Homeಕರ್ನಾಟಕಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ರೀತಿ ನಕಲಿ ಪತ್ರವನ್ನು ಸೃಷ್ಟಿಸಲಾಗಿದೆ.

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸೋಲಿನ ಹತಾಶೆಯಲ್ಲಿ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ನೀಡಿದೆ. ಬಿಜೆಪಿಯ ನಕಲಿ ಮೋರ್ಚಾವು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಸರ್ಕಾರಿ ಲೆಟರ್ ಹೆಡ್, ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿದ್ದು ಗಂಭೀರ ಅಪರಾಧ. ಚುನಾವಣಾ ಆಯೋಗ ಹಾಗೂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದವರೆಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದೆ.

ನಕಲಿ ಪತ್ರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯನವರು, “ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಪಕ್ಷ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

ನಕಲಿ ಪತ್ರದಲ್ಲಿ ಏನಿದೆ?

ಕಳೆದ ಮೂರು ವರ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಚುನಾವಣೆ ವರ್ಷದಲ್ಲಿ ಅವಕಾಶ ಸಿಕ್ಕ ಕಡೆ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಪ್ರಯತ್ನ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕಕ್ಕಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ನಡೆದುಕೊಂಡು ಬಂದಿದ್ದೇನೆ. ಪಕ್ಷ ನನಗೆ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಜೀವನಪರ್ಯಂತ ಆಭಾರಿಯಾಗಿರುತ್ತೇನೆ. ಈ ಭಾರಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಅವರ ಕೈ ಬಲಪಡಿಸಬೇಕೆಂಬ ಇಚ್ಛೆ ಅಗಾಧವಾಗಿವೆ.

ಆದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು  ಹಾಗೂ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ.

ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ನೀಡಿದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲಾ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್‌ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.

ಟಿಕೆಟ್ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ನನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.

“ವರುಣಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ದಲಿತರು ನನ್ನ ವಿರುದ್ಧ ತಿರುಗಿ ಬೀಳುವಂತೆ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನವರಿಗೂ ಕೋಟಿ ಕೋಟಿ ಫಂಡಿಂಗ್ ಮಾಡಿದ್ದಾರೆ”- ಹೀಗೆ ನಕಲಿಪತ್ರ ಪುಂಕಾನುಪುಂಕವಾಗಿ ವಿಷಯಗಳನ್ನು ಪೋಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...