Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...