Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...