Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...