Homeಕರ್ನಾಟಕಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಹೆಸರಲ್ಲಿ ನಕಲಿಪತ್ರ; ಕ್ರಮ ಜರುಗಿಸಲು ಕಾಂಗ್ರೆಸ್ ಆಗ್ರಹ

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ರೀತಿ ನಕಲಿ ಪತ್ರವನ್ನು ಸೃಷ್ಟಿಸಲಾಗಿದೆ.

- Advertisement -
- Advertisement -

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಸೋಲಿನ ಹತಾಶೆಯಲ್ಲಿ ಬಿಜೆಪಿ ತನ್ನ ಫೇಕ್ ಫ್ಯಾಕ್ಟರಿಗೆ ಹೆಚ್ಚಿನ ಕೆಲಸ ನೀಡಿದೆ. ಬಿಜೆಪಿಯ ನಕಲಿ ಮೋರ್ಚಾವು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಸರ್ಕಾರಿ ಲೆಟರ್ ಹೆಡ್, ಹಾಗೂ ಸಿದ್ದರಾಮಯ್ಯನವರ ಸಹಿ ನಕಲು ಮಾಡಿದ್ದು ಗಂಭೀರ ಅಪರಾಧ. ಚುನಾವಣಾ ಆಯೋಗ ಹಾಗೂ ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದವರೆಲ್ಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದೆ.

ನಕಲಿ ಪತ್ರದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯನವರು, “ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಪಕ್ಷ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ, ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮ‌ಕೈಗೊಳ್ಳಲು ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

ನಕಲಿ ಪತ್ರದಲ್ಲಿ ಏನಿದೆ?

ಕಳೆದ ಮೂರು ವರ್ಷದಿಂದ ವಿರೋಧ ಪಕ್ಷದ ನಾಯಕನಾಗಿ ಆಡಳಿತರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಪ್ರಾಮಾಣಿಕವಾಗಿ ಹೋರಾಟ ಮಾಡಿದ್ದೇನೆ. ಅದರಲ್ಲೂ ಚುನಾವಣೆ ವರ್ಷದಲ್ಲಿ ಅವಕಾಶ ಸಿಕ್ಕ ಕಡೆ ಬೊಮ್ಮಾಯಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿರುವ ಪ್ರಯತ್ನ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ವಿರೋಧ ಪಕ್ಷದ ನಾಯಕಕ್ಕಾಗಿ ಪಕ್ಷಕ್ಕಾಗಿ ನಿಷ್ಠೆಯಿಂದ ನಡೆದುಕೊಂಡು ಬಂದಿದ್ದೇನೆ. ಪಕ್ಷ ನನಗೆ ಸ್ಥಾನಮಾನಗಳನ್ನು ನೀಡಿ ಗೌರವಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ನಾನು ಜೀವನಪರ್ಯಂತ ಆಭಾರಿಯಾಗಿರುತ್ತೇನೆ. ಈ ಭಾರಿ ಮತ್ತೊಮ್ಮೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಅವರ ಕೈ ಬಲಪಡಿಸಬೇಕೆಂಬ ಇಚ್ಛೆ ಅಗಾಧವಾಗಿವೆ.

ಆದರೆ ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು  ಹಾಗೂ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ತೀವ್ರ ಅಸಮಾಧಾನವಿದೆ.

ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡ ನೀಡಿದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೇನ್ ಮಾಡಿಕೊಂಡು ಬಂದಿದ್ದೇವೆ. ಡಿ.ಕೆ.ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲಾ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿ.ಕೆ.ಶಿವಕುಮಾರ್‌ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ.

ಟಿಕೆಟ್ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿ.ಕೆ.ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ನನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.

“ವರುಣಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ದಲಿತರು ನನ್ನ ವಿರುದ್ಧ ತಿರುಗಿ ಬೀಳುವಂತೆ ಹಣದ ಹೊಳೆಯನ್ನೇ ಹರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನವರಿಗೂ ಕೋಟಿ ಕೋಟಿ ಫಂಡಿಂಗ್ ಮಾಡಿದ್ದಾರೆ”- ಹೀಗೆ ನಕಲಿಪತ್ರ ಪುಂಕಾನುಪುಂಕವಾಗಿ ವಿಷಯಗಳನ್ನು ಪೋಣಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...