Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...