Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...