Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...