Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...