Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...