿ ಅವಕಾಶ ಸಿಕ್ಕ ಕಡೆ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಪ್ರಯತ್ನ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕಕ್ಕಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ನಡೆದುಕೊಂಡು ಬಂದಿದ್ದೇನೆ. ಪಕ್ಷ ನನಗೆ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಜೀವನಪರ್ಯಂತ ಆಭಾರಿಯಾಗಿರುತ್ತೇನೆ. ಈ ಭಾರಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಅವರ ಕೈ ಬಲಪಡಿಸಬೇಕೆಂಬ ಇಚ್ಛೆ ಅಗಾಧವಾಗಿವೆ.

ಆದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು  ಹಾಗೂ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ.

ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ನೀಡಿದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲಾ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್‌ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.

ಟಿಕೆಟ್ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ನನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.

“ವರುಣಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ದಲಿತರು ನನ್ನ ವಿರುದ್ಧ ತಿರುಗಿ ಬೀಳುವಂತೆ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನವರಿಗೂ ಕೋಟಿ ಕೋಟಿ ಫಂಡಿಂಗ್ ಮಾಡಿದ್ದಾರೆ”- ಹೀಗೆ ನಕಲಿಪತ್ರ ಪುಂಕಾನುಪುಂಕವಾಗಿ ವಿಷಯಗಳನ್ನು ಪೋಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...