Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...