Homeಮುಖಪುಟದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ದುರ್ಗಾ ಪೂಜೆ: ಹಿಂದೂ ಮುಸ್ಲಿಂ ಧಾರ್ಮಿಕ ಸಾಮರಸ್ಯ ಮೆರೆಯುವ ಕಿದಿರ್‌ಪುರ್‌‌ ನಗರ!

ಉತ್ಸವ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ಉತ್ಸವ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿನ ದುರ್ಗಾ ಪೂಜೆ ವೈಭವಕ್ಕೆ ಈ ಬಾರಿ ಕೊರೊನಾ ಸಾಂಕ್ರಾಮಿಕ ತಡೆ ಒಡ್ಡಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ಮಧ್ಯೆ, ಆರ್ಥಿಕತೆ ಕುಸಿದಿರುವ ಸಂದರ್ಭದಲ್ಲಿ ಈ ವರ್ಷ ದುರ್ಗಾ ಪೂಜೆಯು ವಿಭಿನ್ನ ರೀತಿಯ ಅನುಭವಕ್ಕೆ ಸಾಕ್ಷಿಯಾಗಲಿದೆ.

ಕೋಲ್ಕತಾ ಹೊಸ ನಿಯಮಗಳ ಮಧ್ಯೆ ಉತ್ಸವಕ್ಕೆ ಸಜ್ಜಾಗುತ್ತಿದ್ದಂತೆ, ಅಲ್ಲಿನ ಹಳೆಯ ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಒಂದಾದ ಕಿದಿರ್‌ಪುರ್ ತನ್ನ ದೀರ್ಘಕಾಲದ ಸಂಪ್ರದಾಯವಾದ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ಸಜ್ಜಾಗಿದೆ.

ಕಿದಿರ್‌ಪುರದ ಚೆಟ್ಲಾ ಅಗ್ರಾನಿ ಕ್ಲಬ್, ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಮತ್ತು ಮುನ್‌ಶೋಟೊಲಾ ದುರ್ಗೋತ್ಸವ್ ಕ್ಲಬ್ ಸ್ಥಾಪಿಸಿರುವ ಪೆಂಡಾಲ್‌ಗಳು ಈ ಪ್ರದೇಶದ ಮಸೀದಿಗೆ ಅತಿ ಸಮೀಪದಲ್ಲಿಯೇ ಇವೆ. ಎಲ್ಲಾ ಧರ್ಮದ ಜನರು ಇಲ್ಲಿ ದುರ್ಗಾ ಮಾತೆಯ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು.

ಈ ಪ್ರದೇಶದಲ್ಲಿ ಸ್ಥಾಪಿಸಲಾಗುವ ಪೆಂಡಾಲ್‌ಗಳಲ್ಲಿ ಹೆಚ್ಚಿನವರು ಮುಸ್ಲಿಂ ಸಮುದಾಯದವರು. ಇವರೇ ಪೆಂಡಾಲ್‌ಗಳಿಗೆ ಹಣಕಾಸು ನೀಡುವವರಾಗಿದ್ದಾರೆ. ಇಲ್ಲಿ ಸುಮಾರು 80 ವರ್ಷಗಳ ಹಿಂದಿನಿಂದಲೂ ಪೆಂಡಾಲ್‌ಗಳನ್ನು ಸ್ಥಾಪಿಸಲಾಗುತ್ತಿದೆ.

ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಅವರು ನಗರದ ಇಲ್ಲಿನ ಪ್ರಸಿದ್ಧ ಪೆಂಡಾಲ್ ‌ಇತಿಹಾಸವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಪಶ್ಚಿಮ ಬಂಗಾಳದಲ್ಲಿ ಮುಸ್ಲಿಮರು ಕಾಳಿ ದೇವಿಯ ಮೂರ್ತಿ ಸುಟ್ಟರೆ?

“ನಾವು ಇಲ್ಲಿಯವರೆಗೆ ಬರಲು ಮುಖ್ಯ ಕಾರಣ, ಬಾಬಿ (ಟಿಎಂಸಿ ನಾಯಕ) ಎಂದೂ ಕರೆಯಲ್ಪಡುವ ಫಿರಾಜ್ ಹಕೀಮ್. ನಮ್ಮಲ್ಲಿ ಮೊದಲಿಗೆ ನಾಲ್ಕು-ಐದು ಜನರು ಈ ಪೂಜೆ ಪ್ರಾರಂಭಿಸಿದರು. ನಮ್ಮ ನಡುವೆ ಯಾವತ್ತೂ ವ್ಯತ್ಯಾಸಗಳಿರಲಿಲ್ಲ. ಮುಸ್ಲಿಂ ಯಾರು, ಹಿಂದೂ ಯಾರು ಎಂಬ ಬಗ್ಗೆ ನಾವು ಎಂದಿಗೂ ಕಾಳಜಿ ವಹಿಸಲಿಲ್ಲ. ಅವರು ನಮ್ಮ ಆಚರಣೆಯ ಭಾಗವಾಗಿದ್ದಾರೆ, ನಾವು ಅವರ ಆಚರಣೆಯ ದೊಡ್ಡ ಭಾಗವಾಗಿದ್ದೇವೆ” ಎನ್ನುತ್ತಾರೆ.

Munshotola Durgotsav Club’s pandal.
PC: Malini Chakrabarty

‘ಉತ್ಸವ’ ಅಥವಾ ಆಚರಣೆಯ ಕಲ್ಪನೆ ಕೇವಲ ಒಂದು ಸಮುದಾಯಕ್ಕೆ ಸೇರಿಲ್ಲ. ಅದು ದುರ್ಗಾ ಪೂಜೆಯಾಗಲಿ, ಈದ್ ಆಗಿರಲಿ, ಜನರು ಒಟ್ಟಾಗಿ ‘ಉತ್ಸವ’ ಆಚರಿಸಲು ಮಾನವೀಯತೆಯ ಉತ್ಸಾಹದಲ್ಲಿ ಸೇರುತ್ತಾರೆ. ಕೋಮು ಸೌಹಾರ್ದತೆ ಎಷ್ಟು ಮಹತ್ವದ್ದಾಗಿದೆ ಎಂಬುದರ ಸಂಕೇತ ಇದು. ಜಾತಿ ಮತಗಳೆಂದು ದೊಂಬಿ-ಗಲಾಟೆಗಳು ನಡೆಯುತ್ತಿರುವ ಈ ಸಮಯದಲ್ಲಿ ಕೊಲ್ಕಾತ್ತಾ  ಎನು ಮಾಡುತ್ತಿದೆಯೋ ಅದು ಮತ್ತಷ್ಟು ರಾಜ್ಯಗಳಿಗೆ ಮಾದರಿಯಾಗಲಿ ಎಂದು ನಾನು ಆಶಿಸುತ್ತೇನೆ ಎಂದು ಚೆಟ್ಲಾ ಅಗ್ರಾನಿ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಸವ್ಯಸಾಚಿ ರಾಯ್‌ಚೌಧರಿ ಹೇಳುತ್ತಾರೆ.

“ಈ ಪೂಜೆ ಸಮಿತಿಯಲ್ಲಿ ಹೆಚ್ಚಿನ ಜನ ಇರುವುದು ನನ್ನ ಮುಸ್ಲಿಂ ಸಹೋದರರು. ಜೊತೆಗೆ ಕೆಲವು ಹಿಂದೂ ಸಹೋದರರು ಕೂಡ ಇದ್ದಾರೆ. ಈದ್, ದುರ್ಗಾ ಪೂಜೆ ಎರಡನ್ನು ಒಟ್ಟಿಗೆ ಸೇರಿ ಆಚರಿಸಲು ಇಷ್ಟಪಡುತ್ತೇವೆ” ಎಂದು ಕಿದಿರ್‌ಪುರ್ 5 ಸ್ಟಾರ್ ಕ್ಲಬ್ ಎಂಡಿ ನಜೀಮ್ ಹೇಳುತ್ತಾರೆ.

ಒಟ್ಟಾರೆ, ದುರ್ಗಾ ಪೂಜೆ ಇಲ್ಲಿನ ಜನರಲ್ಲಿ ಸಾಂಪ್ರದಾಯಿಕವಾಗಿ ಧಾರ್ಮಿಕ ಸಾಮರಸ್ಯವನ್ನು ಆಚರಿಸಲು ನಡೆಸುವ ಹಬ್ಬವಾಗಿ ಮಾರ್ಪಟ್ಟಿದೆ. ಯಾವುದೇ ಕೋಮುಸಂಘರ್ಷಣೆಗಳು ಇಲ್ಲದೆ ಒಟ್ಟಾಗಿ ಹಬ್ಬ ಆಚರಿಸುವುದು ನಮಗೆ ನೆಮ್ಮದಿ ನೀಡಿದೆ. ನಮ್ಮಲ್ಲಿ ಯಾವುದೇ ಬೇಧಭಾವವಿಲ್ಲ ಎಂದು ಇಲ್ಲಿನ ಜನ ಹೇಳುತ್ತಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...